"ಮೆಕ್ಕೆಜೋಳಕ್ಕೆ ಪ್ರತಿ ಕ್ವಿಂಟಲ್ಗೆ 3000 ರೂಪಾಯಿ ಬೆಂಬಲ ಬೆಲೆಗೆ..."
ಬೆಂಗಳೂರು, ಡಿಸೆಂಬರ್ 04: ಕೇಂದ್ರ ಸರಕಾರ ಮೆಕ್ಕೆ ಜೋಳ ಖರೀದಿಗೆ 2,400 ರೂ. ನಿಗದಿ ಮಾಡಿದೆ. ರಾಜ್ಯ ಸರಕಾರವು ಹೆಚ್ಚುವರಿಯಾಗಿ 600 ರೂ. ಕೊಟ್ಟು 3 ಸಾವಿರ ರೂಪಾಯಿಗೆ ಖರೀದಿಸಬೇಕಿತ್ತು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಆಗ್ರಹಿಸಿದರು.
ರಾಜ್ಯದಲ್ಲಿ ರೈತರು 70 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಬೆಳೆದಿದ್ದಾರೆ. ಇದರ ಕುರಿತು ಚರ್ಚಿಸಿದ್ದೀರಾ? ರೈತರ ಜ್ವಲಂತ ಸಮಸ್ಯೆ ಬಗ್ಗೆ ಚರ್ಚೆ ಮಾಡಿದ್ದೀರಾ? ಎಲ್ಲಿ ನಿಮ್ಮ ಕೃಷಿ ಸಚಿವರು? ಅವರು ನಾಪತ್ತೆ. ತೋಟಗಾರಿಕೆ ಬೆಳೆಗಳ ವಿಷಯವೂ ಚರ್ಚೆ ಆಗುತ್ತಿಲ್ಲ. ಮೆಕ್ಕೆ ಜೋಳ, ಭತ್ತ, ಈರುಳ್ಳಿ ಖರೀದಿ ಕೇಂದ್ರಗಳನ್ನು ತೆರೆಯಬೇಕಾದ ರಾಜ್ಯದ ಕಾಂಗ್ರೆಸ್ ಸರಕಾರವು ವಿಧಾನಸೌಧದ ಮೂರನೇ ಮಹಡಿಯಲ್ಲಿ ಶಾಸಕರ ಖರೀದಿ ಕೇಂದ್ರವನ್ನು ಪ್ರಾರಂಭಿಸಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು ಆರೋಪಿಸಿದ್ದಾರೆ.

ಬ್ರೇಕ್ ಫಾಸ್ಟ್ ಸಭೆಯಲ್ಲಿ ಮುಖ್ಯಮಂತ್ರಿ- ಉಪ ಮುಖ್ಯಮಂತ್ರಿಗಳು ರೈತರ ಸಮಸ್ಯೆ, ಕೇಂದ್ರ ಸರಕಾರ ನಿಗದಿ ಮಾಡಿದ ಕನಿಷ್ಠ ಬೆಂಬಲ ಬೆಲೆ ಕುರಿತು ಚರ್ಚೆ ಮಾಡಿಲ್ಲ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಪಕ್ಷವು ನಾಡಿನ ಪ್ರಜ್ಞಾವಂತ ಮತದಾರರಿಗೆ ಅಪಮಾನ ಮಾಡಿದೆ ಎಂದು ದೂರಿದರು.
ನಾಟಿ ಕೋಳಿ ಸವಿದುದು, ತಟ್ಟೆ ಇಡ್ಲಿ ತಿಂದದ್ದು, ಯಾರು ಬಡಿಸಿದರೆಂಬುದೇ ವರ್ಣರಂಜಿತವಾಗಿ ರಾಷ್ಟ್ರ- ಅಂತರರಾಷ್ಟ್ರ ಮಟ್ಟದ ದೊಡ್ಡ ಸುದ್ದಿಯಾಗಿದೆ ಎಂದ ಅವರು, ರಾಜ್ಯದಲ್ಲಿ 30 ತಿಂಗಳು ಅಧಿಕಾರ ನಡೆಸಿದ ಕಾಂಗ್ರೆಸ್ ಅವಧಿಯಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಜಾಸ್ತಿಯಾಗಿದೆ. ಇದರ ಬಗ್ಗೆ ಚರ್ಚೆ ಮಾಡಿದ್ದೀರಾ ಸಿದ್ದರಾಮಯ್ಯನವರೇ? ಕೃಷಿ ಸಚಿವರು, ತೋಟಗಾರಿಕೆ ಸಚಿವರು ಕಾಣದಂತೆ ಮಾಯವಾಗಿದ್ದಾರಾ ಎಂದು ಪ್ರಶ್ನಿಸಿದರು.
ಸಿಎಂ- ಡಿಸಿಎಂ ಸಂಬಂಧಗಳೇ ಹಳಸಿ ಹೋಗಿದೆ. ಕಾಂಗ್ರೆಸ್ ಜಗಳ ಬೀದಿಗೆ ಬಂದು ನಿಂತಿದೆ. ಹಿಂದೆ ವೀರಪ್ಪ ಮೊಯಿಲಿ ಅವರು ಸಿಎಂ ಆಗಿದ್ದಾಗ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕಪ್- ಸಾಸರ್ ಮೂಲಕ ಹೊಡೆದಾಡಿದ್ದರು. ಈಗ ಕಪ್ ಸಾಸರ್ ಸಂಸ್ಕøತಿ ಇಲ್ಲ; ನಿಮ್ಮಿಂದ ನಿಮ್ಮ ಕಾಂಗ್ರೆಸ್ಸಿನ ಶಾಸಕರಿಗೆ ಚಾಕು, ಚೂರಿ, ಚೈನ್, ಮಚ್ಚು, ಲಾಂಗು ಹಿಡಿದು ಹೊಡೆದಾಡುವ ಸ್ಥಿತಿ ಬಂದಿದೆ ಎಂದು ಎಂ.ಪಿ.ರೇಣುಕಾಚಾರ್ಯ ಅವರು ಟೀಕಿಸಿದರು. ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ಅಧಿಕಾರಿಗಳು ಮಾತು ಕೇಳುತ್ತಿಲ್ಲ. ಇವರು ಸಿಎಂ ಆಗಿರುತ್ತಾರೋ, ಅವರು ಆಗುತ್ತಾರೋ ಎಂಬ ಗೊಂದಲ ಅಧಿಕಾರಿಗಳದು ಎಂದು ವಿಶ್ಲೇಷಿಸಿದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications