ಭಗತ್ ಸಿಂಗ್ ಕುರಿತ ಪಠ್ಯ; ಶಿಕ್ಷಣ ಸಚಿವರ ಸ್ಪಷ್ಟನೆ
ಬೆಂಗಳೂರು, ಮೇ 17: ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಕುರಿತ ಪಾಠಗಳನ್ನು ಪುಸ್ತಕದಿಂದ ಕೈಬಿಟ್ಟು ಆರ್ಎಸ್ಎಸ್ ಸಂಸ್ಥಾಪಕ ಹೆಡಗೆವಾರ್ ಕುರಿತ ಪದ್ಯವನ್ನು ಪಠ್ಯದಲ್ಲಿ ಸೇರಿಸಲಾಗಿದೆ ಎನ್ನುವ ಆರೋಪಕ್ಕೆ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.
10ನೇ ತರಗತಿ ಪಠ್ಯಪುಸ್ತಕದಲ್ಲಿ ಭಗತ್ ಸಿಂಗ್ ಅವರ ಪಠ್ಯ ತೆಗೆದು ಆರ್ಎಸ್ಎಸ್ ಸಂಸ್ಥಾಪಕ ಡಾ.ಕೇಶವ ಬಲಿರಾಮ್ ಹೆಡಗೆವಾರ್ ಪಠ್ಯ ಅಳವಡಿಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದವು.
ವಿವಾದದ ಬಗ್ಗೆ ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಕೂಡ ಸ್ಪಷ್ಟನೆ ನೀಡಿದ್ದರು. "ಭಗತ್ ಸಿಂಗ್ ಪಠ್ಯಪುಸ್ತಕ ತೆಗೆದು ಹೆಡಗೆವಾರ್ ಪಠ್ಯ ಅಳವಡಿಕೆ ಮಾಡಿಲ್ಲ, ಆರೋಪ ಮಾಡುವ ಮೊದಲು ಪಠ್ಯಪುಸ್ತಕ ಓದಲಿ" ಎಂದಿದ್ದರು.
ಇದು ಪಠ್ಯ ಪುಸ್ತಕವೇ ಹೊರತು ನಿಮ್ಮ ಸಂಘದ ಪುಸ್ತಕವಲ್ಲ. ಯಾರೋ ಅಷ್ಟ ವಕ್ರನನ್ನು ಪಠ್ಯ ಪುಸ್ತಕ ಸಮಿತಿಯಲ್ಲಿ ಕೂರಿಸಿದ ಪರಿಣಾಮ ಇದು. ನಿಮ್ಮ ಸಂಘದ ಅಜೆಂಡಾಗಳನ್ನು ಮಕ್ಕಳ ಮೇಲೆ ಹೇರಲು ಹೊರಟಿರುವುದು ನಾಚಿಕೆಗೇಡು. ಸರ್ಕಾರ ಇಂತಹ ಹೊಣೆಗೇಡಿಗಳನ್ನು ಪಠ್ಯ ಪುಸ್ತಕ ಸಮಿತಿಯಿಂದ ಹೊರಗಿಡಲಿ.
— Karnataka Congress (@INCKarnataka) May 17, 2022
ವಿವಾದದ ಬಗ್ಗೆ ಮಂಗಳವಾರ ಕರ್ನಾಟಕ ಶಿಕ್ಷಣ ಇಲಾಖೆ ಅಧಿಕೃತ ಪ್ರಕಟಣೆ ನೀಡಿದ್ದು, ಭಗತ್ ಸಿಂಗ್ ಪಠ್ಯ ತೆಗೆದು ಹೆಡಗೆವಾರ್ ಬಗ್ಗೆ ಪಠ್ಯದಲ್ಲಿ ಸೇರಿಸಿಲ್ಲ ಎಂದು ಸ್ಪಷ್ಟನೆ ನೀಡಿದೆ.
ಶಿಕ್ಷಣ ಇಲಾಖೆಯ ಸ್ಪಷ್ಟನೆ ಏನು?; ಸಮಾಜ ವಿಜ್ಞಾನ ಹಾಗೂ ಭಾಷಾ ಪಠ್ಯಪುಸ್ತಕಗಳಲ್ಲಿದ್ದ ಸೂಕ್ಷ್ಮ ವಿಚಾರಗಳನ್ನು ಪರಿಶೀಲಿಸಲು ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ನೇಮಕ ಮಾಡಲಾಗಿತ್ತು. ಸಮಿತಿಯು 6 ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕಗಳು ಹಾಗೂ 1 ರಿಂದ 10 ನೇ ತರಗತಿ ಕನ್ನಡ ಭಾಷಾ ಪಠ್ಯಪುಸ್ತಕ ಪರಿಷ್ಕರಿಸಿರುತ್ತಾರೆ.

10ನೇ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿದ್ದ 'ಭಗತ್ಸಿಂಗ್' ಗದ್ಯವನ್ನು ಕೈಬಿಟ್ಟು 'ಹೆಡಗೆವಾರ್'ರವರ ಬಗ್ಗೆ ಗದ್ಯ ಸೇರಿಸಲಾಗಿದೆ ಎನ್ನುವ ಸುದ್ದಿ ಸತ್ಯಕ್ಕೆ ದೂರವಾದುದು. ವಾಸ್ತವವಾಗಿ 'ಭಗತ್ಸಿಂಗ್' ಗದ್ಯವನ್ನು ಪಠ್ಯದಿಂದ ಕೈಬಿಟ್ಟಿಲ್ಲ. ಪರಿಷ್ಕರಿಸಿರುವ 10ನೇ ತರಗತಿ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ಇನ್ನೂ ಮುದ್ರಣ ಹಂತದಲ್ಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಕಾಂಗ್ರೆಸ್ ಖಂಡನೆ; ಪಠ್ಯ ಕೈಬಿಟ್ಟಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಬಿಜೆಪಿ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿ ತನ್ನ ಅಧಿಕೃತ ಖಾತೆ ಕರ್ನಾಟಕ ಕಾಂಗ್ರೆಸ್ ಮೂಲಕ ಟ್ವೀಟ್ ಮಾಡಿದೆ. ಇದು ಪಠ್ಯ ಪುಸ್ತಕವೇ ಹೊರತು ನಿಮ್ಮ ಸಂಘದ ಪುಸ್ತಕವಲ್ಲ. ಯಾರನ್ನೋ ಪಠ್ಯ ಪುಸ್ತಕ ಸಮಿತಿಯಲ್ಲಿ ಕೂರಿಸಿದ ಪರಿಣಾಮ ಇದು. ನಿಮ್ಮ ಸಂಘದ ಅಜೆಂಡಾಗಳನ್ನು ಮಕ್ಕಳ ಮೇಲೆ ಹೇರಲು ಹೊರಟಿರುವುದು ನಾಚಿಕೆಗೇಡು. ಸರ್ಕಾರ ಇಂತಹ ಹೊಣೆಗೇಡಿಗಳನ್ನು ಪಠ್ಯ ಪುಸ್ತಕ ಸಮಿತಿಯಿಂದ ಹೊರಗಿಡಲಿ ಎಂದು ಒತ್ತಾಯಿಸಿದೆ.
Dear #CongressFakeNewsFactory
— BJP Karnataka (@BJP4Karnataka) May 17, 2022
ನೀವು ಸುಳ್ಳು ಹೇಳುತ್ತಲೇ ದೇಶ ಆಳಿದವರು. ಅಧಿಕಾರವಿಲ್ಲದಿದ್ದಾಗಲೂ ಸುಳ್ಳನ್ನೇ ಅರುಹುತ್ತಿದ್ದೀರಿ.
ಭಗತ್ ಸಿಂಗ್ ಗದ್ಯಪಾಠವನ್ನು ಪಠ್ಯದಿಂದ ಕೈಬಿಟ್ಟಿಲ್ಲ. ಸುಳ್ಳುಗಳಿಂದ ಚುನಾವಣೆ ಗೆಲ್ಲಲಾಗದು.
ಹಿಂದೂ ವಿರೋಧಿಗಳಾಗಿದ್ದ ಘಜಿನಿ, ಘೋರಿಗಳನ್ನು ಪಠ್ಯದಲ್ಲಿ ಆರಾಧನೆ ಮಾಡಿದ್ದು, ಯಾರನ್ನು ಓಲೈಸಲು? pic.twitter.com/KRGEsOStvc
ವಿವಾದದ ಕುರಿತು ಮತ್ತೊಂದು ಟ್ವೀಟ್ ಮಾಡಿರುವ ಕಾಂಗ್ರೆಸ್ 'ಭಗತ್ ಸಿಂಗ್ ಪಠ್ಯವನ್ನು ಪಠ್ಯಪುಸ್ತಕದಿಂದ ಕೈಬಿಟ್ಟ ಕ್ರಮ ಈ ಬಿಜೆಪಿ ಸರ್ಕಾರದ ರಾಷ್ಟ್ರಭಕ್ತಿಯ ಮುಖವಾಡವನ್ನು ಕಳಚಿ ಹಾಕಿದೆ. ಬ್ರಿಟೀಷರ ವಿರುದ್ಧ ಹೋರಾಡಿದ ಭಗತ್ ಸಿಂಗ್ ಬದಲು ಬ್ರಿಟೀಷರೊಂದಿಗೆ ಕೈ ಜೋಡಿಸಿದವರ ಪಠ್ಯವನ್ನು ಸೇರಿಸಲಾಗಿದೆ. ಇದು ನಿಜವಾದ ದೇಶದ್ರೋಹಿಗಳ ಕೆಲಸ. ನಿಮ್ಮ ದೇಶದ್ರೋಹ ಜನತೆಗೆ ತಿಳಿಯಲಿದೆ' ಎಂದು ಹೇಳಿದೆ.

ಕಾಂಗ್ರೆಸ್ ಆರೋಪಕ್ಕೆ ಶಿಕ್ಷಣ ಸಚಿವರ ಸ್ಪಷ್ಟನೆ ಬೆನ್ನಲ್ಲೇ ಕರ್ನಾಟಕ ಬಿಜೆಪಿ ತನ್ನ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿದ್ದು, 'ಡಿಯರ್ ಕಾಂಗ್ರೆಸ್ ಫೇಕ್ ನ್ಯೂಸ್ ಫ್ಯಾಕ್ಟರಿ, ನೀವು ಸುಳ್ಳು ಹೇಳುತ್ತಲೇ ದೇಶ ಆಳಿದವರು. ಅಧಿಕಾರವಿಲ್ಲದಿದ್ದಾಗಲೂ ಸುಳ್ಳನ್ನೇ ಅರುಹುತ್ತಿದ್ದೀರಿ. ಭಗತ್ ಸಿಂಗ್ ಗದ್ಯಪಾಠವನ್ನು ಪಠ್ಯದಿಂದ ಕೈಬಿಟ್ಟಿಲ್ಲ. ಸುಳ್ಳುಗಳಿಂದ ಚುನಾವಣೆ ಗೆಲ್ಲಲಾಗದು. ಹಿಂದೂ ವಿರೋಧಿಗಳಾಗಿದ್ದ ಘಜಿನಿ, ಘೋರಿಗಳನ್ನು ಪಠ್ಯದಲ್ಲಿ ಆರಾಧನೆ ಮಾಡಿದ್ದು, ಯಾರನ್ನು ಓಲೈಸಲು?' ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications