Get Updates
Get notified of breaking news, exclusive insights, and must-see stories!

Republic Day 2023 : ಈ ಬಾರಿ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ನಾರಿಶಕ್ತಿ ಪ್ರದರ್ಶನ

ಬೆಂಗಳೂರು, ಜನವರಿ.23: ಗಣರಾಜ್ಯೋತ್ಸವ ಪರೇಡ್‌ನಲ್ಲಿ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕೊನೆಗೂ ಅವಕಾಶ ಸಿಕ್ಕಿದ್ದು, ಈ ಬಾರಿ ನಾಡಿನ ಹಿತಕ್ಕೆ ನಿಸ್ವಾರ್ಥ ಸೇವೆಗೈದ ಆದರ್ಶ ಮಹಿಳೆಯರಿಗೆ ಈ ಸ್ತಬ್ಧಚಿತ್ರವನ್ನು ಸಮರ್ಪಿಸಲಾಗುತ್ತಿದೆ.

ಈ ಬಾರಿಯ ರಾಜ್ಯದ ಸ್ತಬ್ಧಚಿತ್ರ " ನಾರಿ ಶಕ್ತಿ" ಎಂದು ವಿಷಯದಲ್ಲಿದ್ದು, ಇದರಲ್ಲಿ ಪದ್ಮ ಪ್ರಶಸ್ತಿ ಪಡೆದಿರುವ ಮೂವರು ಹೆಮ್ಮೆಯ ಮಹಿಳೆಯರಿದ್ದಾರೆ. ಸ್ತಬ್ಧಚಿತ್ರದಲ್ಲಿ ಸೂಲಗಿತ್ತಿ ನರಸಮ್ಮ, ತುಳಸಿ ಗೌಡ ಹಾಲಕ್ಕಿ ಮತ್ತು ಸಾಲುಮರದ ತಿಮ್ಮಕ್ಕ ಅವರ ಸಾಧನೆಗಳನ್ನು ಪ್ರದರ್ಶಿಸಲಾಗುತ್ತಿದೆ.

ಈ ಹಿಂದೆ ಕರ್ನಾಟಕವು ರಾಗಿ, ಪುಷ್ಪ ಕೃಷಿ, ರೇಷ್ಮೆ ಕೃಷಿ ಮತ್ತು ನಾರಿ ಶಕ್ತಿ ಎಂಬ ನಾಲ್ಕು ಪ್ರಸ್ತಾವನೆಗಳನ್ನು ಕೇಂದ್ರಕ್ಕೆ ಕಳುಹಿಸಿತ್ತು. ಆದರೆ ಸ್ತಬದ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ಬಳಿಕ ಒತ್ತಡದ ಕಾರಣದಿಂದ ಜನವರಿ 12 ರಂದು ಅವಕಾಶ ನೀಡಲಾಗಿದ್ದು, ಈ ಬಾರಿ ಮಹಿಳಾ ಶಕ್ತಿಯನ್ನು ಬಿಂಬಿಸುವ ನಾರಿ ಶಕ್ತಿ ಸ್ತಬ್ಧಚಿತ್ರ ಪ್ರದರ್ಶನವಾಗಲಿದೆ.

Republic Day 2023: Karnataka Tableau To Depict Ideal women who have selflessly served

ಗಣರಾಜ್ಯೋತ್ಸವದ ಪರೇಡ್‌ಗಾಗಿ ಕರ್ನಾಟಕದ ಟ್ಯಾಬ್ಲೋವು ಎಂಟರಿಂದ 10 ದಿನಗಳಲ್ಲಿ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸ್ತಬ್ಧಚಿತ್ರದ ಹೇಳಿಕೆಗಳ ವಿರುದ್ಧ ಕಿಡಿಕಾರಿದ್ದಾರೆ.

"2009 ರಲ್ಲಿ ಕರ್ನಾಟಕವು ಸ್ತಬ್ಧಚಿತ್ರಕ್ಕಾಗಿ ಕಳುಹಿಸಿದ್ದ ಪ್ರಸ್ತಾವನೆಯನ್ನು ಯುಪಿಎ ಸರ್ಕಾರ ತಿರಸ್ಕರಿಸಿತು. ಆದರೆ, ಕಾಂಗ್ರೆಸ್ ನಾಯಕರು ಟ್ಯಾಬ್ಲೋವನ್ನು ಪ್ರದರ್ಶಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿಲ್ಲ. ಅಷ್ಟು ಅಭಿಮಾನ ಇರುವವರು ಒತ್ತಡ ಹೇಳಿ ಸ್ತಬ್ಧಚಿತ್ರಕ್ಕೆ ಸ್ಥಾನ ಪಡೆಯಬಹುದಿತ್ತು. ಆದಾದ ನಂತರ 13 ವರ್ಷಗಳೀಂದ ರಾಜ್ಯದ ಸ್ತಬ್ಧಚಿತ್ರ ಪ್ರದರ್ಶನವಾಗುತ್ತಿದೆ" ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Republic Day 2023: Karnataka Tableau To Depict Ideal women who have selflessly served

ಕಳೆದ ಕೆಲವು ವರ್ಷಗಳಿಂದ ಗಣರಾಜ್ಯೋತ್ಸವದ ಟ್ಯಾಬ್ಲೋ ಸ್ಪರ್ಧೆಯಲ್ಲಿ ರಾಜ್ಯವು ಬಹುಮಾನಗಳನ್ನು ಪಡೆದಿದೆ. ಈ ಬಾರಿ ಬೇರೆ ರಾಜ್ಯಗಳಿಗೆ ಅವಕಾಶ ನೀಡಬೇಕು ಎಂದು ನಮ್ಮ ಸ್ತಬ್ಧಚಿತ್ರವನ್ನು ಆಯ್ಕೆ ಮಾಡಿರಲಿಲ್ಲ. ಆದರೂ, ನಾನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೊತೆ ಮಾತನಾಡಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರೂ ಮಾತನಾಡಿದ್ದಾರೆ. ಈ ನಾರಿ ಶಕ್ತಿ ವಿಷಯವನ್ನಿಟ್ಟುಕೊಂಡು ಎಂಟರಿಂದ 10 ದಿನಗಳಲ್ಲಿ ಸ್ತಬ್ಧಚಿತ್ರ ಸಿದ್ಧಪಡಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ರಕ್ಷಣಾ ಸಚಿವಾಲಯವು ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ಗೆ ಕರ್ನಾಟಕದ ಟ್ಯಾಬ್ಲೋವನ್ನು ಕೈಬಿಟ್ಟಿದೆ ಎಂಬ ವರದಿಗಳು ಬಹಿರಂಗವಾದ ನಂತರ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ವಿರೋಧ ಪಕ್ಷಗಳು ಸೇರಿದಂತೆ ಕನ್ನಡ ಪರ ಸಂಘಟನೆಗಳು, ವಿವಿಧ ವಲಯಗಳು ಆಕ್ರೋಶ ವ್ಯಕ್ತಪಡಿಸಿದ್ದವು.

ಕಳೆದ ಎಂಟು ವರ್ಷಗಳಲ್ಲಿ ಕಡಿಮೆ ಬಾರಿ ಪರೇಡ್‌ನಲ್ಲಿ ಪ್ರದರ್ಶನ ನೀಡಿದ ರಾಜ್ಯಗಳಿಗೆ ಅವಕಾಶಗಳನ್ನು ಒದಗಿಸಲು ಸಚಿವಾಲಯವು ನಿರ್ಧರಿಸಿದ್ದು, ಕರ್ನಾಟಕಕ್ಕೆ ಅವಕಾಶ ನೀಡಿರಲಿಲ್ಲ ಎಂದು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿತ್ತು. 2022 ರಲ್ಲಿ ಬಹುಮಾನಗಳನ್ನು ಗೆದ್ದ ಎಲ್ಲಾ ಮೂರು ರಾಜ್ಯಗಳನ್ನು ಆಯ್ಕೆ ಮಾಡಲಾಗಿಲ್ಲ ಎಂದು ಸರ್ಕಾರ ತಿಳಿಸಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+