BTS2020: ಭರವಸೆ ಮೂಡಿಸಿದ ಕೊರೊನಾ ಲಸಿಕೆ!
ಬೆಂಗಳೂರು, ನ. 22: ಕೊರೊನಾ ವೈರಸ್ ಸೋಂಕಿಗೆ ಪರಿಣಾಮಕಾರಿ ಲಸಿಕೆ ಕಂಡುಹಿಡಿಯುವ ದಿಸೆಯಲ್ಲಿ ಸಂಶೋಧನಾ ಸಂಸ್ಥೆಗಳಿಗೆ ಔಷಧ ತಯಾರಿಕಾ ಕಂಪನಿಗಳ ಸಹಕಾರ ಅಗತ್ಯ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಪ್ರೊ. ರಾಘವನ್ ವರದರಾಜನ್ ಅಭಿಪ್ರಾಯಪಟ್ಟಿದ್ದಾರೆ.
ಸಮ್ಮೇಳನದ ಮೂರನೇ ದಿನವಾದ ಶನಿವಾರ ಕೋವಿಡ್ ಲಸಿಕೆ ಕುರಿತ ವಿಚಾರ ಗೋಷ್ಠಿಯಲ್ಲಿ ಅಭಿಪ್ರಾಯಗಳನ್ನು ಹಂಚಿಕೊಂಡ ಅವರು, ಕೊರೊನಾಕ್ಕೆ ಸಂಬಂಧಪಟ್ಟಂತೆ ಕೆಲವು ಕಂಪನಿಗಳ ಲಸಿಕೆಗಳು ದೊಡ್ಡ ಮಟ್ಟದಲ್ಲಿ ಭರವಸೆ ಮೂಡಿಸಿವೆ; ಆದರೂ ಸಾರ್ವಜನಿಕ ಬಳಕೆಗೆ ಯಾವಾಗ ಲಭ್ಯವಾಗಲಿದೆ ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಮೂಡಿಲ್ಲ. ಈ ನಿಟ್ಟಿನಲ್ಲಿ ಸಂಶೋಧನೆಗಳು ಮುಂದುವರಿದಿವೆ, ಐಐಎಸ್ಸಿ, ಏಮ್ಸ್ ನಂತಹ ಸಂಶೋಧನಾ ಸಂಸ್ಥೆಗಳಿಗೆ ಔಷಧ ತಯಾರಿಕಾ ಕಂಪನಿಗಳು ಸಹಕಾರ ನೀಡುವುದು ಅಗತ್ಯ ಎಂದರು.
ಯಾವುದೇ ಒಂದು ಸಾಂಕ್ರಾಮಿಕ ಕಾಯಿಲೆಗೆ ಲಸಿಕೆ ಕಂಡುಹಿಡಿಯಬೇಕೆಂದರೆ ಹಲವು ವರ್ಷಗಳೇ ಬೇಕಾಗುತ್ತದೆ. ಮಾನವನ ಜೈವಿಕ ವ್ಯವಸ್ಥೆ ಮೇಲೆ ಲಸಿಕೆ ಅಡ್ಡ ಪರಿಣಾಮ ಬೀರುವುದಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಳ್ಳಲು ನಾನಾ ಹಂತದಲ್ಲಿ ಪ್ರಯೋಗಗಳನ್ನು ನಡೆಸಬೇಕಾಗುತ್ತದೆ. ಆದರೆ ಕೋವಿಡ್ ವಿಚಾರಕ್ಕೆ ಬಂದರೆ ಸಂಶೋಧನೆಗಳು ತ್ವರಿತಗತಿಯಲ್ಲಿ ಸಾಗಿವೆ. ಔಷಧ ತಯಾರಿಕಾ ಕಂಪನಿಗಳ ಸಹಭಾಗಿತ್ವದಲ್ಲಿ ಸಂಶೋಧನೆಗಳು ನಡೆದರೆ ಲಸಿಕೆ ಅಭಿವೃದ್ಧಿ ಹಾಗೂ ಉತ್ಪಾದನೆ ಸುಲಭವಾಗಲಿದೆ ಎಂದು ರಾಘವನ್ ವರದರಾಜನ್ ಹೇಳಿದರು.

ಹೆಪಟೈಟಿಸ್-ಬಿ ಗೆ ಲಸಿಕೆ ಅಭಿವೃದ್ಧಿಗೆ ಕಾರಣವಾಗಿದ್ದೇ ಐಐಎಸ್ಸಿ ಸಂಶೋಧನೆ. ಅದೇ ರೀತಿ ರೀಟಾ ವೈರಸ್ ಗೆ ಸಹ ಲಸಿಕೆ ಕಂಡುಹಿಡಿಯಲು ನೆರವಾಗಿದ್ದು ಏಮ್ಸ್ನ ಸಂಶೋಧನೆ. ಈಗ ಕೊರೊನಾ ವೈರಸ್ಗೆ ಭಾರತ್ ಬಯೋಟೆಕ್ನ ಕೊವ್ಯಾಕ್ಸಿನ್, ಆಕ್ಸ್ಫರ್ಡ್ ವಿವಿ ಮತ್ತು ಆಸ್ಟ್ರಾಜೆನಿಕಾ ಕಂಪನಿ ಜಂಟಿಯಾಗಿ ಅಭಿವೃದ್ಧಿ ಪಡಿಸುತ್ತಿರುವ ಲಸಿಕೆಗಳು ಭರವಸೆ ಮೂಡಿಸಿವೆ ಎಂದು ಬಿಲ್ ಅಂಡ್ ಮಿಲಿಂದಾ ಪ್ರತಿಷ್ಠಾನದ ಹಿರಿಯ ಸಲಹೆಗಾರ ಡಾ. ಹರೀಶ್ ಅಯ್ಯರ್ ಹೇಳಿದರು.
ಕೋವಿಡ್ ಲಸಿಕೆ ಪೂರ್ತಿ ಸಿದ್ಧಗೊಂಡಾಗ ಅದರ ಸಂಗ್ರಹ, ಸಾಗಣೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಅದನ್ನು ಹಾಕುವ ವಿಚಾರದಲ್ಲಿ ಸಾಕಷ್ಟು ಸವಾಲುಗಳು ಎದುರಾಗಲಿವೆ ಎಂದು ಅವರು ಅಭಿಪ್ರಾಯಪಟ್ಟರು.

ಎಮೋರಿ ವ್ಯಾಕ್ಸಿನ್ ಸೆಂಟರ್ನ ಪ್ರೊಫೆಸರ್ ಡಾ. ರಾಮರಾವ್ ಅಮಾರಾ ಹಾಗೂ ಎಸ್. ಕೃಷ್ಣಾ ಲ್ಯಾಬ್ನಕ್, ಡಾ. ಅರುಣ್ ಶಂಕರದಾಸ್ ಅವರು ಡೆಂಗೆ ಹಾಗೂ ಕೋವಿಡ್ ಲಸಿಕೆ ಕುರಿತು ಹಲವು ವಿಚಾರಗಳನ್ನು ಹಂಚಿಕೊಂಡರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications