ಬಲಿಜ ಸಮಾಜಕ್ಕೆ ಮೀಸಲಾತಿ ನನ್ನ ದೃಢ ಸಂಕಲ್ಪ – ಸಿದ್ದರಾಮಯ್ಯ
ಬೆಂಗಳೂರು, ಮೇ 30: ರಾಜ್ಯದಲ್ಲಿರುವ ಬಲಿಜ ಸಮಾಜದ ಜನರಿಗೆ ಮೀಸಲಾತಿ ನೀಡುವುದು ನನ್ನ ದೃಢ ಸಂಕಲ್ಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಭಾನುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜನೆಯಾಗಿದ್ದ ರಾಜ್ಯ ಮಟ್ಟದ ಬಲಿಜ ಸಮಾವೇಶ ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡುತ್ತಿದ್ದರು.

ಇದೇ ಸಂದರ್ಭದಲ್ಲಿ ಅವರು, "ಬಲಿಜ ಸಮಾಜ ಸಾಮಾಜಿಕ ಮತ್ತು ಆರ್ಥಿಕವಾಗಿ ಮುಂದೆ ಬರಬೇಕು. ಇದಕ್ಕಾಗಿ ಸಮುದಾಯದ ಜನರು ಶಿಕ್ಷಣ ಪಡೆಯಬೇಕು," ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು, "ಎರಡು ರಾಷ್ಟ್ರೀಯ ಪಕ್ಷಗಳು ಏನು ಮಾಡುತ್ತವೆ ನೋಡುತ್ತೇನೆ. ಒಬ್ಬರು ಕೇಂದ್ರದಲ್ಲಿ, ಇನ್ನೊಬ್ಬರು ರಾಜ್ಯದಲ್ಲಿ ಅಧಿಕಾರದಲ್ಲಿದ್ದಾರೆ. ಇವರಿಂದ ಬಲಿಜ ಸಮುದಾಯಕ್ಕೆ ಯಾವ ಕೊಡುಗೆ ಸಿಗುತ್ತೆ ನೋಡೋಣ," ಎಂದು ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಚಾಟಿ ಬೀಸಿದರು. ಪಿಸಿ ಮೋಹನ್ ನೇತೃತ್ವದಲ್ಲಿ ನಡೆದ ಬಲಿಜ ಸಮಾವೇಶದಲ್ಲಿ ಸಮುದಾಯಕ್ಕೆ ಹಿಂದುಳಿದ ವರ್ಗದಲ್ಲಿ 2A ಮೀಸಲಾತಿ ನೀಡಬೇಕು ಎಂಬ ಒತ್ತಾಯ ಕೇಳಿ ಬಂತು.

ಇನ್ನು ಬಲಿಜ ಸಮುದಾಯದ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಡೇರಿಸಿಲ್ಲ ಎಂದು ಯಡಿಯೂರಪ್ಪ ಆರೋಪಿಸಿದರು. ಬಿಜೆಪಿಯನ್ನು ಅಧಿಕಾರಕ್ಕೆ ತಂದರೆ 24 ಗಂಟೆಗಳೊಳಗೆ ಸಮುದಾಯದ ಬೇಡಿಕೆಗಳನ್ನು ಇಡೇರಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಕರ್ನಾಟಕ ಬಲಿಜ ಮಹಾಸಭಾ ಈ ಬೃಹತ್ ಸಮಾವೇಶವನ್ನು ಆಯೋಜಿಸಿತ್ತು. ಇನ್ನು ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್, ಡಿವಿ ಸದಾನಂದ ಗೌಡ, ಸಂಸದ ಪಿಸಿ ಮೋಹನ್, ನಟಿ ಹಾಗೂ ಶಾಸಕಿ ತಾರಾ ಅನುರಾಧ ಸೇರಿದಂತೆ ಹಲವಾರು ಗಣ್ಯರು ಹಾಜರಿದ್ದರು.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ












Click it and Unblock the Notifications