Get Updates
Get notified of breaking news, exclusive insights, and must-see stories!

ಬಜೆಟ್‌ ಅಧಿವೇಶನದ ಬಳಿಕ ರಾಜ್ಯ ಸಂಪುಟ ಪುನಾರಚನೆ: 8-12 ಮಂತ್ರಿಗಳಿಗೆ ಗೇಟ್‌ಪಾಸ್‌? ಯಾರಿಗೆ ಸಿಗಲಿದೆ ಮಂತ್ರಿಗಿರಿ?

ಬೆಂಗಳೂರು: ಡಿ.ದೇವರಾಜ್ ಅರಸು ಅವರ ದಾಖಲೆಯನ್ನು ಹಿಂದಿಕ್ಕಿ ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಇತಿಹಾಸ ನಿರ್ಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ನಾಯಕತ್ವ ಬದಲಾವಣೆಯಿಂದ ತಪ್ಪಿಸಿಕೊಳ್ಳಲು ಸಚಿವ ಸಂಪುಟ ಪುನಾರಚನೆ ಮಾಡಲು ಮುಂದಾಗಿದ್ದಾರೆ. ರಾಜ್ಯ ಬಜೆಟ್‌ ಬಳಿಕ ಸಚಿವ ಸಂಪುಟ ಪುನಾರಚನೆ ಮಾಡುವ ಮೂಲಕ ತಮ್ಮ ಸ್ಥಾನವನ್ನು ಮತ್ತಷ್ಟು ಬಲಪಡಿಸಿಕೊಳ್ಳಲು ಯೋಜಿಸಿದ್ದಾರೆ ಎಂದು ತಿಳಿದು ಬಂದಿದೆ.

ಅಧಿಕಾರ ಹಂಚಿಕೆಯ ಸೂತ್ರದ ಪ್ರಚಾರ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣೀಟ್ಟಿರುವ ಡಿ ಕೆ ಶಿವಕುಮಾರ್‌, ಹೈಕಮಾಂಡ್‌ ನಾಯಕರ ಭೇಟಿ ಮಾಡಿದ್ರು ಸಹ ಮುಖ್ಯಮಂತ್ರಿ ಸ್ಥಾನದ ಕುರಿತು ಯಾವುದೇ ಚರ್ಚೆಯನ್ನ ನಡೆಸಿಲ್ಲ, ಅಲ್ಲದೇ ಕಾದು ನೋಡುವ ತಂತ್ರಗಾರಿಕೆಯನ್ನ ಅನುಸರಿಸಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಡಿ ಕೆ ಶಿವಕುಮಾರ್‌ ಮನವಿಯನ್ನ ತಳ್ಳಿ ಹಾಕಿದೆ. ಹೀಗಾಗಿ ದೆಹಲಿಯಿಂದ ಬಂದ ಡಿ ಕೆ ಶಿವಕುಮಾರ್‌ ಕಾಲವೇ ಉತ್ತರ ನೀಡಲಿದೆ ಎಂದು ಮಾರ್ಮಿಕವಾಗಿ ಉತ್ತರಿಸಿದ್ರು.

Reshuffle of the state cabinet after the budget session

ಇತ್ತ ರಾಜ್ಯ ಬಜೆಟ್‌ಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ಅಲ್ಲದೇ ಈಗಾಗಲೇ ಸಿದ್ದರಾಮಯ್ಯ ಅವರು ರಾಹುಲ್ ಅವರ ಆಪ್ತ ಸಹಾಯಕ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಸಂಪುಟ ಪುನಾರಚನೆ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ. ಬಜೆಟ್‌ ಅಧಿವೇಶನದ ಬಳಿಕ ಸಂಪುಟ ಪುನಾರಚನೆ ಮಾಡಿದ್ರೆ ಹಲವು ಅಸಮಾಧಾನಿತ ಶಾಸಕರಿಗೆ ಮಂತ್ರಿ ಪದವಿಯನ್ನ ನೀಡುವ ಮೂಲಕ ತನ್ನ ಸ್ಥಾನವನ್ನ ಭದ್ರಪಡಿಸಿಕೊಳ್ಳಲು ಸಿದ್ದರಾಮಯ್ಯ ಪ್ಲಾನ್‌ ನಡೆಸಿದ್ದಾರೆ ಎನ್ನಲಾಗಿದೆ.

ಕೈ ಪಾಳಯದಲ್ಲಿನ ಹಿರಿಯ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟ ಸರ್ಜರಿಗೆ ಕೈ ಹಾಕಲಿದ್ದಾರೆ ಎನ್ನಲಾಗಿದ್ದು, ಇದು ಹಾಲಿ ಸಚಿವರಿಗೆ ನಡುಕ ಹುಟ್ಟಿಸಿದರೆ, ಇತ್ತ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ. ಸರ್ಕಾರದ ಆಡಳಿತಕ್ಕೆ ಚುರುಕು ಮುಟ್ಟಿಸಲು, ಕೆಲ ಸಚಿವರ ಕಾರ್ಯವೈಖರಿಯ ಬಗ್ಗೆ ಇದ್ದ ಅಸಮಾಧಾನವನ್ನು ಹೋಗಲಾಡಿಸಲು ಸಂಪುಟ ಪುನಾರಚನೆ ಅನಿವಾರ್ಯ ಎನ್ನುವ ಸಿದ್ದರಾಮಯ್ಯನವರ ವಾದಕ್ಕೆ ಹೈಕಮಾಂಡ್ ಸಮ್ಮತಿ ಸೂಚಿಸಲಿದೆ.

ಇನ್ನೂ ಬಹುದಿನಗಳಿಂದ ಮಂತ್ರಿಗಿರಿಗಾಗಿ ಕಾದುಕುಳಿತಿದ್ದ ಶಾಸಕರು ಸಚಿವ ಸ್ಥಾನದ ಲಾಬಿ ಗರಿಗೆದರಿದೆ.. ಇತ್ತ ಸಚಿವ ಸಂಪುಟ ಸಣ್ಣಪುಟ್ಟ ಬದಲಾವಣೆಯಲ್ಲ, ಇದೊಂದು ಮೇಜರ್ ಸರ್ಜರಿ. ಹೀಗಾಗಿ ಈ ಬಾರಿ ಕನಿಷ್ಠ 8 ರಿಂದ ಗರಿಷ್ಠ 12 ಹಾಲಿ ಸಚಿವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ 7-8 ಬಾರಿ ಶಾಸಕರಾಗಿ ಆಯ್ಕೆಯಾದ ಹಿರಿಯರನ್ನು ಗೌರವಯುತವಾಗಿ ಕೆಳಗಿಳಿಸಿ, ಅವರಿಗೆ ಪಕ್ಷದಲ್ಲಿ ದೊಡ್ಡ ಜವಾಬ್ದಾರಿ ನೀಡಿ, ಹೊಸ ಮುಖಗಳಿಗೆ, ಯುವಕರಿಗೆ ಅವಕಾಶ ಕಲ್ಪಿಸುವುದು ಹೈಕಮಾಂಡ್‌ನ ಇರಾದೆಯಾಗಿದೆ.

ಯಾರಿಗೆ ಸಿಗಲಿದೆ ಮಂತ್ರಿಗಿರಿ?

* ಬಿ.ಕೆ.ಹರಿಪ್ರಸಾದ್
* ಆರ್‌.ವಿ.ದೇಶಪಾಂಡೆ
* ಸಲೀಂ ಅಹಮದ್
* ನಾಗೇಂದ್ರ
* ಬಸವರಾಜ ರಾಯರೆಡ್ಡಿ
* ಅಪ್ಪಾಜಿ ನಾಡಗೌಡ
* ಲಕ್ಷ್ಮಣ ಸವದಿ
* ರೂಪ ಶಶಿಧರ್
* ತರೀಕೆರೆ ಶ್ರೀನಿವಾಸ್
* ಲೇಔಟ್ ಕೃಷ್ಣಪ್ಪ
* ಟಿ.ಬಿ. ಜಯಚಂದ್ರ
* ರಿಜ್ವಾನ್ ಅರ್ಷದ್ /ಯು.ಟಿ.ಖಾದರ್
* ಕೆ.ಎನ್. ರಾಜಣ್ಣ/ರಘುಮೂರ್ತಿ
* ಶಿವಲಿಂಗೇಗೌಡ/ಎಚ್.ಸಿ. ಬಾಲಕೃಷ್ಣ
* ಪಿ.ಎಂ.ನರೇಂದ್ರ ಸ್ವಾಮಿ/ಶಿವಣ್ಣ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+