ಅಂಬೇಡ್ಕರ್ ಹೆಸರಿನಲ್ಲಿ 125 ವಸತಿ ಶಾಲೆ : ಸಿದ್ದರಾಮಯ್ಯ
ಮೌಢ್ಯ ನಿಷೇಧ ಕಾಯ್ದೆಯನ್ನು ತಮ್ಮ ಸರ್ಕಾರದ ಅವಧಿಯಲ್ಲಿಯೇ ಜಾರಿಗೆ ತರಲಾಗುವುದು ಎಂದು ಸಿದ್ದರಾಮಯ್ಯ ಅವರು ಅಂಬೇಡ್ಕರ್ ಅವರ 125ನೇ ವಾರ್ಷಿಕೋತ್ಸವದಲ್ಲಿ ಹೇಳಿದ್ದಾರೆ.
ಬೆಂಗಳೂರು, ಫೆಬ್ರವರಿ 16 : ಪ್ರತಿ ಹೋಬಳಿಗಳಲ್ಲಿ ವಸತಿ ಶಾಲೆಗಳನ್ನು ನಿರ್ಮಿಸಲು ಸರ್ಕಾರ ಮುಂದಾಗಿದ್ದು, ಪ್ರಸಕ್ತ ವರ್ಷದಲ್ಲಿ ಪ್ರಾರಂಭಿಸಲಾಗುವ 125 ವಸತಿ ಶಾಲೆಗಳಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರನ್ನು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗುರುವಾರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಬಾಬಾಸಾಹೇಬ್ ಅಂಬೇಡ್ಕರ್ ಅವರ 125ನೇ ವರ್ಷಾಚರಣೆಯ ಅಂತಾರಾಷ್ಟ್ರೀಯ ಸಮ್ಮೇಳನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಡಾ: ಬಿ.ಆರ್. ಅಂಬೇಡ್ಕರ್ ಜ್ಞಾನದರ್ಶನ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.
ಎಲ್ಲರಿಗೂ ಸಾಮಾಜಿಕ ನ್ಯಾಯ ದೊರೆಯಬೇಕಾದರೆ ಎಲ್ಲರಿಗೂ ಶಿಕ್ಷಣ ಸಿಗುವುದು ಪ್ರಮುಖವಾಗುತ್ತದೆ. ಆದ್ದರಿಂದ ಮಕ್ಕಳು ಉತ್ತಮವಾಗಿ ಶಿಕ್ಷಣ ಪಡೆಯಲು ಅನುಕೂಲವಾಗುವಂಗತೆ ವಸತಿ ಸೌಲಭ್ಯ ನೀಡಲು ಉದ್ದೇಶಿಸಲಾಗಿದ್ದು, ಪ್ರತಿ ಹೋಬಳಿಗಳಲ್ಲಿ ವಸತಿ ಶಾಲೆಯನ್ನು ತೆರೆಯಲು ಸರ್ಕಾರ ಕ್ರಮ ಕೈಗೊಂಡಿದೆ ಎಂದರು.

ಶೇ.66ರಷ್ಟು ಮಕ್ಕಳಿಗೆ ಸರ್ಕಾರದ ವತಿಯಿಂದ ಶಿಕ್ಷಣವನ್ನು ನೀಡಲಾಗುತ್ತಿದೆ. ಶಿಕ್ಷಣದ ಜೊತೆಗೆ ಜ್ಞಾನವನ್ನು ನೀಡುವುದು ಮುಖ್ಯವಾಗಿದೆ. ಬಸವಣ್ಣ, ಕನಕದಾಸ, ಅಂಬೇಡ್ಕರ್ ಅವರಂತಹ ಮಹಾನ್ ವ್ಯಕ್ತಿಗಳ ಚಿಂತನೆ, ವಿಚಾರಧಾರೆಯನ್ನು ಯುವ ಸಮುದಾಯದವರಿಗೆ ತಿಳಿಸುವ ಮೂಲಕ ಅವರ ಜ್ಞಾನವನ್ನು ಹೆಚ್ಚಿಸಬೇಕು ಎಂದರು.
ಸಾಮಾಜಿಕ ನ್ಯಾಯಕ್ಕೆ ಸಂಬಂಧಪಟ್ಟಂತಹ ಯಾವುದೇ ಕಾರ್ಯಕ್ರಮಗಳಿಗೆ ಅನುದಾನ ನೀಡಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಭರವಸೆ ನೀಡಿದ ಮುಖ್ಯಮಂತ್ರಿ ಅವರು ಮೌಢ್ಯ ನಿಷೇಧ ಕಾಯ್ದೆಯನ್ನು ತಮ್ಮ ಸರ್ಕಾರದ ಅವಧಿಯಲ್ಲಿಯೇ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಉತ್ತಮ ಸಂವಿಧಾನವನ್ನು ರಚನೆ ಮಾಡಿದ್ದರೂ ಅಂಬೇಡ್ಕರ್ ಅವರಿಗೆ ಸಮಾಧಾನವಿರಲಿಲ್ಲ. ಸಂವಿಧಾನದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸಮಾನತೆಯನ್ನು ಹಕ್ಕುಗಳಾಗಿ ಮಾಡಬೇಕಿತ್ತು ಎಂದು ಅವರಿಗೆ ಅನಿಸಿತ್ತು. ಎಲ್ಲಿಯವರೆಗೆ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಇರುವುದೋ ಅಲ್ಲಿಯವರೆಗೆ ಅವರ ಚಿಂತನೆ ಮತ್ತು ಬರಹಗಳು ಅಪ್ರಸ್ತುತವಾಗಿರುತ್ತವೆ ಎಂದರು.

ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಆಂಜನೇಯ ಅವರು, ಅಂಬೇಡ್ಕರ್ ಅವರ 125ನೇ ವರ್ಷಾಚರಣೆಯನ್ನು ವಿಶಿಷ್ಟವಾಗಿ ಆಚರಿಸಬೇಕೆಂಬ ದೃಷ್ಟಿಯಿಂದ ಅಂಬೇಡ್ಕರ್ ಅವರ ಜ್ಞಾನ, ಚಿಂತನೆ ವಿಚಾರವನ್ನು ಆರು ತಿಂಗಳುಗಳ ಕಾಲ ಸುಮಾರು ಎರಡು ಲಕ್ಷ ಯುವ ಸಮುದಾಯಕ್ಕೆ ತಲುಪಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಅಂಬೇಡ್ಕರ್ ಅವರ ವಿಚಾರಧಾರೆ ಕುರಿತ ಪುಸ್ತಕ ಬಿಡುಗಡೆಗೊಳಿಸಿ, ಅಂತಾರಾಷ್ಟ್ರೀಯ ಸಮ್ಮೇಳನಕ್ಕಾಗಿ ತಯಾರಿಸಿರುವ ವೆಬ್ಸೈಟ್ನ್ನು ಮುಖ್ಯಮಂತ್ರಿವರು ಉದ್ಘಾಟಿಸಿದರು.
ಲೋಕೋಪಯೋಗಿ ಸಚಿವ ಡಾ: ಎಚ್.ಸಿ. ಮಹದೇವಪ್ಪ, ನಗರಾಭಿವೃದ್ಧಿ ಸಚಿವ ಆರ್. ರೋಷನ್ಬೇಗ್, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ: ಚಂದ್ರಶೇಖರ ಕಂಬಾರ, ನಿವೃತ್ತ ಐ.ಎ.ಎಸ್. ಅಧಿಕಾರಿ ರಾಜು, ಚಿಂತಕರಾದ ಡಾ: ಮರುಳಸಿದ್ದಪ್ಪ, ಕವಿ ಡಾ: ಸಿದ್ದಲಿಂಗಯ್ಯ, ಕವಿಯತ್ರಿ ಡಾ: ಕೆ. ಷರೀಫಾ, ಹಂಪಿ ವಿಶ್ವವಿದ್ಯಾನಿಲಯದ ಕುಲಪತಿ ಡಾ: ಮಲ್ಲಿಕಾ ಘಂಟಿ, ಡಾ: ಬಿ.ಆರ್. ಅಂಬೇಡ್ಕರ್ ಅಂತಾರಾಷ್ಟ್ರೀಯ ಸಮ್ಮೇಳನ ಸಂಯೋಜನಾ ಸಮಿತಿ ವಿಶೇಷಾಧಿಕಾರಿ ಪ್ರೊ. ಎಸ್. ಜಾಫೆಟ್ ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಿದ್ದರು.
-
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್









Click it and Unblock the Notifications