ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಧಾನಸೌಧ, ವಿಕಾಸಸೌಧಕ್ಕೆ ಮಾಧ್ಯಮಗಳ ನಿರ್ಬಂಧ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 08 : ಕರ್ನಾಟಕ ಸರ್ಕಾರ ಮಾಧ್ಯಮಗಳ ನಿರ್ಬಂಧಕ್ಕೆ ಮುಂದಾಗಿದೆ. ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಇನ್ನು ಮುಂದೆ ಪ್ರವೇಶ ಪಡೆಯಲು ಅನುಮತಿ ಕಡ್ಡಾಯವಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಸೆಪ್ಟೆಂಬರ್ 4ರಂದು ಅಧಿಸೂಚನೆಯೊಂದನ್ನು ಹೊರಡಿಸಿದೆ. ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಇನ್ನು ಮುಂದೆ 150 ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ.

ಮಹೇಂದ್ರ ಮಿಶ್ರಾ ಜಾಗಕ್ಕೆ ಬರನ್ ದಾಸ್: ಟಿವಿ 9ಗೆ ನೂತನ ಸಿಇಓ ನೇಮಕಮಹೇಂದ್ರ ಮಿಶ್ರಾ ಜಾಗಕ್ಕೆ ಬರನ್ ದಾಸ್: ಟಿವಿ 9ಗೆ ನೂತನ ಸಿಇಓ ನೇಮಕ

ವಾರ್ತಾ ಮತ್ತು ಪ್ರಚಾರ ಇಲಾಖೆ ಶಿಫಾರಸು ಮಾಡಿದವರಿಗೆ ಗರಿಷ್ಠ ಒಂದು ವರ್ಷದ ಅವಧಿಗೆ ಪ್ರವೇಶ ಪತ್ರ ನೀಡಲು ತೀರ್ಮಾನಿಸಲಾಗಿದೆ. ಈ ಪತ್ರಕರ್ತರಿಗೆ ಯೆಲ್ಲೊ ಕಾರ್ಡ್ ವಿತರಣೆ ಮಾಡಲಾಗುತ್ತದೆ. ಕಾರ್ಡ್ ಹೊಂದಿರುವವರು ಮಾತ್ರ ಪ್ರವೇಶ ಪಡೆಯಬಹುದಾಗಿದೆ.

ಅತೃಪ್ತರ ಕಾಲೆಳೆದ ದೆಹಲಿ ವಾರ್ತೆ ಜಾಹೀರಾತು, ಏನಿದರ ಹಕೀಕತ್ತುಅತೃಪ್ತರ ಕಾಲೆಳೆದ ದೆಹಲಿ ವಾರ್ತೆ ಜಾಹೀರಾತು, ಏನಿದರ ಹಕೀಕತ್ತು

Vidhana Soudha

ಭದ್ರತೆ ದೃಷ್ಟಿಯಿಂದ ಕೈಗೊಳ್ಳಲಾಗುವ ಸುಧಾರಣಾ ಕ್ರಮದ ಭಾಗವಾಗಿ ಈ ಮಾರ್ಗಸೂಚಿ ಹೊರಡಿಸಲಾಗಿದೆ ಎಂದು ಇಲಾಖೆ ಹೇಳಿದೆ. ಆದರೆ, ಮಾಧ್ಯಮಗಳನ್ನು ದೂರವಿಡುವ ಪ್ರಯತ್ನವನ್ನು ಕರ್ನಾಟಕ ಸರ್ಕಾರ ಮಾಡುತ್ತಿದೆಯೇ? ಎಂಬ ಪ್ರಶ್ನೆ ಎದ್ದಿದೆ.

ಡಿಸ್ಕವರಿ ಚಾನೆಲ್ ಕನ್ನಡದಲ್ಲಿ ಲಭ್ಯಡಿಸ್ಕವರಿ ಚಾನೆಲ್ ಕನ್ನಡದಲ್ಲಿ ಲಭ್ಯ

ವಿಧಾನಸೌಧದ ವಿವಿಧ ಕಚೇರಿಗಳಿಗೆ ದಿನಪತ್ರಿಕೆ, ನಿಯತಕಾಲಿಕೆಗಳನ್ನು ತರುವವರ ಬಗ್ಗೆ ಅಧಿಕಾರಿಗಳು, ಸಚಿವರ ಕಚೇರಿ ಸಿಬ್ಬಂದಿ ಸಂಪೂರ್ಣ ಮಾಹಿತಿ ನೀಡಬೇಕು. ಆಗ ಆರು ತಿಂಗಳ ಅವಧಿಗೆ ಹಳದಿ ಬಣ್ಣದ ಕಾರ್ಡ್ ವಿತರಣೆ ಮಾಡಲಾಗುತ್ತದೆ.

ಮಾಧ್ಯಮ ಪ್ರತಿನಿಧಿಗಳಿಗೆ ಗುರುತಿನ ಚೀಟಿ ನೀಡಬೇಕಾದ ಅಗತ್ಯದ ಬಗ್ಗೆ ವಿವಿಧ ಇಲಾಖೆಗಳು, ನಿಗಮ-ಮಂಡಳಿಗಳಿಂದ ಕೋರಿಕೆ ಬಂದ ಹಿನ್ನಲೆಯಲ್ಲಿ ಪರಿಷ್ಕೃತ ಮಾರ್ಗಸೂಚಿ ಹೊರಡಿಸಲಾಗಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

English summary
Karnataka department of personnel and administrative services issued notification on restrictions on media to Vidhana Soudha and vikasa soudha, Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X