Landslide: ಬೆಂಗಳೂರು-ಮಂಗಳೂರು ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ
ಮಂಗಳೂರು, ಆಗಸ್ಟ್ 22: ಹಾಸನ ಜಿಲ್ಲೆಯ ಸಕಲೇಶಪುರ ಹಾಗೂ ಬಾಳ್ಳುಪೇಟೆ ರೈಲು ನಿಲ್ದಾಣಗಳ ಮಧ್ಯೆ ಕಳೆದ ಆಗಸ್ಟ್ 9ರ ಶುಕ್ರವಾರ ರಾತ್ರಿ ರೈಲು ಹಳಿಗಳ ಮೇಲೆ ಗುಡ್ಡ ಕುಸಿದು ರೈಲು ಸಂಚಾರ ಅಸ್ತವ್ಯಸ್ಥವಾಗಿತ್ತು. ಶನಿವಾರದಿಂದಲೇ ಹಲವು ರೈಲುಗಳ ಸಂಚಾರಕ್ಕೆ ಬ್ರೇಕ್ ಬಿದ್ದಿತ್ತು. ಹತ್ತು ದಿನಗಳ ಬಳಿಕ ರೈಲುಗಳ ಹಳಿಗಳ ಮೇಲಿನ ನಿಲ್ದಾಣಗಳ ಪುನಶ್ಚೇತನ ಕಾಮಗಾರಿ ಪೂರ್ಣಗೊಂಡಿದ್ದು, ಒಂದು ರೈಲು ಬಿಟ್ಟು ಉಳಿದೆಲ್ಲ ರೈಲುಗಳ ಸಂಚಾರ ಪುನಾರಂಭವಾಗಿದೆ.
ಕೆಲವು ದಿನಗಳಿಂದ ವ್ಯಾಪಕ ಮಳೆ ಸುರಿದ ಪರಿಣಾಮ ಗುಡ್ಡ ಕುಸಿದಿತ್ತು. ಇದರಿಂದ ಸಕಲೇಶಪುರ ಮಾರ್ಗವಾಗಿ ಸಂಚರಿಸುವ ರೈಲುಗಳಿಗೆ ಅಡಚಣೆ ಉಂಟಾಗಿತ್ತು. ಪ್ರಯಾಣಿಕರು ಪರದಾಡಬೇಕಾದ ಸ್ಥಿತಿ ಇತ್ತು. ಗುಡ್ಡ ಕುಸಿದ ದಿನ ಆಲೂರಿನಲ್ಲೇ ರೈಲುಗಳ ಸ್ಥಗಿತಗೊಂಡಿದ್ದವು.

ನಂತರ ಹಳಿಗಳ ಮೇಲಿನ ಮಣ್ಣು ತೆರವು ಕಾರ್ಯಾಚರಣೆ ಆರಂಭವಾಗಿ ಸುಮಾರು ಹತ್ತು ದಿನಗಳಲ್ಲಿ ಕೆಲಸ ಮುಗಿದಿದೆ. ಹಳಿಗಳ ಪುನಶ್ಚೇತನ ಕಾರ್ಯ ಪೂರ್ಣಗೊಂಡಿದೆ. ಯಾವುದೇ ಅಡತಡೆ ಇಲ್ಲ ಎಂದು ತಿಳಿಸಿರುವ ಮೈಸೂರು ವಿಭಾಗದ ರೈಲ್ವೆ ಅಧಿಕಾರಿಗಳು, ಕಳೆದ ಸೋಮವಾರ ಸಂಜೆ 4:45ರಿಂದ ನಿಗದಿತ ರೈಲುಗಳು ಇದೇ ಟ್ರ್ಯಾಕ್ ಮೂಲಕ ಸಂಚರಿಸಲು ಆರಂಭಿಸಿವೆ ಎಂದರು.
ಮಂಗಳೂರು ಸೆಂಟ್ರಲ್-ವಿಜಯಪುರ ಎಕ್ಸ್ಪ್ರೆಸ್ ರೈಲು (07378) ಮಾತ್ರ ಆಗಸ್ಟ್ 20 ರಂದು ರದ್ದಾಗಿತ್ತು. ಇನ್ನುಳಿದಂತೆ ಬಹುತೇಕ ಎಲ್ಲ ರೈಲುಗಳು ವೇಳಾಪಟ್ಟಿಯಂತ ಸಂಚಾರ ನಡೆಸಿವೆ. ಸಕಲೇಶಪುರ ಹಾಗೂ ಬಾಳ್ಳುಪೇಟೆ ರೈಲು ನಿಲ್ದಾಣಗಳ ಮಧ್ಯೆ ಯಾವುದೇ ಅಡಚಣೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಹೆದ್ದಾರಿ ರಸ್ತೆ ಅಡಚಣೆ ಬಳಿ ರೈಲು ಸಂಚಾರ ತೊಂದರೆ
ವಿಪರೀತ ಮಳೆಯಿಂದಾಗಿ ಸಕಲೇಶಪುರ ವ್ಯಾಪ್ತಿಯಲ್ಲಿ ಆಗಾಗ ತೊಂದರೆ ಆಗುತ್ತಲೇ ಇರುತ್ತದೆ. ಇಲ್ಲಿ ಮಾತ್ರವಲ್ಲದೇ ಅಂಕೋಲಾ ರಸ್ತೆಯಲ್ಲೂ ಸಹ ಗುಡ್ಡ ಕುಸಿದು ಸಾಕಷ್ಟು ತೊಂದರೆ ಉಂಟು ಮಾಡಿತ್ತು. ಗ್ಯಾಸ್ ಟ್ಯಾಂಕರ್ ನದಿಗೆ ಉರುಳಿದ್ದ ಪರಿಣಾಮ ಗ್ರಾಮಸ್ಥರು ಊರು ಬಿಟ್ಟಿದ್ದರು. ನಿರಂತರ ಕಾರ್ಯಾಚರಣೆ ಮೂಲಕ ಟ್ಯಾಂಕರ್ ಲೀಕ್ ಮಾಡಿ ಲಾರಿ ಹೊರತೆಗೆಯಲಾಯಿತು. ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ಥವಾಯಿತು.
2030ರ ವೇಳೆಗೆ ಬೆಂಗಳೂರಿಗೆ ಸಿಗಲಿದೆ 400 ಕಿಮೀ ವ್ಯಾಪ್ತಿಯ ಮೆಟ್ರೋ, ಉಪನಗರ ರೈಲು ಜಾಲ
ಈ ಹೆದ್ದಾರಿ ಗುಡ್ಡ ಕುಸಿತ ಬೆನ್ನಲ್ಲೆ ಸಕಲೇಶ್ವರ ಬಾಳ್ಳುಪೇಟೆ ರೈಲು ನಿಲ್ದಾಣಗಳ ಮಧ್ಯೆ ಹಳಿಗಳ ಮೇಲೆ ಅಪಾರ ಪ್ರಮಾಣದಲ್ಲಿ ಗುಡ್ಡದ ಮಣ್ಣು ಕುಸಿತ ಬಿದ್ದಿತ್ತು. ಇದೀಗ ಎಲ್ಲ ಸಮಸ್ಯೆ ಪರಿಹಾರವಾಗಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
ಭಾರತೀಯ ರೈಲ್ವೆಯ ಹೊಸ ಹೆಜ್ಜೆ: 12 ಸ್ಲೀಪರ್ ವಂದೇ ಭಾರತ್ ರೈಲುಗಳ ಪರಿಚಯ, ಎಲ್ಲೆಲ್ಲಿ-ಯಾವಾಗ? -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
Vande Bharat Express: ದೇಶದಲ್ಲಿ ವಂದೇ ಭಾರತ್ ರೈಲಿನ ಹವಾ: ಪ್ರಯಾಣಿಕರ ಸಂಖ್ಯೆ ಶೇ.34ರಷ್ಟು ಏರಿಕೆ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್












Click it and Unblock the Notifications