Landslide: ಬೆಂಗಳೂರು-ಮಂಗಳೂರು ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ
ಮಂಗಳೂರು, ಆಗಸ್ಟ್ 22: ಹಾಸನ ಜಿಲ್ಲೆಯ ಸಕಲೇಶಪುರ ಹಾಗೂ ಬಾಳ್ಳುಪೇಟೆ ರೈಲು ನಿಲ್ದಾಣಗಳ ಮಧ್ಯೆ ಕಳೆದ ಆಗಸ್ಟ್ 9ರ ಶುಕ್ರವಾರ ರಾತ್ರಿ ರೈಲು ಹಳಿಗಳ ಮೇಲೆ ಗುಡ್ಡ ಕುಸಿದು ರೈಲು ಸಂಚಾರ ಅಸ್ತವ್ಯಸ್ಥವಾಗಿತ್ತು. ಶನಿವಾರದಿಂದಲೇ ಹಲವು ರೈಲುಗಳ ಸಂಚಾರಕ್ಕೆ ಬ್ರೇಕ್ ಬಿದ್ದಿತ್ತು. ಹತ್ತು ದಿನಗಳ ಬಳಿಕ ರೈಲುಗಳ ಹಳಿಗಳ ಮೇಲಿನ ನಿಲ್ದಾಣಗಳ ಪುನಶ್ಚೇತನ ಕಾಮಗಾರಿ ಪೂರ್ಣಗೊಂಡಿದ್ದು, ಒಂದು ರೈಲು ಬಿಟ್ಟು ಉಳಿದೆಲ್ಲ ರೈಲುಗಳ ಸಂಚಾರ ಪುನಾರಂಭವಾಗಿದೆ.
ಕೆಲವು ದಿನಗಳಿಂದ ವ್ಯಾಪಕ ಮಳೆ ಸುರಿದ ಪರಿಣಾಮ ಗುಡ್ಡ ಕುಸಿದಿತ್ತು. ಇದರಿಂದ ಸಕಲೇಶಪುರ ಮಾರ್ಗವಾಗಿ ಸಂಚರಿಸುವ ರೈಲುಗಳಿಗೆ ಅಡಚಣೆ ಉಂಟಾಗಿತ್ತು. ಪ್ರಯಾಣಿಕರು ಪರದಾಡಬೇಕಾದ ಸ್ಥಿತಿ ಇತ್ತು. ಗುಡ್ಡ ಕುಸಿದ ದಿನ ಆಲೂರಿನಲ್ಲೇ ರೈಲುಗಳ ಸ್ಥಗಿತಗೊಂಡಿದ್ದವು.

ನಂತರ ಹಳಿಗಳ ಮೇಲಿನ ಮಣ್ಣು ತೆರವು ಕಾರ್ಯಾಚರಣೆ ಆರಂಭವಾಗಿ ಸುಮಾರು ಹತ್ತು ದಿನಗಳಲ್ಲಿ ಕೆಲಸ ಮುಗಿದಿದೆ. ಹಳಿಗಳ ಪುನಶ್ಚೇತನ ಕಾರ್ಯ ಪೂರ್ಣಗೊಂಡಿದೆ. ಯಾವುದೇ ಅಡತಡೆ ಇಲ್ಲ ಎಂದು ತಿಳಿಸಿರುವ ಮೈಸೂರು ವಿಭಾಗದ ರೈಲ್ವೆ ಅಧಿಕಾರಿಗಳು, ಕಳೆದ ಸೋಮವಾರ ಸಂಜೆ 4:45ರಿಂದ ನಿಗದಿತ ರೈಲುಗಳು ಇದೇ ಟ್ರ್ಯಾಕ್ ಮೂಲಕ ಸಂಚರಿಸಲು ಆರಂಭಿಸಿವೆ ಎಂದರು.
ಮಂಗಳೂರು ಸೆಂಟ್ರಲ್-ವಿಜಯಪುರ ಎಕ್ಸ್ಪ್ರೆಸ್ ರೈಲು (07378) ಮಾತ್ರ ಆಗಸ್ಟ್ 20 ರಂದು ರದ್ದಾಗಿತ್ತು. ಇನ್ನುಳಿದಂತೆ ಬಹುತೇಕ ಎಲ್ಲ ರೈಲುಗಳು ವೇಳಾಪಟ್ಟಿಯಂತ ಸಂಚಾರ ನಡೆಸಿವೆ. ಸಕಲೇಶಪುರ ಹಾಗೂ ಬಾಳ್ಳುಪೇಟೆ ರೈಲು ನಿಲ್ದಾಣಗಳ ಮಧ್ಯೆ ಯಾವುದೇ ಅಡಚಣೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಹೆದ್ದಾರಿ ರಸ್ತೆ ಅಡಚಣೆ ಬಳಿ ರೈಲು ಸಂಚಾರ ತೊಂದರೆ
ವಿಪರೀತ ಮಳೆಯಿಂದಾಗಿ ಸಕಲೇಶಪುರ ವ್ಯಾಪ್ತಿಯಲ್ಲಿ ಆಗಾಗ ತೊಂದರೆ ಆಗುತ್ತಲೇ ಇರುತ್ತದೆ. ಇಲ್ಲಿ ಮಾತ್ರವಲ್ಲದೇ ಅಂಕೋಲಾ ರಸ್ತೆಯಲ್ಲೂ ಸಹ ಗುಡ್ಡ ಕುಸಿದು ಸಾಕಷ್ಟು ತೊಂದರೆ ಉಂಟು ಮಾಡಿತ್ತು. ಗ್ಯಾಸ್ ಟ್ಯಾಂಕರ್ ನದಿಗೆ ಉರುಳಿದ್ದ ಪರಿಣಾಮ ಗ್ರಾಮಸ್ಥರು ಊರು ಬಿಟ್ಟಿದ್ದರು. ನಿರಂತರ ಕಾರ್ಯಾಚರಣೆ ಮೂಲಕ ಟ್ಯಾಂಕರ್ ಲೀಕ್ ಮಾಡಿ ಲಾರಿ ಹೊರತೆಗೆಯಲಾಯಿತು. ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ಥವಾಯಿತು.
2030ರ ವೇಳೆಗೆ ಬೆಂಗಳೂರಿಗೆ ಸಿಗಲಿದೆ 400 ಕಿಮೀ ವ್ಯಾಪ್ತಿಯ ಮೆಟ್ರೋ, ಉಪನಗರ ರೈಲು ಜಾಲ
ಈ ಹೆದ್ದಾರಿ ಗುಡ್ಡ ಕುಸಿತ ಬೆನ್ನಲ್ಲೆ ಸಕಲೇಶ್ವರ ಬಾಳ್ಳುಪೇಟೆ ರೈಲು ನಿಲ್ದಾಣಗಳ ಮಧ್ಯೆ ಹಳಿಗಳ ಮೇಲೆ ಅಪಾರ ಪ್ರಮಾಣದಲ್ಲಿ ಗುಡ್ಡದ ಮಣ್ಣು ಕುಸಿತ ಬಿದ್ದಿತ್ತು. ಇದೀಗ ಎಲ್ಲ ಸಮಸ್ಯೆ ಪರಿಹಾರವಾಗಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications