KSRTC Employees: ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ಗುಡ್ ನ್ಯೂಸ್: ವೇತನ ಹೆಚ್ಚಿಸಿ ಸರ್ಕಾರ ಆದೇಶ
ಬೆಂಗಳೂರು, ಜೂನ್ 28: ರಾಜ್ಯ ಸರ್ಕಾರ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ಸಾರಿಗೆ ಇಲಾಖೆ ಶುಭ ಸುದ್ದಿ ನೀಡಿದೆ. ಕಾರ್ಮಿಕ ಸಂಘಟನೆಗಳ ಮನವಿಯ ಬೆನ್ನಲ್ಲೇ, ನಿವೃತ್ತಿಯಾದ ನೌಕರರಿಗೂ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದೆ.
ಈ ಹಿಂದೆ ಸಾರಿಗೆ ಸಚಿವರನ್ನು ಭೇಟಿ ಮಾಡಿ ನಮಗೆ ಸದರಿ ಆದೇಶವನ್ನು ಬಿಡುಗಡೆಗೊಳಿಸಬೇಕೆಂದು ಕಾರ್ಮಿಕ ಸಂಘಟನೆಗಳ ಮುಖಂಡರುಗಳು ಮನವಿ ಸಲ್ಲಿಸಿದ್ದರು. ಈ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಮಾರ್ಚ್ ನಲ್ಲಿಯೇ ಭರವಸೆ ನೀಡಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಚುನಾವಣೆ ನೀತಿ ಸಂಹಿತೆ ಕಾರಣ ಬಿಡುಗಡೆಯಾಗದೆ ಉಳಿದಿದ್ದ ಆದೇಶಕ್ಕೆ ಇಂದು ಸಹಿಯಾಗಿದೆ. ನಿವೃತ್ತಿಯಾದ ನೌಕರರಿಗೂ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಪರಿಣಾಮವಾಗಿ 2023ರ ಮಾರ್ಚ್ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ 15 ರಷ್ಟು ಹೆಚ್ಚುವರಿ ವೇತನ ಸಿಗಲಿದೆ.

2023 ರ ಮಾರ್ಚ್ನಲ್ಲಿ ನಿವೃತ್ತಿ ಹೊಂದಿದ ಅಧಿಕಾರಿ ಮತ್ತು ನೌಕರರಿಗೆ 2019 ರ ಡಿಸೆಂಬರ್ 31 ರಂದು ಅವರು ಪಡೆಯುತ್ತಿದ್ದ ಮೂಲವೇತನವನ್ನು ಪರಿಗಣಿಸಿ ಶೇ 15 ರಷ್ಟು ಹೆಚ್ಚಿಸಿ ಅದರಂತೆ ವೇತನ ಶ್ರೇಣಿ ಪರಿಷ್ಕರಿಸಲು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ನಿವೃತ್ತಿಯಾದ ನೌಕರರಿಗೆ ವೇತನ ಪರಿಷ್ಕರಣೆಯ ಹೆಚ್ಚಿಸಿದ ಹಣ ಕೊಡಲು ನಾಲ್ಕು ಸಾರಿಗೆ ನಿಗಮಗಳಿಗೆ ಅಂದಾಜು 220 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. 2023 ರ ಮಾರ್ಚ್ 01 ರಂದು ಸಂಸ್ಥೆಯ ಸೇವೆಯಲ್ಲಿದ್ದ ಅಧಿಕಾರಿ ನೌಕರರಿಗೆ 2020 ರ ಜನವರಿ 1 ರಿಂದ 2023 ರ ಫೆಬ್ರವರಿ 28 ರ ಅವಧಿಯನ್ನು ನೋಷನಲ್ ಆಗಿ ಪರಿಗಣಿಸಿ ವೇತನ ನಿಗದಿಪಡಿಬೇಕು. ಈ ವರ್ಷದ ಕೊನೆಯಲ್ಲಿ ನಿವೃತ್ತಿ ನೌಕರರಿಗೆ ವೇತನ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಆದೇಶ ಪ್ರತಿಯಲ್ಲಿ ಏನಿದೆ?
ಸರ್ಕಾರದ ಆದೇಶ ಸಂಖ್ಯೆ ಟಿ.ಡಿ 12 ಟಿಸಿಬಿ 2023 ಬೆಂಗಳೂರು ದಿನಾಂಕ 17.03.2023 ರಲ್ಲಿ ಅಧಿಕಾರಿ ಮತ್ತು ನೌಕರರು ದಿನಾಂಕ 31.12.2019 ರಂದು ಪಡೆಯುತ್ತಿದ್ದ ಮೂಲವೇತನವನ್ನು ಶೇ.15 ರಷ್ಟು ಹೆಚ್ಚಿಸಿ ಅದರಂತೆ ವೇತನ ಶ್ರೇಣಿಗಳನ್ನು ಪರಿಷ್ಕರಿಸಿ, ದಿನಾಂಕ 01.03.2023 ರಿಂದ ಜಾರಿಗೊಳಿಸಲು ಆದೇಶಿಸಿರುವಂತೆ, ದಿನಾಂಕ 01.03.2023 ರಂದು ಸಂಸ್ಥೆಯ ಸೇವೆಯಲ್ಲಿದ್ದ (On Roll) ಅಧಿಕಾರಿ/ನೌಕರರಿಗೆ ದಿನಾಂಕ 01.01.2020 ರಿಂದ ದಿನಾಂಕ 28.02.2023 ರ ಅವಧಿಯನ್ನು ನೋಷನಲ್ ಆಗಿ ಪರಿಗಣಿಸಿ ವೇತನ ನಿಗದಿಪಡಿಸಿ, ದಿನಾಂಕ 01.03.2023 ರಿಂದ ಜಾರಿಗೊಳಿಸಿ, ಏಪ್ರಿಲ್-2023 ರ ಮಾಹೆಯಿಂದ ಮತ್ತು ಮುಂದಕ್ಕೆ ವೇತನದಲ್ಲಿ ಅನುಷ್ಠಾನಗೊಳಿಸಲು ಹಾಗೂ ಮಾರ್ಚ್-2023 ರ ಮಾಹೆಯ ವ್ಯತ್ಯಾಸವನ್ನು ಏಪ್ರಿಲ್-2023 ರ ಮಾಹೆಯ ವೇತನದೊಂದಿಗೆ ಸೇರಿಸಿ ಪಾವತಿಸಲು ಸುತ್ತೋಲೆ ಸಂಖ್ಯೆ 16/2023 ದಿನಾಂಕ 28.03.2023 ರಲ್ಲಿ ತಿಳಿಸಲಾಗಿತ್ತು.
ಪ್ರಸ್ತುತ ದಿನಾಂಕ 01.01.2020 ರಿಂದ ದಿನಾಂಕ 28.02.2023 ರ ಅವಧಿಯಲ್ಲಿ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಅರ್ಹ ದಿನಾಂಕದವರೆಗೆ ವೇತನವನ್ನು ನೋಷನಲ್ ಆಗಿ ನಿಗದಿಪಡಿಸಲು ಹಾಗೂ ನಿಗದಿಪಡಿಸಿದ ವೇತನವನ್ನು ಅಧಿಕಾರಿ/ನೌಕರನು ಅಂತಿಮ ದಿನಾಂಕದಂದು ಪಡೆಯುತ್ತಿದ್ದ ಮೂಲವೇತನವೆಂದು ಪರಿಗಣಿಸಿ, ಅಂತಿಮ ಆರ್ಥಿಕ ಸೌಲಭ್ಯಗಳಾದ ಉಪದಾನ ಮತ್ತು ನಿವೃತ್ತಿ ಗಳಿಕೆ ರಜೆ ನಗದೀಕರಣಗಳನ್ನು ಮಾತ್ರ ಲೆಕ್ಕಾಚಾರ ಮಾಡಿ ಪಾವತಿಸಲು ಅನುಮೋದನೆ ನೀಡಲಾಗಿದೆ.
ಅದರಂತೆ ದಿನಾಂಕ 01.01.2020 ರಿಂದ ದಿನಾಂಕ 28.02.2023 ರ ಅವಧಿಯಲ್ಲಿ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಅರ್ಹ ದಿನಾಂಕದವರೆಗೆ ಸುತ್ತೋಲೆ ಸಂಖ್ಯೆ 16/23 ರಲ್ಲಿ ತಿಳಿಸಿರುವ ವಿಧಾನಗಳನ್ನು ಅನುಸರಿಸಿ, ಪರಿಷ್ಕೃತ ವೇತನ ನಿಗದಿ (ನೋಷನಲ್ ಆಗಿ) ಪಟ್ಟಿಗಳನ್ನು ದಿನಾಂಕ 31.08.2024 ರೊಳಗಾಗಿ ತಯಾರಿಸಲು ಅಗತ್ಯ ಕ್ರಮಕೈಗೊಳ್ಳುವುದು. ನೋಷನಲ್ ಆಗಿ ನಿಗದಿಪಡಿಸಿದ ಪರಿಷ್ಕೃತ ಮೂಲವೇತನವನ್ನು ಅಂತಿಮ ಆರ್ಥಿಕ ಸೌಲಭ್ಯಗಳಾದ ಉಪದಾನ ಮತ್ತು ನಿವೃತ್ತಿ ಗಳಿಕೆ ರಜೆ ನಗದೀಕರಣಗಳ ವ್ಯತ್ಯಾಸಗಳ ಪಾವತಿಗಾಗಿ ಮಾತ್ರ ಪರಿಗಣಿಸುವುದು.
ಮುಂದುವರೆದು ಅರ್ಹ ಸೇವಾ ವಿಮುಕ್ತ ಅಧಿಕಾರಿ/ನೌಕರರ ಪರಿಷ್ಕೃತ ವೇತನ ನಿಗದಿಯನ್ವಯ ಉಪದಾನ ಮತ್ತು ನಿವೃತ್ತಿ ಗಳಿಕೆ ರಜೆ ನಗದೀಕರಣಗಳ ವ್ಯತ್ಯಾಸಗಳನ್ನು ಲೆಕ್ಕಾಚಾರಗೊಳಿಸಿ, ಗಳಿಕೆ ರಜೆ ನಗದೀಕರಣ ಬಿಲ್ಲಿನಲ್ಲಿ ಶಾಸನ ಬದ್ದ ಕಡಿತಗಳನ್ನು ಹಾಗೂ ಅಧಿಕಾರಿ/ನೌಕರನಿಂದ ಬರಬೇಕಾದ ಯಾವುದೇ ಬಾಕಿ ಮೊತ್ತವಿದ್ದಲ್ಲಿ ಕಡಿತಗೊಳಿಸಿ ಪಾವತಿಸಬೇಕಾದ ನಿವ್ವಳ ಮೊತ್ತದ ಕ್ಲೀಮ್ಗಳನ್ನು ದಿನಾಂಕ 30.09.2024 ರೊಳಗಾಗಿ ಸಿದ್ದಪಡಿಸಿಕೊಳ್ಳಲು ಅಗತ್ಯ ಕ್ರಮಕೈಗೊಳ್ಳುವುದು.
ಕರಾರಸಾ/ಬೆಂಮನಸಾ/ವಾಕರಸಾ/ಕಕರಸಾ ಸಂಸ್ಥೆಗಳು ಉಪದಾನ ಮತ್ತು ನಿವೃತ್ತಿ ಗಳಿಕೆ ರಜೆ ನಗದೀಕರಣಗಳ ವ್ಯತ್ಯಾಸದ ಕ್ಲೀಮ್ಗಳ ಪಾವತಿಯ ಕುರಿತು ಆಯಾ ಸಂಸ್ಥೆಗಳು ಆರ್ಥಿಕ ಪರಿಸ್ಥಿತಿಗನುಗುಣವಾಗಿ ನಿರ್ಧರಿಸಿ, ಸಾಧ್ಯವಾದಲ್ಲಿ 2024-25 ನೇ ಸಾಲಿನ ಆರ್ಥಿಕ ವರ್ಷದಲ್ಲಿ ಪಾವತಿಸಲು ಅಗತ್ಯ ಕ್ರಮಕೈಗೊಳ್ಳುವುದು.
-
ಸರ್ಕಾರ ಸಾಲದ ಮೇಲೆ ನಡೆಯುತ್ತಿದೆ ಎಂಬುದು ಸುಳ್ಳು: ವಿರೋಧ ಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications