ಎಸಿಬಿ ರಚನೆ ರದ್ದು; ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಪ್ರತಿಕ್ರಿಯೆ
ಬೆಂಗಳೂರು, ಆಗಸ್ಟ್ 11: ಎಸಿಬಿ ರಚನೆಯನ್ನು ರದ್ದು ಮಾಡಿದ ಹೈಕೋರ್ಟ್ ಆದೇಶವನ್ನು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಸ್ವಾಗತಿಸಿದ್ದಾರೆ. ಲೋಕಾಯುಕ್ತ ಸಂಸ್ಥೆಯಲ್ಲಿ ಅಧಿಕಾರವನ್ನು ಸ್ವೀಕರಿಸಿದ್ದ ವೇಳೆ ಭ್ರಷ್ಟ ಅಧಿಕಾರಿಗಳು ಮತ್ತು ಭ್ರಷ್ಟ ರಾಜಕಾರಣಿಗಳನ್ನು ಸಾಕ್ಷಿ ಸಹಿತವಾಗಿ ಹಿಡಿದ ಹೆಗ್ಗಳಿಕೆ ಸಂತೋಷ್ ಹೆಗ್ಡೆಯವರಿಗೆ ಸಲ್ಲುತ್ತದೆ.
ಎಸಿಬಿ ರದ್ದುಗೊಳಿಸಿದ ಬಗ್ಗೆ ಸಂತೋಷ ಹೆಗ್ಡೆ ಪ್ರತಿಕ್ರಿಯೆ ನೀಡಿದ್ದು "ಹೈಕೋರ್ಟ್ ಆದೇಶ ನನಗೆ ಬಹಳ ಸಂತೋಷ ತಂದಿದೆ. ಇದು ಉತ್ತಮವಾದ ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ ಲೋಕಾಯುಕ್ತಕ್ಕೆ ಅಧಿಕಾರವನ್ನು ನೀಡಬೇಕು. ಜೊತೆಗೆ ಉತ್ತಮ ಅಧಿಕಾರಿಗಳನ್ನು ಕೂಡ ನೇಮಿಸಬೇಕು" ಎಂದರು.
"ಅಧಿಕಾರಿಗಳ ನೇಮಕದಲ್ಲೂ ಕೂಡ ಸರ್ಕಾರ ತಮಗೆ ಬೇಕಾದ ಅಧಿಕಾರಿಗಳನ್ನು ನೇಮಕ ಮಾಡಬಾರದು.ಲೋಕಾಯುಕ್ತರೇ ತಮಗೆ ಬೇಕಾದ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಬೇಕು ಜೊತೆಗೆ ಲೋಕಾಯುಕ್ತಕ್ಕೆ ಕೇವಲ ಅಧಿಕಾರ ನೀಡೋದಲ್ಲ. ಅದಕ್ಕೆ ಬೇಕಾದ ಸೌಲಭ್ಯಗಳನ್ನು ನೀಡಬೇಕು. ಹಾಗೇ ಲೋಕಾಯುಕ್ತರು ಕೊಟ್ಟ ಜವಾಬ್ದಾರಿ ಚನ್ನಾಗಿ ನಿರ್ವಹಿಸಬೇಕು. ಎಲ್ಲಾ ಅಧಿಕಾರ ಸೌಲಭ್ಯ ವನ್ನು ಕೂಟ್ಟ ನಂತರ ಉತ್ತಮವಾಗಿ ನಿರ್ವಹಿಸಬೇಕು.ಇಲ್ಲವಾದರೆ ನಾನೇ ವಿರೋಧ ಮಾಡುತ್ತೇನೆ" ಎಂದು ಹೇಳಿದರು.

"ಜನರು ಪ್ರತಿಕ್ರಿಯೆಯನ್ನು ಅರ್ಥ ಮಾಡಿಕೊಳ್ಳುತ್ತಾರೆ. ಎಲ್ಲಾ ರಾಜಕೀಯ ಪಕ್ಷಗಳಿಗೆ ಸ್ವಾತಂತ್ರ್ಯವಾದ ತನಿಖಾ ಸಂಸ್ಥೆಗಳು ಬೇಡ ಯಾಕೆ ಸ್ವಾತಂತ್ರ್ಯ ಸಂಸ್ಥೆಗಳು ಜನಸಾಮಾನ್ಯರ ವಿರುದ್ದ ತನಿಖೆಯನ್ನು ಮಾಡುವುದು ಕಡಿಮೆಯಾಗಿ ರಾಜಕಾರಣಿಗಳು ಭ್ರಷ್ಟ ಅಧಿಕಾರಿಗಳ ತನಿಖೆ ಹೆಚ್ಚಾಗುತ್ತದೆ. ಬ್ರಹ್ಮಾಸ್ತ್ರವನ್ನು ಸ್ವಾತಂತ್ರ್ಯ ಸಂಸ್ಥೆಗೆ ನೀಡುಲು ಬಯಸುವುದಿಲ್ಲ" ಎಂದು ಸಂತೋಷ್ ಹೆಗ್ಡೆ ಅಭಿಪ್ರಾಯ ಪಟ್ಟಿದ್ದಾರೆ.

ಲೋಕಾಯಕ್ತ ಸಂಸ್ಥೆಯ ಖದರ್ ಹೆಚ್ಚು ಮಾಡಿದ್ದು ನ್ಯಾ. ಎನ್. ವೆಂಕಟಾಚಲ ಮತ್ತು ಸಂತೋಷ್ ಹೆಗ್ಡೆಯ ಅಧಿಕಾರವಧಿಯಲ್ಲಿ. ಆಗಸ್ಟ್ 3,2006 ರಿಂದ ಆಗಸ್ಟ್ 2, 2011ರವರೆಗೂ ಅಧಿಕಾರವನ್ನು ನಡೆಸಿದ್ದ ಸಂತೋಷ್ ಹೆಗ್ಡೆ ಭ್ರಷ್ಟಾಚಾರಿಗಳನ್ನು ನಡುಗುವಂತೆ ಮಾಡಿದ್ದರು.

ಯಾರಿಗೂ ಹೆದರದೇ ಸ್ವಾತಂತ್ರ್ಯವಾಗಿ ತನಿಖೆಯನ್ನು ನಡೆಸುತ್ತಿದ್ದರು. ಮುಖ್ಯಮಂತ್ರಿ ಆಗಿದ್ದ ಯಡಿಯೂರಪ್ಪ ವಿರುದ್ದವೇ ತನಿಖಾ ವರದಿಯನ್ನು ನೀಡಿದ ಬಳಿಕ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಕ್ಕೆ ಇಳಿಯಬೇಕಾಗಿ ಬಂದಿತ್ತು.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications