ಆ ಶಿಕ್ಷೆ ನೀಡಿದರೆ ಭ್ರಷ್ಟಾಚಾರ ಇರೋದಿಲ್ಲ.. ಸಂತೋಷ್ ಹೆಗ್ಡೆ ಖಡಕ್ ಮಾತು!
ದೇಶದಲ್ಲಿ ಎಲ್ಲೆಡೆ ಭ್ರಷ್ಟಾಚಾರ ಮಿತಿ ಮೀರಿದೆ. ಏನೇ ಮಾಡಿದ್ರೂ ಇದರ ಸದ್ದು ಅಡಗಿಸಲು ಸಾಧ್ಯವೇ ಆಗ್ತಿಲ್ಲ. ಭ್ರಷ್ಟಾಚಾರ ಮುಕ್ತ ಸಮಾಜ ಕಾಣೋದಂತೂ ಕನಸಿನ ಮಾತು ಎಂಬಂತಾಗಿದೆ. ಭ್ರಷ್ಟಾಚಾರ ತಡೆಗೆ ಹಲವು ಇಲಾಖೆಗಳು ಕೆಲಸ ಮಾಡ್ರಿದ್ರೂ ಇದಕ್ಕೆ ಕೊನೆಯೇ ಇಲ್ಲ. ಇನ್ನು ಈ ವಿಚಾರವಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಮಹತ್ವದ ಸಲಹೆಯೊಂದನ್ನ ಕೊಟ್ಟಿದ್ದಾರೆ.
ರಾಜ್ಯದಲ್ಲಿ ಹಾಗೂ ದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಭ್ರಷ್ಟಾಚಾರ ತಡೆಯಬೇಕು ಎಂದರೆ ದೇಶದಲ್ಲಿ ಚೀನಾದಲ್ಲಿರುವ ಶಿಕ್ಷೆಯ ಪದ್ಧತಿ ಜಾರಿಯಾಗಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ರೀತಿ ನಡೆದರೆ ಮಾತ್ರವೇ ಇಲ್ಲಿನ ಭ್ರಷ್ಟಾಚಾರವನ್ನು ಕಿತ್ತೊಗೆಯಲು ಸಾಧ್ಯ ಎಂದು ಹೇಳಿದ್ದಾರೆ.

ಭ್ರಷ್ಟಾಚಾರ ದಿನದಿಂದ ದಿನಕ್ಕೆ ಹೆಮ್ಮರವಾಗಿ ಬೆಳೆಯುತ್ತಿದೆ. ಸದ್ಯ ನಮ್ಮಲ್ಲಿರುವ ವಿಚಾರಣೆ ಪದ್ಧತಿ ಹಾಗೂ ಶಿಕ್ಷೆಗಳಿಗೆ ಯಾವುದೇ ಬೆಲೆ ಇಲ್ಲ ಎನ್ನುವಂತಾಗಿದೆ. ಭ್ರಷ್ಟಾಚಾರಿಗಳಿಗೆ ಗಲ್ಲು ಶಿಕ್ಷೆಯಂತಹ ಕಠಿಣ ಶಿಕ್ಷೆ ನೀಡಿದರೆ ಮಾತ್ರವೇ ದೇಶದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಆಗಲಿದೆ ಎಂದು ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಭ್ರಷ್ಟಾಚಾರ ಮಾಡುವವರಿಗೆ ಶಿಕ್ಷೆಯ ಮೇಲೆ ಭಯವೇ ಇಲ್ಲ. ಮಹಾತ್ಮ ಗಾಂಧಿ ಅವರೇ ಜೈಲಿಗೆ ಹೋಗಿ ಬಂದಿದ್ದಾರೆ, ನಾವು ಹೋಗುವುದರಲ್ಲಿ ತಪ್ಪೇನು? ಎನ್ನುವ ಭಾವನೆ ರಾಜಕಾರಣಿಗಳಲ್ಲಿದೆ. ಜನರಲ್ಲಿ ನೈತಿಕ ಮೌಲ್ಯಗಳು ಮರೆಯಾಗುತ್ತಿವೆ. ಅಪರಾಧ ಪ್ರಕರಣಗಳಲ್ಲಿ ಜೈಲಿಗೆ ಹೋಗಿ ಬರುವವರನ್ನು ಮೆರವಣಿಗೆ ಮಾಡಿ ಸ್ವಾಗತಿಸಲಾಗುತ್ತಿದೆ. ಇದು ಅತ್ಯಂತ ನೋವಿನ ಸಂಗತಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮನುಷ್ಯರಿಗೆ ಆಸೆ ಇರಬೇಕು, ಆದರೆ ಅದನ್ನು ತೀರಾ ಕೆಟ್ಟ ಹಂತಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಉದಾಹರಣೆಗೆ ರಾಜ್ಯದಲ್ಲಿ ಮುಡಾ ಹಗರಣದ ಬಗ್ಗೆ ಖುದ್ದು ಉಚ್ಛ ನ್ಯಾಯಾಲಯವೇ ನಿರ್ದೇಶನ ನೀಡಿದ್ದರೂ ಮೊಂಡುತನ ಎಂಬುದು ನಿಂತಿಲ್ಲ. ಭ್ರಷ್ಟಾಚಾರದಿಂದ ಶ್ರೀಮಂತಿಕೆ ಬರಬಹುದು. ಆದ್ರೆ, ನೆಮ್ಮದಿಯ ಬದುಕು ಸಿಗಲು ಸಾಧ್ಯವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರ ಮುಡಾ ಕೇಸ್ ಅನ್ನು ಪ್ರಸ್ತಾಪಿಸಿದ್ದಾರೆ.
ನಾನು ಈಗಾಗಲೇ ಸಾವಿರಾರು ಕಾಲೇಜುಗಳಿಗೆ ಭೇಟಿ ನೀಡಿದ್ದೇನೆ. ಅಲ್ಲಿನ ಯುವಜನರಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಕುರಿತಾಗಿ ಅವರಲ್ಲಿ ಜಾಗೃತಿ ಮೂಡಿಸಿದ್ದೇನೆ. ಇದರಿಂದ ಸ್ವಲ್ಪಮಟ್ಟಿಗಾದರೂ ಸಮಾಜದಲ್ಲಿ ಬದಲಾವಣೆ ಆಗಬಹುದು.
ಈ ವಿಚಾರದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗಿದ್ದೇ ಆದಲ್ಲಿ, ದೇಶವೇ ಛಿದ್ರಗೊಳ್ಳುತ್ತೆ. ಹಾಗಾಗಿ ಯುವಜನರ ಭಾವನೆಗಳಲ್ಲಿ ಬದಲಾವಣೆ ತರಬೇಕೆಂದು ಈ ಪ್ರಯತ್ನ ನಡೆಸಿದ್ದೇನೆ. ಆದರೆ ಮುಂದಿನ ಭವಿಷ್ಯ ಜನರ ಕೈಯಲ್ಲೇ ಇದೆ ಎಂದು ಸಂತೋಷ್ ಹೆಗ್ಡೆ ಕಿವಿಮಾತು ಹೇಳಿದ್ದಾರೆ.
ಈ ಹಿಂದೆಯೂ ಸಂತೋಷ್ ಹೆಗ್ಡೆ ಅವರು ಭ್ರಷ್ಟಾಚಾರದ ಬಗ್ಗೆ ಹಲವು ವೇದಿಕೆಗಳಲ್ಲಿ ಮಾತನಾಡಿದ್ದಾರೆ. ಭ್ರಷ್ಟ ರಾಜಕಾರಣಿಗಳ ಬಗ್ಗೆಯೂ ಬೇಸರ ವ್ಯಕ್ತಪಡಿಸಿದ್ದಾರೆ. ಎಲ್ಲೆಡೆ ಮಿತಿಮೀರಿರುವ ಭ್ರಷ್ಟಾಚಾರ ನಿರ್ಮೂಲನೆ ಆದರೆ ಮಾತ್ರ ದೇಶ ಉಳಿಯುತ್ತದೆ ಎಂದು ಅವರು ಸಂದೇಶ ರವಾನಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications