KPSC: ಬಡ್ಡಿ ಸೇರಿಸಿ ಕೆಪಿಎಸ್ಸಿ ಪರೀಕ್ಷಾ ಶುಲ್ಕ ವಾಪಸ್ ಕೊಡಿ: ಪಿ.ರಾಜೀವ್
ಬೆಂಗಳೂರು, ಜನವರಿ 02: ಯುಪಿಎಸ್ಸಿ ಪ್ರಾಮಾಣಿಕವಾಗಿ ಪರೀಕ್ಷೆ ನಡೆಸುತ್ತದೆ. ಕೆಪಿಎಸ್ಸಿ ಸೋತು ಹೋಗಿದೆ. ನೀವೇ ಇದರಲ್ಲಿನ ಗೊಂದಲಗಳ ತನಿಖೆ ಮಾಡಿ ಎಂದು ಸರಕಾರವು ಯುಪಿಎಸ್ಸಿಗೆ ಶರಣಾಗಬೇಕಿದೆ. ಪರೀಕ್ಷಾರ್ಥಿಗಳು ಸರಕಾರಿ ನೌಕರಿಯ ನಂಬಿಕೆಯಿಂದ ಪರೀಕ್ಷಾ ಶುಲ್ಕ ಕಟ್ಟಿದ್ದು, ಅದನ್ನು ಬಡ್ಡಿ ಸೇರಿಸಿ ಎಲ್ಲ ಅಭ್ಯರ್ಥಿಗಳಿಗೆ ವಾಪಸ್ ಕೊಡಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಒತ್ತಾಯಿಸಿದರು.
ಈ ಕುರಿತು ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ ಅವರು ಮಾತನಾಡಿ, ಮುಖ್ಯಮಂತ್ರಿಗಳೇ ನೇಮಿಸುವ ಐಎಎಸ್ ಅಧಿಕಾರಿಯಾದ ಕಾರ್ಯದರ್ಶಿ ಹಾಗೂ ಪರೀಕ್ಷಾ ನಿಯಂತ್ರಣಾಧಿಕಾರಿ ಕೆಪಿಎಸ್ಸಿ ಪರೀಕ್ಷೆಗಳನ್ನು ನಿಭಾಯಿಸುತ್ತಾರೆ. ಆದ್ದರಿಂದ ಕೆಪಿಎಸ್ಸಿ ಪರೀಕ್ಷಾ ವೈಫಲ್ಯದ ಜವಾಬ್ದಾರಿಯನ್ನು ಸ್ವತಃ ಮುಖ್ಯಮಂತ್ರಿಗಳೇ ಹೊರಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಕೆಪಿಎಸ್ಸಿ ವ್ಯವಸ್ಥೆಯನ್ನು ಸರಿ ಮಾಡುವ ದೃಷ್ಟಿಯಿಂದ ತಕ್ಷಣ ಉನ್ನತ ಮಟ್ಟದ ತನಿಖೆ ನಡೆಸಬೇಕು. ಪರೀಕ್ಷಾ ಅಕ್ರಮ ದೊಡ್ಡ ಪ್ರಮಾಣದಲ್ಲಿದೆ. ಅದನ್ನು ತಡೆಯಲು ಸಾಕಷ್ಟು ಕಠಿಣ ಕಾನೂನುಗಳನ್ನು ರೂಪಿಸುವ ಕೆಲಸವನ್ನು ಹಿಂದಿನ ಸರಕಾರ ಮಾಡಿದೆ. ಕರ್ನಾಟಕದಲ್ಲಿ ಈಗ ತನಿಖೆ ಎಂದರೆ ಪ್ರಹಸನ ಎಂಬಂತಾಗಿದೆ. ಮಾತೆತ್ತಿದರೆ ಎಸ್ಐಟಿ, ಸಿಐಡಿ ಎನ್ನುತ್ತಿದ್ದಾರೆ. ಸ್ವತಂತ್ರ ನ್ಯಾಯಾಂಗದ ಸುಪರ್ದಿಯಲ್ಲಿ ತನಿಖೆ ನಡೆಯಬೇಕು ಎಂದು ಪ್ರಶ್ನೆಗೆ ಉತ್ತರ ನೀಡಿದರು.
ಕಾನೂನಿನ ಭಯವೇ ಇರದ ವ್ಯಕ್ತಿಗಳು ನಿರ್ಮಾಣವಾಗಿದ್ದಾರೆ. ಕೆಪಿಎಸ್ಸಿಗೆ ಕಾಯಕಲ್ಪ ಕೊಡಲು ಸಮಗ್ರ ತೀರ್ಮಾನ ಕೈಗೊಳ್ಳುವ ಕಾಲ ಈಗ ಬಂದಿದೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಯಾವುದೇ ಪರೀಕ್ಷೆಯನ್ನು ಯಾವುದೇ ಏಜೆನ್ಸಿಯಿಂದ ನಡೆಸಿದರೆ ಕನಿಷ್ಠ 4-5 ವರ್ಷ ಬೇಕೆಂಬ ಸ್ಥಿತಿಯಾದರೆ, ಗತಿ ಏನು ಹೇಳಿ ಎಂದು ಪ್ರಶ್ನಿಸಿದರು.
ಕರ್ನಾಟಕದ ಪೊಲೀಸ್ ವ್ಯವಸ್ಥೆ ಅತ್ಯಂತ ದಕ್ಷತೆಯಿಂದ ಕೂಡಿದೆ. ರಾಜೀವ್ ಗಾಂಧಿ ಹತ್ಯೆ ಮಾಡಿದವರನ್ನೇ ಹಿಡಿಯುವ ಸಮರ್ಥರಿದ್ದಾರೆ. ದುಷ್ಟರ ಆಡಳಿತದಲ್ಲಿ ಕೆಲಸ ಮಾಡುವ ಅನಿವಾರ್ಯತೆ ಅವರಿಗೆ ಬಂದಿದೆ. ದುಷ್ಟರ ಜೊತೆ ಕೆಲಸ ಮಾಡುವ ಒತ್ತಡದಲ್ಲಿ ಪೊಲೀಸರು ಇದ್ದಾರೆ. ಹಾಲಿ ನ್ಯಾಯಾಧೀಶರ ಸುಪರ್ದಿಯಲ್ಲಿ ತನಿಖೆ ನಡೆಸುವುದೇ ಸೂಕ್ತ ಎಂದು ಅರುಣ್ ಶಹಾಪುರ ಅವರು ತಿಳಿಸಿದರು.
ಐದೈದು ವರ್ಷಕ್ಕೆ ಒಂದು ನೇಮಕಾತಿ ನಡೆದರೆ ರಾಜ್ಯ ಸರಕಾರ ಈ ವಿಷಯದಲ್ಲಿ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅಗತ್ಯವಿದೆ ಎಂದು ನುಡಿದರು. ಕರ್ನಾಟಕದಲ್ಲಿ ಗುಣಮಟ್ಟ, ಜನಕಲ್ಯಾಣಕ್ಕಿಂತ ಹೆಚ್ಚು ರಾಜಕೀಯ ದೃಷ್ಟಿಕೋನದಿಂದ ಈ ಕಾರ್ಯದರ್ಶಿ, ಪರೀಕ್ಷಾ ನಿಯಂತ್ರಣಾಧಿಕಾರಿ ನೇಮಕ ಆಗುತ್ತದೆ. ಪರೀಕ್ಷೆಯಲ್ಲಿ ಚಯರ್ಮ್ಯಾನ್, ಸದಸ್ಯರ ಹಸ್ತಕ್ಷೇಪವೇನೂ ಇಲ್ಲ ಎಂದು ಹೇಳಿದರು.
ಪ್ರೊಬೆಷನರಿ ಕೆಎಎಸ್ ಸುಮಾರು 384 ಹುದ್ದೆಗಳಿಗೆ ಪರೀಕ್ಷೆಗಳು ಈಚೆಗೆ ನಡೆದಿವೆ. 2 ಲಕ್ಷದ 20 ಸಾವಿರ ಆಕಾಂಕ್ಷಿಗಳುÀ ಪರೀಕ್ಷೆಗೆ ಸಂಬಂಧಿಸಿ ಅರ್ಜಿ ಹಾಕಿದ್ದಾರೆ. 1.30 ಲಕ್ಷದಷ್ಟು ಜನ ಮೊದಲನೇ ಬಾರಿ ಪರೀಕ್ಷೆ ಬರೆದಿದ್ದರು. ಕೆಪಿಎಸ್ಸಿ ಗೊಂದಲದಿಂದ ಮತ್ತೊಮ್ಮೆ ಪರೀಕ್ಷೆ ನಡೆಸಬೇಕಾಯಿತು. ಭಾಷಾಂತರದ ಸಮಸ್ಯೆಯಿಂದ ಇನ್ನೊಮ್ಮೆ ಪರೀಕ್ಷೆ ನಡೆಸಲು ಸ್ವತಃ ಮುಖ್ಯಮಂತ್ರಿಗಳೇ ಸೂಚಿಸಬೇಕಾಯಿತು ಎಂದು ವಿವರಿಸಿದರು. ಈ ಬಾರಿ 1 ಲಕ್ಷ 5 ಸಾವಿರ ಜನರು ಪರೀಕ್ಷೆಗೆ ಹಾಜರಾಗಿದ್ದರು ಎಂದು ನೀಡಿದರು.
ಮೊದಲ ಪರೀಕ್ಷೆಗೆ ಶೇ 62ರಷ್ಟು ಜನರು ಪರೀಕ್ಷೆಗೆ ಹಾಜರಾದರೆ, ಮರು ಪರೀಕ್ಷೆ ವೇಳೆ ಅದು ಶೇ 48ಕ್ಕೆ ಕುಸಿದಿದೆ. ಕರ್ನಾಟಕದ ಕೆಪಿಎಸ್ಸಿ ಉದ್ಯೋಗಾಕಾಂಕ್ಷಿಗಳ ಮತ್ತು ರಾಜ್ಯದ ಜನತೆಯ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ ಎಂದು ಆಕ್ಷೇಪಿಸಿದರು. ಒ.ಎಮ್.ಆರ್ ಶೀಟ್ನಲ್ಲಿ ಕೈಬರಹದ ನೋಂದಣಿಗೆ ಅವಕಾಶ ಮಾಡಿಕೊಟ್ಟಿದ್ದು ತಮಗೆ ಬೇಕಾದವರನ್ನು ಕೆ.ಎ.ಎಸ್ ಅಧಿಕಾರಿಗಳನ್ನಾಗಿ ಮಾಡುವ ಹುನ್ನಾರ ಅಡಗಿದೆ ಎಂದು ಅವರು ಆರೋಪಿಸಿದರು.
ಮರುಪರೀಕ್ಷೆ ಯಾಕೆ ಎಂದು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರು ಸದನದಲ್ಲಿ ಪ್ರಶ್ನಿಸಿದ್ದರು. ಮುಖ್ಯಮಂತ್ರಿಗಳು ಉತ್ತರ ನೀಡಿದ್ದು, ಆಯೋಗವು 2021ನೇ ಸಾಲಿನಲ್ಲಿ ಪ್ರಶ್ನೆಗಳ ಸೋರಿಕೆಯ ಹಿನ್ನೆಲೆಯಲ್ಲಿ ರಚಿಸಲಾಗಿದ್ದ ಉಪ ಸಮಿತಿಯ ಭಾಷಾಂತರಕಾರರು ಭಾಷಾಂತರಿಸಿದ ಪ್ರಶ್ನೆಗಳನ್ನು ಗೌಪ್ಯ ಶಾಖೆಯ ಅಧಿಕಾರಿ, ಸಿಬ್ಬಂದಿಗಳು ನೋಡುವ ಅವಕಾಶ ಇರಬಾರದೆಂದು ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸದರಿ ಪ್ರಶ್ನೆಗಳನ್ನು ಆಯೋಗದಿಂದ ಪರಿಶೀಲಿಸಿಲ್ಲ ಎಂದಿದ್ದಾರೆ. ಪ್ರಶ್ನೆಗಳನ್ನು ಯಾರೂ ನೋಡದೆ ಮುದ್ರಣಕ್ಕೆ ಕಳಿಸಿದ್ದೇವೆ. ಪರೀಕ್ಷಾರ್ಥಿಗಳಿಗೆ ಅದನ್ನೇ ನೀಡಿದ್ದು ಗೊಂದಲ ಆಗಿದೆ ಎಂದು ತಿಳಿಸಿದ್ದಾರೆ.
ಸ್ವತಃ ಮುಖ್ಯಮಂತ್ರಿಗಳೇ ಹೇಳಿ ಮರುಪರೀಕ್ಷೆ ಮಾಡುವಾಗ ಅದೇ ತಪ್ಪಾದರೆ ಇವರಿಗೆ ಏನೆನ್ನಬೇಕು ಎಂದು ಪ್ರಶ್ನಿಸಿದರು. ಎಡವಿದ ಕಲ್ಲಿಗೇ ಇನ್ನೊಮ್ಮೆ ಎಡವಿದರೆ ನಾವು ಏನು ಹೇಳಬೇಕು ಎಂದು ಕೇಳಿದರು. ಎರಡನೇ ಬಾರಿಯೂ ವೈಫಲ್ಯ, ಅದೇ ತಪ್ಪಾದರೆ ಅದು ನಿಮ್ಮ ವೈಫಲ್ಯವಲ್ಲವೇ ಮುಖ್ಯಮಂತ್ರಿಗಳೇ ಎಂದು ಪ್ರಶ್ನೆ ಮಾಡಿದರು. ಕೆಪಿಎಸ್ಸಿಗೆ ಒಬ್ಬರು ಚಯರ್ಮ್ಯಾನ್, ಹಲವಾರು ಸದಸ್ಯರಿದ್ದಾರೆ. ಅವರೆಲ್ಲರಿಗೂ ಈ ಎಲ್ಲ ಸಂಗತಿಗಳ ಮೇಲೆ ಯಾವುದೇ ನಿಯಂತ್ರಣವಿಲ್ಲ ಎಂದು ತಿಳಿಸಿದರು.
ರಾಜ್ಯದಲ್ಲಿ ನೇಮಕಾತಿಗಾಗಿ ಪರೀಕ್ಷೆ ಎಂದರೆ ಅದು ಮುಗಿಯದ ಕಥೆ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ಯುಪಿಎಸ್ಸಿ, ಕೆಪಿಎಸ್ಸಿ ನೇಮಕಾತಿಗಳು ಅತ್ಯಂತ ಮಹತ್ವಪೂರ್ಣ. ದೇಶದ ಅಭಿವೃದ್ಧಿ, ಆಡಳಿತ ವ್ಯವಸ್ಥೆ ಮೇಲೆ ದೊಡ್ಡ ಪರಿಣಾಮ ಬೀರುವ ಯುಪಿಎಸ್ಸಿ, ಕೆಪಿಎಸ್ಸಿ ನೇಮಕಾತಿ ಪಾರದರ್ಶಕತೆ ಮತ್ತು ಪ್ರಾಮಾಣಿಕತೆಯಿಂದ ಕೂಡಿರಬೇಕೆಂದು ಗಂಭೀರವಾಗಿ ಪರಿಗಣಿಸಲಾಗಿತ್ತು ಎಂದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications