ದ್ವೇಷಕ್ಕಾಗಿ ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ?
ಬೆಂಗಳೂರು, ಏಪ್ರಿಲ್ 01 : ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ರಾಜ್ಯಾದ್ಯಂತ ಚರ್ಚೆ ನಡೆಯುತ್ತಿದೆ. ರಸಾಯನ ಶಾಸ್ತ್ರ ವಿಷಯದ ಮರುಪರೀಕ್ಷೆ ಏ.12ರಂದು ನಡೆಯಲಿದೆ. ದ್ವೇಷದ ಕಾರಣಕ್ಕಾಗಿ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಲಾಯಿತೇ? ಎಂಬ ಪ್ರಶ್ನೆ ಎದ್ದಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸಿಐಡಿ ತನಿಖೆ ನಡೆಸುತ್ತಿದೆ. ತನಿಖೆ ನಡೆಸುತ್ತಿರುವ ಅಧಿಕಾರಿಗಳ ತಂಡ ಪತ್ರಿಕೆ ಸೋರಿಕೆ ಹಿಂದೆ ದ್ವೇಷದ ಅಂಶಗಳಿವೆಯೇ? ಎಂಬ ಬಗ್ಗೆಯೂ ತನಿಖೆಯನ್ನು ಕೈಗೊಳ್ಳಲಿದೆ. ಟ್ಯೂಷನ್ ಮಾಫಿಯಾ ಕೈವಾಡದ ಕುರಿತು ತನಿಖೆ ನಡೆಯಲಿದೆ. [ಪ್ರಶ್ನೆ ಪತ್ರಿಕೆ ಸೋರಿಕೆ : ಗುರುವಾರದ 10 ಪ್ರಮುಖ ಬೆಳವಣಿಗೆಗಳು]

ಸೋರಿಕೆಗೆ ಕಾರಣವೇನು?: ಹಿಂದೆ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದಾಗ ಟ್ಯೂಷನ್ ಮಾಫಿಯಾದ ಕೈವಾಡವಿರುವ ಬಗ್ಗೆ ತಿಳಿದುಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಜನರನ್ನು ಬಂಧಿಸಲಾಗಿತ್ತು ಮತ್ತು ದೋಷರೋಪ ಪಟ್ಟಿ ಸಲ್ಲಿಸಲಾಗಿತ್ತು. ಬಂಧಿತರು ಇಲಾಖೆಯ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿರುವುದು ತಿಳಿದುಬಂದಿತ್ತು. ಎಲ್ಲರೂ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. [ಪ್ರಶ್ನೆ ಪತ್ರಿಕೆ ಸೋರಿಕೆ ರಾಜ್ಯಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ]
ಪದವಿಪೂರ್ವ ಶಿಕ್ಷಣ ಇಲಾಖೆಗೆ ಪಲ್ಲವಿ ಅಕುರಾತಿ ಅವರು ನಿರ್ದೇಶಕರಾದ ಬಳಿಕ ಸಮಸ್ಯೆ ಆರಂಭವಾಯಿತು. ಇಲಾಖೆಯಲ್ಲಿನ ಹಲವು ಅವ್ಯವಹಾರಗಳನ್ನು ಪತ್ತೆ ಹಚ್ಚಿದ ಅವರು, ಅದನ್ನು ಸರಿಪಡಿಸಲು ಮುಂದಾದದರು. ಕೆಲವು ಅಧಿಕಾರಿಗಳನ್ನು ಅಮಾನತು ಮಾಡುವಂತೆ ಶಿಫಾರಸು ಮಾಡಿ, ಸರ್ಕಾರಕ್ಕೆ ರಹಸ್ಯ ವರದಿಯೊಂದನ್ನು ಸಲ್ಲಿಸಿದರು. [ಪ್ರಶ್ನೆ ಪತ್ರಿಕೆ ಸೋರಿಕೆ ಹಿಂದೆ ಟ್ಯೂಷನ್ ಮಾಫಿಯಾ?]
ರಹಸ್ಯವಾಗಿ ಸಲ್ಲಿಕೆಯಾದ ವರದಿಯಲ್ಲಿದ್ದ ಕೆಲವು ಅಧಿಕಾರಿಗಳ ಹೆಸರುಗಳು ಮಾತ್ರ ರಹಸ್ಯವಾಗಿ ಉಳಿಯಲಿಲ್ಲ. ಅವುಗಳು ಬಹಿರಂಗಗೊಂಡವು. ಇದರಿಂದಾಗಿ ಆ ಅಧಿಕಾರಿಗಳು ನಿರ್ದೇಶಕರ ವಿರುದ್ಧ ಅಸಮಾಧಾನಗೊಂಡರು. ನಿರ್ದೇಶಕಿ ಮತ್ತು ಸರ್ಕಾರಕ್ಕೆ ಮುಜುಗರ ಉಂಟು ಮಾಡಲು ಪತ್ರಿಕೆ ಸೋರಿಕೆ ಮಾಡಿರಬಹುದು ಎಂದು ಶಂಕಿಸಲಾಗಿದೆ.
ಪೇಪರ್ ಮೊದಲು ಸೋರಿಕೆ ಆಗಿದ್ದೆಲ್ಲಿ? : ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಮೊದಲು ಎಲ್ಲಿ ಪೇಪರ್ ಸೋರಿಕೆಯಾಯಿತು? ಎಂದು ಪತ್ತೆ ಹಚ್ಚುತ್ತಿದೆ. ಬೆಂಗಳೂರು ಅಥವ ತುಮಕೂರಿನ ಖಜಾನೆಯಿಂದ ಪತ್ರಿಕೆ ಸೋರಿಕೆಯಾಗಿರಬಹುದು ಎಂದು ಶಂಕಿಸಲಾಗಿದೆ. ಹಲವು ಶಂಕಿತ ವ್ಯಕ್ತಿಗಳ ಪಟ್ಟಿ ಸಿದ್ಧಪಡಿಸಿರುವ ಸಿಐಡಿ ಅವರ ದೂರವಾಣಿ ಕರೆಗಳ ಮಾಹಿತಿಯನ್ನು ಸಂಗ್ರಹಣೆ ಮಾಡುತ್ತಿದೆ. ವಿವಿಧ ಕರೆ ಮತ್ತು ಸಂದೇಶಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ಅಂದಹಾಗೆ 2016ರ ಮಾರ್ಚ್ 21ರಂದು 1.75 ಲಕ್ಷ ವಿದ್ಯಾರ್ಥಿಗಳು ರಸಾಯನಶಾಸ್ತ್ರ ಪರೀಕ್ಷೆ ಬರೆದಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಆ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಮಾರ್ಚ್ 31ರಂದು ಮರುಪರೀಕ್ಷೆ ನಡೆಸುವುದಾಗಿ ಘೋಷಿಸಲಾಗಿತ್ತು. ಆದರೆ, ಪುನಃ ಪತ್ರಿಕೆ ಸೋರಿಕೆಯಾದ ಕಾರಣ ಪರೀಕ್ಷೆ ರದ್ದುಗೊಳಿಸಲಾಗಿತ್ತು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications