ಕೊರೊನಾದಿಂದ ಮೃತರಾದ ಅನಾಥರಿಗೆ ಪಿಂಡ ಪ್ರದಾನ ಮಾಡಿದ ಆರ್. ಅಶೋಕ್!
ಬೆಂಗಳೂರು, ಅ. 04: ಕೊರೊನಾ ವೈರಸ್ ಸೃಷ್ಟಿಸಿದ್ದ ಆತಂಕವೇ ಹಾಗಿತ್ತು. ಸ್ವತಃ ಪ್ರಧಾನಿ ಮೋದಿ ಅವರೆ ಮೊದಲು ಜೀವ ಆಮೇಲೆ ಜೀವನ ಎಂಬ ಹೇಳಿಕೆ ನೀಡಿದ್ದರು. ಅದು ವೈರಸ್ ಸೃಷ್ಟಿಸಿದ್ದ ಭೀಕರತೆಗೆ ಸಾಕ್ಷಿಯಾಗಿತ್ತು. ಮುಂದುವರೆದ ದೇಶಗಳೇ ಕೋವಿಡ್ ಹೊಡೆತಕ್ಕೆ ಹೈರಾಣಾಗಿದ್ದವು. ಹೀಗಾಗಿ ದಾರಿಯಲ್ಲಿ ಬಿದ್ದು ಸತ್ತವರೆಷ್ಟೋ? ಕೊರೊನಾ ಹುಟ್ಟಿಸಿದ್ದ ಭಯದಿಂದಾಗಿ ಸೋಂಕಿನಿಂದ ಆಸ್ಪತ್ರೆಯಲ್ಲಿ ಮೃತಪಟ್ಟವರ ಅಂತಿಮ ಸಂಸ್ಕಾರವನ್ನೂ ಕೆಲವು ಕುಟುಂಬಸ್ಥರು ಮಾಡಲು ಮುಂದಾಗಿರಲಿಲ್ಲ. ಹೀಗಾಗಿ ವಿವಿಧ ಶವಾಗಾರಗಳಲ್ಲಿ ಅಲ್ಲಿ ಕೆಲಸ ನಿರ್ವಹಿಸುವವರೇ ಮಾಡಿ ಮುಗಿಸಿದ್ದರು.
ಬಳಿಕ ಮೃತರ ಚಿತಾಭಸ್ಮ ಹಾಗೂ ಅಸ್ಥಿಯನ್ನು ಕಂದಾಯ ಸಚಿವ ಆರ್. ಅಶೋಕ್ ಅವರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬಳಿ ಕಾವೇರಿ ನದಿಯಲ್ಲಿ ವಿಸರ್ಜಿಸಿದ್ದರು. ಸರ್ಕಾರದ ವತಿಯಿಂದ ಮೃತರ ಅಂತ್ಯೋತ್ತರ ಕ್ರಿಯೆಗಳನ್ನು ಸಾಮೂಹಿಕವಾಗಿ ನಡೆಸಲಾಗಿತ್ತು. ಅಸ್ಥಿ ವಿಸರ್ಜನೆ ಬಳಿಕ ಸೋಮವಾರ ಮೃತರಿಗೆ ಪಿಂಡ ಪ್ರದಾನವನ್ನು ಕಂದಾಯ ಸಚಿವ ಆರ್. ಅಶೋಕ್ ಮಾಡಿದ್ದಾರೆ.

ಕೊರೊನಾದಿಂದ ಮೃತರ ಆತ್ಮಗಳಿಗೆ ಮುಕ್ತಿ ಕಾರ್ಯ
ಕಂದಾಯ ಸಚಿವ ಆರ್.ಅಶೋಕ್ ಅವರು, ಪಿತೃ ಪಕ್ಷದ ನಿಮಿತ್ತ ಕೊರೊನಾದಿಂದ ಮೃತಪಟ್ಟವರ ಪಿಂಡ ಪ್ರಧಾನವನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಗಂಜಾಂನಲ್ಲಿರೋ ಗೋಸಾಯಿಘಾಟ್ನಲ್ಲಿ ಮಾಡಿದ್ದಾರೆ. ಆ ಮೂಲಕ ಆತ್ಮಗಳಿಗೆ ಮುಕ್ತಿ ಕಾರ್ಯವನ್ನು ಮಾಡಲಾಗಿದೆ. ಡಾ. ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಮೃತರಿಗೆ ಹೆಡೆ ಪೂಜೆ, ಪಿಂಡ ಪ್ರಧಾನ. ವಿಷ್ಣು ಸಂಕಲ್ಪ, ಮೋಕ್ಷ ನಾರಾಯಣ ಬಲಿ ಪೂಜೆ, ಗಣಪತಿ ಪೂಜೆ, ಕಳಸ ಪೂಜೆ, ಪ್ರಾಯಶ್ಚಿತ್ತ ತಿಲಹೋಮ ಸೇರಿದಂತೆ ಹಲವು ಪೂಜೆಗಳನ್ನು ಮಾಡಲಾಗಿದೆ. ಪೂಜಾ ಕೈಂಕಾರ್ಯದಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಜಿಲ್ಲಾಧಿಕಾರಿ ಅಶ್ವತಿ ಅವರು ಭಾಗಿಯಾಗಿದ್ದರು.

ಮೃತರಲ್ಲಿ ಯಾರೂ ಅನಾಥರಲ್ಲ:ಆರ್. ಅಶೋಕ್
ಪೂಜಾ ಕೈಂಕರ್ಯದ ಬಳಿಕ ಗೋಸಾಯ್ ಘಾಟ್ನಲ್ಲಿ ಮಾತನಾಡಿರುವ ಕಂದಾಯ ಸಚಿವ ಆರ್. ಅಶೋಕ್ ಅವರು, "ಮೃತರಲ್ಲಿ ಯಾರೂ ಅನಾಥರಲ್ಲ, ಒಂದೊಂದು ಕಾರಣಕ್ಕೆ ಅಸ್ಥಿ ವಿಸರ್ಜನೆ ಮಾಡಿಲ್ಲ. ಹೀಗಾಗಿ ಸರ್ಕಾರವೇ ಅಂಥವರ ಅಸ್ಥಿ ವಿಸರ್ಜನೆ ಮಾಡಿತ್ತು. ಇಂದು ಪಿಂಡಪ್ರಧಾನ ಮಾಡಿದ್ದೇವೆ. ಆ ಮೂಲಕ ಮೃತರಿಗೆ ಸದ್ಗತಿ ದೊರಕಿಸುವ ಕಾರ್ಯ ಮಾಡಿದ್ದೇವೆ. ಪಿಂಡಪ್ರದಾನ ಮಾಡಿದರೆ ಮೃತರ ಆತ್ಮಕ್ಕೆ ಶಾಂತಿ ಸಿಗುವ ನಂಬಿಕೆ ಹಿಂದೂ ಧರ್ಮದಲ್ಲಿದೆ. ಹೀಗಾಗಿ ಸತ್ತವರು ಅನಾಥರಾಗಬಾರದೆಂದು ಸರ್ಕಾರ ಈ ಕೆಲಸ ಮಾಡಿದೆ" ಎಂದಿದ್ದಾರೆ. ಜೊತೆಗೆ ಇದೇ ಸಂದರ್ಭದಲ್ಲಿ ಮತ್ತೊಂದು ಮಹತ್ವದ ಮಾತನ್ನೂ ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಈ ಪುಣ್ಯದ ಕಾರ್ಯದಿಂದ ಆತ್ಮತೃಪ್ತಿ ಸಿಕ್ಕಿದೆ
"ಪಿತೃಪಕ್ಷದ ಪೂಜಾ ಕಾರ್ಯಗಳನ್ನು ಪ್ರಚಾರ ಸಿಗಲಿ ಎಂದು ನಾನು ಮಾಡುತ್ತಿಲ್ಲ. ಈ ಪುಣ್ಯದ ಕಾರ್ಯದಿಂದ ನನಗೆ ಆತ್ಮತೃಪ್ತಿ ಸಿಕ್ಕಿದೆ. ಕಳೆದ ಬಾರಿಯಂತೆ ಈ ಬಾರಿಯೂ ಕಟ್ಟುನಿಟ್ಟಾಗಿ ಇದ್ದೇನೆ. ಮೂರು ದಿನ ಕಟ್ಟು ನಿಟ್ಟಾಗಿ ಇರಬೇಕು ಎಂದು ಹೇಳಿದ್ದಾರೆ. ಇವತ್ತು ಅವಲಕ್ಕಿ ಬಿಟ್ಟು ಬೇರೆ ಏನೂ ಸೇವನೆ ಮಾಡಿಲ್ಲ. ಸತ್ತವರೆಲ್ಲರೂ ನಮ್ಮವರೇ ಎಂದು ಈ ಕಾರ್ಯ ಮಾಡುತ್ತಿದ್ದೇವೆ. ಈ ಪುಣ್ಯದ ಕೆಲಸಗಳಿಗೆ ಮಹಾತ್ಮ ಗಾಂಧೀಜಿ ನನಗೆ ಪ್ರೇರಣೆ. ಅವರಿಗೂ ಪೂಜೆ ಸಲ್ಲಿಸುವ ಕೆಲಸ ಮಾಡುತ್ತಿದ್ದೇವೆ" ಎಂದು ತಿಥಿ ಕಾರ್ಯದ ಬಳಿಕ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ.
Recommended Video

ಜೂನ್ 2ರಂದು ಅಸ್ಥಿ ವಿಸರ್ಜಿಸಿದ್ದ ಆರ್. ಅಶೋಕ್!
ಕಂದಾಯ ಸಚಿವ ಆರ್. ಅಶೋಕ್ ಅವರು ಸರ್ಕಾರದ ವತಿಯಿಂದ ಕಳೆದ ಜೂನ್ 2, 2021ರಂದು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೆಲಕವಾಡಿಯಲ್ಲಿ ಸಾವಿರಕ್ಕೂ ಹೆಚ್ಚು ಜನರ ಅಸ್ಥಿ ವಿಸರ್ಜನೆ ಮಾಡಿದ್ದರು. ಡಾ. ಭಾನುಪ್ರಕಾಶ್ ಶರ್ಮ ಅವರ ಮಾರ್ಗದರ್ಶನದಲ್ಲಿ ಆ ಕಾರ್ಯ ಮಾಡಿದ್ದರು. ಅದಾದ ಬಳಿಕ ಇಂದು ಅ. 4ರಂದು ಪಿಂಡ ಪ್ರದಾನವನ್ನು ಮಾಡಿದ್ದಾರೆ. ಡಾ. ಭಾನುಪ್ರಕಾಶ್ ಶರ್ಮ ಅವರ ನೇತೃತ್ವದಲ್ಲಿ ಈ ವಿಧಿ ವಿಧಾನಗಳು ನಡೆದಿವೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral












Click it and Unblock the Notifications