ಕರ್ನಾಟಕದಲ್ಲಿ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್
ಬೆಂಗಳೂರು, ಜೂನ್ 13: "ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್' ಜಾಗತಿಕ ಸನ್ನಿವೇಶದಲ್ಲಿ ಕೊನೆಯ ವ್ಯಕ್ತಿಗೂ ಅತ್ಯುತ್ತಮ ಆರೋಗ್ಯ ಸೇವೆಯನ್ನು ಒದಗಿಸುವ ಗುರಿಯನ್ನು ಹೊಂದಿರುವ ಒಂದು ಪ್ರಮುಖ ಕಾರ್ಯಕ್ರಮವಾಗಿದೆ" ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ನಾಸ್ಕಾಮ್ ಆಯೋಜಿಸಿದ್ದ 'ಆಯುಷ್ಮಾನ್ ಭಾರತ್ ಡಿಜಿಟ್ ಮಿಷನ್' ಕುರಿತ ಕಾನ್ಕ್ಲೇವ್ನಲ್ಲಿ ಮಾತನಾಡಿದ ಅವರು, "7500ಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳಲ್ಲಿ ಹೆಚ್ಚಿನವು ಬೆಂಗಳೂರಿನಲ್ಲೇ ಇವೆ. ತಂತ್ರಜ್ಞಾನ ಬಳಕೆಯಲ್ಲಿ ಕರ್ನಾಟಕ ಮುಂಚೂಣಿಯ ರಾಜ್ಯವಾಗಿದೆ. ಇದು ಆರೋಗ್ಯ ಕ್ಷೇತ್ರದಲ್ಲಿನ ಅಂತರವನ್ನು ನಿವಾರಿಸುತ್ತದೆ ಮತ್ತು ಸುಸ್ಥಿರ ಆರೋಗ್ಯ ಪರಿಸರ ವ್ಯವಸ್ಥೆಯನ್ನು ರಚಿಸಲು ದಾರಿ ಮಾಡಿಕೊಡುತ್ತದೆ" ಎಂದರು.
"ರಾಜ್ಯವು ಮಾನವ ಸಂಪನ್ಮೂಲ ಸೇರಿದಂತೆ ಲಭ್ಯವಿರುವ ಎಲ್ಲಾ ಆರೋಗ್ಯ ಸೇವೆಗಳ ಮಾಹಿತಿಯನ್ನು ಸಂಗ್ರಹಿಸುತ್ತಿದೆ. ಈ ಉಪಕ್ರಮದಿಂದ, ನಾವು ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸಲು ಸಾಧ್ಯವಾಗುತ್ತದೆ. ಈ ದಿಸೆಯಲ್ಲಿನ ಪ್ರಯತ್ನಗಳಿಗೆ ಪೂರಕವಾಗಿ ರಾಜ್ಯದಲ್ಲಿ ಆಂಬ್ಯುಲೆನ್ಸ್ ಸೇವೆಗಳನ್ನು ಒಂದು ತಿಂಗಳ ಅವಧಿಯಲ್ಲಿ ಸಂಪೂರ್ಣವಾಗಿ ಕೂಲಂಕುಷವಾಗಿ ಪರಿಶೀಲಿಸಲಾಗುವುದು" ಎಂದು ಸಚಿವರು ತಿಳಿಸಿದರು.

ಸಕಾಲಕ್ಕೆ ರೋಗಿಗಳಿಗೆ ಚಿಕಿತ್ಸೆ: "ಟೆಲಿಕಾಲ್ ಮೂಲಕ, ಆಂಬ್ಯುಲೆನ್ಸ್ ಚಾಲಕರಿಗೆ ರೋಗಿಗಳನ್ನು ಯಾವ ಆಸ್ಪತ್ರೆಗಳಿಗೆ ಕರೆದೊಯ್ಯಬೇಕು ಎಂಬ ಮಾಹಿತಿಯನ್ನು ಒದಗಿಸಲಾಗುತ್ತದೆ. ಇದರಿಂದ ರೋಗಿಗಳಿಗೆ ವಿಳಂಬವಿಲ್ಲದೆ ಸಕಾಲದಲ್ಲಿ ಚಿಕಿತ್ಸೆ ನೀಡಲಾಗುವುದು,'' ಎಂದು ಸಚಿವರು ಹೇಳಿದರು.
ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಕಾರ್ಯಕ್ರಮದಡಿಯಲ್ಲಿ ಪ್ರತಿಯೊಬ್ಬರಿಗೂ ಆರೋಗ್ಯ ID ನೀಡಲಾಗುವುದು ಎಂದು ಸುಧಾಕರ್ ತಿಳಿಸಿದ್ದಾರೆ. ಇದರೊಂದಿಗೆ ಸೂಪರ್ ಸ್ಪೆಷಲಿಸ್ಟ್ಗಳಿಂದ ಪ್ರಾರಂಭಿಸಿ ಸಾಮಾನ್ಯ ವೈದ್ಯರವರೆಗೆ ಎಲ್ಲಾ ವೈದ್ಯರ ಸಮಗ್ರ ದಾಖಲಾತಿಯನ್ನು ಸಂಗ್ರಹಿಸಲಾಗುವುದು. ಇದರಿಂದ ಆರೋಗ್ಯ ಇಲಾಖೆಗೆ ಕಾಡುತ್ತಿರುವ ಕಾಳಸಂತೆ ಸಮಸ್ಯೆಯೂ ನಿವಾರಣೆಯಾಗಲಿದೆ.
ಕೋವಿಡ್ ನಂತರದ ಯುಗದಲ್ಲಿ ಆರೋಗ್ಯ ಕ್ಷೇತ್ರದ ಮುಖವು ಬದಲಾಗಿದೆ ಎಂದು ಸುಧಾಕರ್ ಉಲ್ಲೇಖಿಸಿದ್ದಾರೆ. ಇ-ಮನಸ್ ಉಪಕರಣವನ್ನು ಬಳಸಿಕೊಂಡು, ಕೋವಿಡ್ 19 ರ ಮೊದಲ ಅಲೆಯಿಂದ ರಾಜ್ಯದಲ್ಲಿ 25 ಲಕ್ಷಕ್ಕೂ ಹೆಚ್ಚು ಜನರಿಗೆ ಸಮಾಲೋಚನೆ ಸೇವೆಗಳನ್ನು ಒದಗಿಸಲಾಗಿದೆ. ಈ ಉಪಕ್ರಮವನ್ನು ಕೇಂದ್ರ ಸರ್ಕಾರವೂ ಶ್ಲಾಘಿಸಿದೆ, ಇದು ದೇಶದ ಎಲ್ಲಾ ರಾಜ್ಯಗಳಿಗೆ ವಿಸ್ತರಿಸಲು ನಿರ್ಧರಿಸಿದೆ ಎಂದು ಅವರು ಹೇಳಿದರು.
ಅದೇ ರೀತಿಯಲ್ಲಿ, ಟೆಲಿ-ಐಸಿಯು ಮತ್ತು ಟೆಲಿ-ಮೆಡಿಸಿನ್ ಸೇವೆಗಳಂತಹ ಕಾರ್ಯಕ್ರಮಗಳನ್ನು ಬಳಸಿಕೊಂಡು, ರಾಜ್ಯದ ಎಲ್ಲಾ ಪ್ರದೇಶಗಳಿಗೆ ಸಮಾನ ಮತ್ತು ಗುಣಮಟ್ಟದ ಚಿಕಿತ್ಸೆಯನ್ನು ಲಭ್ಯವಾಗುವಂತೆ ಮಾಡಲಾಗಿದೆ ಎಂದು ತಿಳಿಸಿದರು.
ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಖಾಸಗಿ ಆರೋಗ್ಯ ಸೌಲಭ್ಯಗಳು ಪ್ರಮುಖ ಪಾತ್ರವಹಿಸುತ್ತವೆ. ಭಾರತದಲ್ಲಿ ಶೇ. 50ಕ್ಕಿಂತ ಹೆಚ್ಚು ಜನರು ತಮ್ಮ ಆರೋಗ್ಯ ಅಗತ್ಯಗಳಿಗಾಗಿ ಖಾಸಗಿ ಸಂಸ್ಥೆಗಳ ಮೇಲೆ ಅವಲಂಬಿತರಾಗಿದ್ದಾರೆ. ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಎಲ್ಲಾ ಮಾಹಿತಿಯನ್ನು ಸಂಗ್ರಹಿಸುತ್ತವೆ. ಆದರೆ, ಅವರು ಈ ಮಾಹಿತಿಯನ್ನು ಸರ್ಕಾರದೊಂದಿಗೆ ಹಂಚಿಕೊಳ್ಳುತ್ತಿಲ್ಲ. ಈ ಮನಸ್ಥಿತಿ ಬದಲಾಗಬೇಕಿದೆ ಎಂದರು.
ಖಾಸಗಿ ಆಸ್ಪತ್ರೆಗಳು ತಮ್ಮ ಬಳಿ ಇರುವ ರೋಗಿಗಳ ಮಾಹಿತಿಯನ್ನು ಹಂಚಿಕೊಂಡರೆ, ಸೂಕ್ತ ಆರೋಗ್ಯ ವ್ಯವಸ್ಥೆ ಕಲ್ಪಿಸಬಹುದು. ಈ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ನ ಭಾಗವಾಗಿ ಖಾಸಗಿ ಆಸ್ಪತ್ರೆಗಳೊಂದಿಗೆ ಸಕಾರಾತ್ಮಕ ಸಹಭಾಗಿತ್ವವನ್ನು ಹೊಂದುವುದು ಅಗತ್ಯವಾಗಿದೆ ಎಂದು ಹೇಳಿದರು.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ವಾಸ್ತು ಪ್ರಕಾರ ನಿಮ್ಮ ಮನೆಯಲ್ಲಿ ಪಾರ್ಕಿಂಗ್ ಮತ್ತು ವರಾಂಡಾ ಯಾವ ದಿಕ್ಕಿನಲ್ಲಿ ಇರಬೇಕು? -
Summer Super Drink: ಪ್ರತಿದಿನ ಎರಡು ಗ್ಲಾಸ್ ಕಬ್ಬಿನ ರಸ: ಬೇಸಿಗೆಯ ಸೂಪರ್ ಡ್ರಿಂಕ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು












Click it and Unblock the Notifications