ರಿಷಬ್ ಶೆಟ್ಟಿ ಈ ಕಮೆಂಟ್ಗೆ ಗರಂ ಆದ ದರ್ಶನ್ ಫ್ಯಾನ್ಸ್ !
Darshan Thoogudeepa: ನಟ ದರ್ಶನ್ ಫ್ಯಾನ್ ದರ್ಶನ ಅವರು ಕೊಲೆ ಆರೋಪದ ಮೇಲೆ ಕಾರಾಗೃಹ ಸೇರಿದ್ದರೂ, ಅವರ ಬಗ್ಗೆ ಯಾರಾದರು ಮಾತನಾಡಿದರೆ ಬಿಡ್ತಿಲ್ಲ. ಇದೀಗ ದರ್ಶನ್ ಫ್ಯಾನ್ಗಳ ಕೆಂಗಣ್ಣಿಗೆ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಗುರಿಯಾಗಿದ್ದಾರೆ. ರಿಷಬ್ ಶೆಟ್ಟಿ ಅವರು ಮಾಡಿದ ಕಾಮೆಂಟ್ ಸಹ ವಿವಾದಕ್ಕೆ ಕಾರಣವಾಗುಂತೆ ಏನು ಇರಲಿಲ್ಲ. ಆದರೆ, ರಿಷಬ್ ಶೆಟ್ಟಿಯನ್ನು ಕಳೆದ ಎರಡು ಮೂರು ದಿನಗಳಿಂದ ದರ್ಶನ್ ಫ್ಯಾನ್ಸ್ ಟಾರ್ಗೆಟ್ ಮಾಡಿದ್ದಾರೆ.
ದರ್ಶನ್ ಅಭಿಮಾನಿಗಳ ಅತಿರೇಖದ ವರ್ತನೆಯ ಬಗ್ಗೆ ನಿಮಗೆಲ್ಲ ತಿಳಿದೇ ಇದೆ. ಇದೀಗ ಇದಕ್ಕೆ ರಿಷಬ್ ಶೆಟ್ಟಿ ಗುರಿಯಾಗಿದ್ದಾರೆ. ದರ್ಶನ್ ಅವರು ಒಳ್ಳೆಯ ಸ್ಥಾನದಲ್ಲಿ ಇದ್ದಾಗ ಇವರೆಲ್ಲರೂ ಅವರನ್ನು ಬಾಸ್ ಅಂತಿದ್ರು. ಈಗ ಒಂದು ಸಕ್ಸಸ್ ಬಂದ ಕೂಡಲೇ ದುರಹಂಕಾರದ ವರ್ತನೆ ತೋರುತ್ತಿದ್ದಾರೆ ಎಂದು ಡಿ ಬಾಸ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ರಿಷಬ್ ಶೆಟ್ಟಿ ಕಾಲೆಳೆದಿದ್ದಾರೆ.

ರಿಷಬ್ ಶೆಟ್ಟಿ ಟ್ರೋಲ್ಗೆ ಕಾರಣವೇನು ?
ರಿಷಬ್ ಶೆಟ್ಟಿಯನ್ನು ಟ್ರೋಲ್ ಮಾಡುತ್ತಿರುವುದಕ್ಕೆ ಕಾರಣ ವಿಚಿತ್ರವಾಗಿದೆ. ದರ್ಶನ್ ಬಗ್ಗೆ ರಿಷಬ್ ನೋಕಮೆಂಟ್ಸ್ ಎನ್ನುವ ಅರ್ಥದಲ್ಲಿ ಮಾತನಾಡಿದ್ದಾರೆ. ಅಷ್ಟಕ್ಕೇ ದರ್ಶನ್ ಫ್ಯಾನ್ಸ್ ಗರಂ ಆಗಿದ್ದು. ಒಂದೇ ಒಂದು ಸಕ್ಸಸ್ಗೆ ರಿಷಬ್ ಶೆಟ್ಟಿ ಅವರಿಗೆ ಇಷ್ಟೊಂದು ದುರಹಂಕಾರ, ದರ್ಪ, ಮನುಷ್ಯ ಬೆಳೆದ ಮೇಲೆ ಇಷ್ಟೆ ಎಂದೆಲ್ಲ ಹೇಳುತ್ತಿದ್ದಾರೆ. ಇದಕ್ಕೆ ರಿಷಬ್ ಶೆಟ್ಟಿಯ ಫ್ಯಾನ್ಸ್ಗಳು ವಿರೋಧ ವ್ಯಕ್ತಪಡಿಸಿದ್ದು. ದರ್ಶನ್ ಫ್ಯಾನ್ಸ್ನ ವಿರುದ್ಧ ತಿರುಗಿ ಬಿದಿದ್ದಾರೆ. ಅವರು ಯಾವ ಸಂದರ್ಭದಲ್ಲಿ ಏನು ಹೇಳಿದ್ದಾರೆ ಎಂದು ನೋಡಿ ಎಂದಿದ್ದಾರೆ.
ಇಷ್ಟುಕ್ಕೂ ಈ ವಿವಾದ ಕಾರಣವಾಗುವುದರ ಹಿಂದೆ ಸಣ್ಣ ವಿಷಯವಿದೆ. ತೆಲುಗಿನ ಪ್ರಖ್ಯಾತ ನಟ ಜ್ಯೂನಿಯರ್ ಎನ್ಟಿಆರ್ ಅವರು ಕರ್ನಾಟಕಕ್ಕೆ ಭೇಟಿ ನೀಡಿದ್ದು, ಕರ್ನಾಟಕದ ಉಡುಪಿಯ ಶ್ರೀಕೃಷ್ಣ ಮಠ ಸೇರಿದಂತೆ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ವೇಳೆ ಮಾಧ್ಯಮಗಳ ಮುಂದೆ ಜ್ಯೂನಿಯರ್ ಎನ್ಟಿಆರ್ ಹಾಗೂ ರಿಷಬ್ ಶೆಟ್ಟಿ ಅವರು ಮಾತನಾಡುವ ಸಂದರ್ಭದಲ್ಲಿ ದರ್ಶನ್ ಬಗ್ಗೆ ಮಾತನಾಡುವುದಕ್ಕೆ ರಿಷಬ್ ಶೆಟ್ಟಿ ಅವರು ನಿರಾಕರಿಸಿದ್ದಾರೆ ನೋ ಕಮೆಂಟ್ಸ್ ಅಂದರೆ, ಈಗ ಆ ವಿಷಯ ಬೇಡ ಬಿಡಿ ಎಂದಷ್ಟೇ ಹೇಳಿದ್ದಾರೆ. ಇಷ್ಟಕ್ಕೇ ದರ್ಶನ್ ಫ್ಯಾನ್ಸ್ ಕೆಂಡಾಮಂಡಲರಾಗಿದ್ದಾರೆ. ಇನ್ನೂ ಕೆಲವರು ದೇವಸ್ಥಾನದಲ್ಲಿ ಈ ವಿಷಯ ಬೇಡ ಎಂದಷ್ಟೇ ಹೇಳಿದ್ದಾರೆ. ಈ ಮಾಧ್ಯಮದವರಿಗೆ ಎಲ್ಲಿ ಯಾವ ಪ್ರಶ್ನೆ ಕೇಳಬೇಕು ಎನ್ನುವ ಪರಿಜ್ಞಾನವೇ ಇಲ್ಲ ಎಂದು ಬೈದಿದ್ದಾರೆ. ರಿಷಬ್ ಶೆಟ್ಟಿ ಅವರೇ ಇನ್ನೂ ನಿಮ್ಮನ್ನು ಆ ಫ್ಯಾನ್ಸ್ ಬಿಡಲ್ಲ ಹುಷಾರು ಎಂದು ವ್ಯಂಗ್ಯ ಎಚ್ಚರಿಕೆಯನ್ನೂ ನೀಡಿದ್ದಾರೆ.
ಹಳೇ ವಿಡಿಯೋ ಹಾಕಿ ಟ್ರೋಲ್ ಮಾಡ್ತಿದ್ದಾರೆ ಫ್ಯಾನ್ಸ್
ಈ ಹಿಂದೆ ಚಿತ್ರವೊಂದರ ಬಿಡುಗಡೆ ಸಂದರ್ಭದಲ್ಲಿ ನಟ ದರ್ಶನ್ ಅವರ ಬಗ್ಗೆ ನಟ ರಿಷಬ್ ಅವರು ಮೆಚ್ಚುಗೆಯ ಮಾತನಾಡಿದ್ದ ವಿಷಯ ಇದೀಗ ಸಿಕ್ಕಾಪಟ್ಟೆ ಟ್ರೋಲ್ ಹಾಗೂ ವೈರಲ್ಗೆ ಕಾರಣವಾಗಿದೆ. ಈ ಹಿಂದೆ ಚಲನಚಿತ್ರವೊಂದರ ಪ್ರಮೋಷನ್ ಸಂದರ್ಭದಲ್ಲಿ ರಿಷಬ್ ಶೆಟ್ಟಿ, "ಈ ಚಿತ್ರ ಸಕ್ಸಸ್ ಆದ ರೀತಿಯೇ. ಒಮ್ಮೆ ಚಿತ್ರಮಂದಿರಕ್ಕೆ ದರ್ಶನ್ ಫ್ಯಾನ್ಸ್ ಬಂದು ಹೋದರೆ ಸಾಕು. ಚಿತ್ರ ಸಕ್ಸಸ್ ಆದಂಗೆ" ಎಂದಿದ್ದರು. ಈ ವಿಡಿಯೋವನ್ನು ಬಳಸಿಕೊಂಡು ಇದೀಗ ಟ್ರೋಲ್ ಮಾಡಲಾಗುತ್ತಿದೆ. ಬೆಳೆಯುವಾಗ ಎಲ್ಲರೂ ಬೆಳೆಸಿಕೊಳ್ಳತ್ತಾರೆ. ಬೆಳೆದ ಮೇಲೆ ಅವರ ಬುದ್ಧಿ ತೋರಿಸ್ತಾರೆ ಎಂದು ದರ್ಶನ್ ಫ್ಯಾನ್ಸ್ ಟ್ರೋಲ್ ಮಾಡಿದ್ದರೆ. ದೇವಸ್ಥಾನದಲ್ಲಿ ಈ ವಿಷಯ ಬೇಡ ಅಂತ ರಿಷಬ್ ಹೇಳಿದ್ದಾರೆ. ಅಷ್ಟೇ ಬೇರೆ ಕಡೆ ಮಾತಾಡ್ತಾರೆ ಇದರಲ್ಲಿ ತಪ್ಪೇನಿದೆ ಅಂತ ಪ್ರಶ್ನೆ ಮಾಡಿದ್ದಾರೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications