ಸಂತ್ರಸ್ತರಿಗೆ ಪರಿಹಾರ; ಸೂಕ್ತ ಮಾರ್ಗಸೂಚಿ ರಚಿಸಲು ಹೈಕೋರ್ಟ್ ಆದೇಶ
ಬೆಂಗಳೂರು ಅ.5: ಅಪಘಾತ ಪ್ರಕರಣಗಳಲ್ಲಿ ತಪ್ಪಿತಸ್ಥ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುವುದು ಮತ್ತು ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರದಲ್ಲಿ ಶಿಸ್ತು ಪ್ರಾಧಿಕಾರಗಳ ಮುಂದೆ ವ್ಯತಿರಿಕ್ತ ಹೇಳಿಕೆ ನೀಡುವುದು ಮಾಮೂಲಿಯಾಗಿದೆ.
ಇದು ನಿಗಮದಲ್ಲಿ ಹಲವು ಗೊಂದಲಗಳಿಗೆ ಕಾರಣವಾಗುತ್ತಿದೆಯಲ್ಲದೆ, ಸಂತ್ರಸ್ತರಿಗೆ ಪರಿಹಾರವನ್ನೂ ನೀಡುವಲ್ಲಿಯೂ ವಿಳಂಬಕ್ಕೆ ಕಾರಣವಾಗಿದೆ.
ಇಂತಹುದೇ ಒಂದು ಪ್ರಕರಣದ ವಿಚಾರಣೆ ನಡೆಸಿರುವ ಹೈಕೋರ್ಟ್ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಮಾರ್ಗಸೂಚಿ ರಚಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಹೈಕೋರ್ಟ್ ಸೂಚನೆ ನೀಡಿದೆ.
ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರರ ಸಾವಿಗೆ ಕಾರಣರಾಗಿದ್ದ ಆರೋಪದಲ್ಲಿ ಬಸ್ ಚಾಲಕರನ್ನು ಮರು ನೇಮಕಗೊಳಿಸುವಂತೆ ತುಮಕೂರಿನ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ನೀಡಿತ್ತು.
ಅದನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

ಪ್ರಕರಣ ವಿಚಾರಣೆ ನಡೆಸಿದ್ದ ನ್ಯಾಯಪೀಠ ವಿಚಾರಣಾ ನ್ಯಾಯಾಲಯದ ಆದೇಶ ಎತ್ತಿಹಿಡಿದಿದ್ದು, ಕೆಎಸ್ಆರ್ಟಿಸಿ ಅರ್ಜಿಯನ್ನು ವಜಾಗೊಳಿಸಿದೆ.
ತದ್ವಿರುದ್ಧ ವಾದ: ಕೆಎಸ್ಆರ್ಟಿಸಿ, ರಸ್ತೆ ಅಪಘಾತಕ್ಕೆ ಚಾಲಕರೇ ಜವಾಬ್ದಾರಿಯಾಗಿದ್ದಾರೆ. ಹೀಗಾಗಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ತನ್ನ ವಾದದಲ್ಲಿ ತಿಳಿಸಿದೆ.
ಆದರೆ, ಮೋಟಾರ್ ಅಪಘಾತ ಪರಿಹಾರ ನ್ಯಾಯ ಮಂಡಳಿಯಲ್ಲಿ ರಸ್ತೆ ಅಪಘಾತಕ್ಕೆ ಚಾಲಕ ಕಾರಣವಲ್ಲ. ದ್ವಿ ಚಕ್ರವಾಹನ ಸವಾರನ ನಿರ್ಲಕ್ಷ್ಯತನದಿಂದ ಘಟನೆ ನಡೆಸಿದೆ ಎಂದು ವ್ಯತಿರಿಕ್ತ ಹೇಳಿಕೆಯನ್ನು ನೀಡಿದೆ.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, "ಇಂತಹ ಬೆಳವಣಿಗೆ ಸಂತ್ರಸ್ತರಿಗೆ ಪರಿಹಾರ ನೀಡುವುದರಿಂದ ಕೆಎಸ್ಆರ್ಟಿಸಿ ನುಣುಚಿಕೊಳ್ಳುವ ತಂತ್ರಗಾರಿಕೆಯಾಗಿದೆ. ಅಲ್ಲದೆ, ನ್ಯಾಯ ಮಂಡಳಿಯ ಅಮೂಲ್ಯ ಸಮಯದೊಂದಿಗೆ ಸಂತ್ರಸ್ತರಿಗೆ ತಕ್ಷಣ ಸಿಗಬೇಕಾದ ಪರಿಹಾರವನ್ನು ವಿಳಂಬ ಮಾಡುವ ತಂತ್ರ'' ಎಂದು ಕಿಡಿಕಾರಿದೆ.
ಅಲ್ಲದೆ, ಸತ್ಯಕ್ಕೆ ಬದ್ಧವಾಗಿರುವ ಬದಲು ಅನುಕೂಲಕ್ಕೆ ತಕ್ಕಂತೆ ತನ್ನ ನಿಲುವುಗಳನ್ನು ಬದಲಾವಣೆ ಮಾಡಲಾಗುತ್ತಿದೆ. ಇದು ಗಂಭೀರ ಲೋಪವಾಗಿದ್ದು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕರಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ.
ಪ್ರಕರಣದ ವಿವರ: 2015ರ ಜುಲೈ 26ರಂದು ನೆಲಮಂಗಲದಲ್ಲಿ ಕೆಎಸ್ಆರ್ಟಿಸಿ ಬಸ್ ದ್ವಿ ಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿತ್ತು. ಪರಿಣಾಮ ಇಬ್ಬರು ದ್ವಿಚಕ್ರವಾಹನ ಸವಾರರು ಮೃತಪಟ್ಟಿದ್ದರು. ಘಟನೆಗೆ ಕಾರಣವಾಗಿದ್ದ ಆರೋಪದಲ್ಲಿ ಚಾಲಕ ಗಂಗಣ್ಣನನ್ನು ಸೇವೆಯಿಂದ ವಜಾಗೊಳಿಸಲಾಗಿತ್ತು.
ಇದನ್ನು ಪ್ರಶ್ನಿಸಿದ್ದ ಗಂಗಣ್ಣ ತುಮಕೂರು ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಗಂಗಣ್ಣನವರಿಗೆ ಉದ್ಯೋಗ ನೀಡುವಂತೆ ಸೂಚನೆ ನೀಡಿತ್ತು. ಅದನ್ನು ಪ್ರಶ್ನಿಸಿ ಕೆಎಸ್ಆರ್ಟಿಸಿ ಹೈಕೋರ್ಟ್ ಮೆಟ್ಟಿಲೇರಿತ್ತು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications