ರೋಹಿಣಿ ಸಿಂಧೂರಿ ಸೇರಿ 6 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಜನವರಿ 22 : ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಸೇರಿದಂತೆ 6 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ರೋಹಿಣಿ ಸಿಂಧೂರಿ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದೂರು ನೀಡಲಾಗಿತ್ತು.

ಸೋಮವಾರ ಸಂಜೆ ಕರ್ನಾಟಕ ಸರ್ಕಾರ 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಸನ ದ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿರುವುದರಿಂದ ಐದು ವರ್ಷಗಳಲ್ಲಿ6ನೇ ಜಿಲ್ಲಾಧಿಕಾರಿಯನ್ನು ಕಂಡಂತಾಗಿದೆ.

ರೋಹಿಣಿ ಸಿಂಧೂರಿ ದಾಸರಿ ಅವರನ್ನು ಕರ್ನಾಟಕ ರಾಜ್ಯ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ನಿಗಮದ (ಕೆಎಸ್ಐಐಡಿಸಿ) ವ್ಯವಸ್ಥಾಪಕ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ. ಎಂ.ವಿ.ವೆಂಕಟೇಶ್ ಅವರು ಹಾಸನದ ನೂತನ ಡಿಸಿಯಾಗಿ ನೇಮಕವಾಗಿದ್ದಾರೆ.

Rohini Sindhuri

ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕದ ಸಿದ್ಧತೆಯಲ್ಲಿ ರೋಹಿಣಿ ಸಿಂಧೂರಿ ದಾಸರಿ ತೊಡಗಿಸಿಕೊಂಡಿದ್ದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ರೋಹಿಣಿ ಸಿಂಧೂರಿ ದಾಸರಿ ಅವರ ಕಾರ್ಯಗಳನ್ನು ಶ್ಲಾಘಿಸಿದ್ದರು.

ಮಹಾಮಸ್ತಕಾಭಿಷೇಕಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆಯೇ ರೋಹಿಣಿ ಸಿಂಧೂರಿ ದಾಸರಿ ಅವರನ್ನು ವರ್ಗಾವಣೆ ಮಾಡಲಾಗಿದೆ. 2017ರ ಜುಲೈ 14ರಂದು ರೋಹಿಣಿ ಸಿಂಧೂರಿ ದಾಸರಿ ಅವರು ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ತಮ್ಮ ಕಾರ್ಯ ವೈಖರಿಯ ಮೂಲಕ ಜನ ಮೆಚ್ಚುಗೆ ಗಳಿಸಿದ್ದರು.

ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ

* ಎಂ.ವಿ.ಜಯಂತಿ - ಕೆಎಟಿ ಮುಖ್ಯಸ್ಥರು
* ವಿ.ಚೈತ್ರಾ - ಕಾರ್ಮಿಕ ಇಲಾಖೆ ಆಯುಕ್ತರು
* ಎಸ್.ಬಿ.ಶೆಟ್ಟಣ್ಣವರ್ - ಹಾವೇರಿ ಜಿಲ್ಲಾಧಿಕಾರಿ
* ಎಂ.ವಿ.ವೆಂಕಟೇಶ್ - ಹಾಸನ ಜಿಲ್ಲಾಧಿಕಾರಿ
* ಡಾ.ಕೆ.ರಾಮಚಂದ್ರ - ರಾಮನಗರ ಜಿಲ್ಲಾಧಿಕಾರಿ
* ಡಾ.ಬಿ.ಆರ್.ಮಮತಾ - ಆಹಾರ ಇಲಾಖೆ ಆಯುಕ್ತರು
* ರೋಹಿಣಿ ಸಿಂಧೂರಿ ದಾಸರಿ - ಕೆಎಸ್ಐಐಡಿಸಿ ವ್ಯವಸ್ಥಾಪಕ ನಿರ್ದೇಶಕಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+