ರೋಹಿಣಿ ಸಿಂಧೂರಿ ವರ್ಗಾವಣೆ, ಸರ್ಕಾರಕ್ಕೆ ದೇವೇಗೌಡರ ಪ್ರಶ್ನೆ
Recommended Video
ಬೆಂಗಳೂರು, ಜನವರಿ 23 : 'ಮಹಾಮಸ್ತಕಾಭಿಷೇಕದ ಸಿದ್ಧತೆ ನಡೆಯುತ್ತಿದೆ. ಇದರಲ್ಲಿ ಹಣ ಹೊಡೆಯಲು ಆ ಹೆಣ್ಣು ಮಗಳು ಬಿಡಲಿಲ್ಲ. ಇಂಥ ಪವಿತ್ರ ಕಾರ್ಯದಲ್ಲಿಯೂ ಪರ್ಸೆಂಟೇಜ್ ಬೇಕೆ?' ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಿದರು.
ರೋಹಿಣಿ ಸೇರಿ 6 ಅಧಿಕಾರಿಗಳ ವರ್ಗಾವಣೆಗೆ ತಡೆ ನೀಡಿದ ಚುನಾವಣಾ ಆಯೋಗ
ಮಂಗಳವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, 'ಪ್ರಾಮಾಣಿಕ ಅಧಿಕಾರಿಯನ್ನು ಸರ್ಕಾರ ವರ್ಗ ಮಾಡಿದೆ. ಅವರು ಬಂದು ಆರು ತಿಂಗಳು ಕೂಡಾ ಆಗಿಲ್ಲ. ಹಿಂದಿನ ಜಿಲ್ಲಾಧಿಕಾರಿಗಳಿಗೂ ಸರ್ಕಾರ ಹೀಗೆ ಮಾಡಿದೆ' ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರೋಹಿಣಿ ಸಿಂಧೂರಿ ಒಬ್ಬರೇ ಪ್ರಾಮಾಣಿಕರಾ? ಗೌಡರಿಗೆ ಸಿದ್ದು ತಿರುಗೇಟು
'ಭ್ರಷ್ಟಾಚಾರದ ವಿಚಾರದಲ್ಲಿ ಬಹಳ ಕಠಿಣವಾಗಿದ್ದ ರೋಹಿಣಿ ಅವರ ವರ್ಗಾವಣೆ ಒಬ್ಬ ಮಂತ್ರಿಯ ಒತ್ತಡದಿಂದ ನಡೆದಿದೆ. ಮಸ್ತಕಾಭಿಷೇಕದ ಕಾರ್ಯ ಆಗಬೇಕು. ಈಗ ಅವರನ್ನು ವರ್ಗಾವಣೆ ಮಾಡಬೇಡಿ ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದೆ' ಎಂದು ದೇವೇಗೌಡರು ಹೇಳಿದರು.
ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ದೇವೇಗೌಡರು, 'ರೋಹಿಣಿ ಸಿಂಧೂರಿ ಅವರ ವರ್ಗಾವಣೆ ವಿಚಾರದಲ್ಲಿ ರಾಷ್ಟ್ರಪತಿಗಳಿಗೂ ಪತ್ರ ಬರೆಯುತ್ತೇನೆ. ಫೆ.7ರಂದು ಹಾಸನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ' ಎಂದರು.
ಸೋಮವಾರ ಕರ್ನಾಟಕ ಸರ್ಕಾರ ರೋಹಿಣಿ ಸಿಂಧೂರಿ ಸೇರಿದಂತೆ 6 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಆದರೆ, ಚುನಾವಣಾ ಆಯೋಗ ವರ್ಗಾವಣೆಯನ್ನು ತಡೆ ಹಿಡಿದಿದೆ.