ರೋಹಿಣಿ ಸಿಂಧೂರಿ vs ರೂಪಾ, ಪ್ರತಿಬಂಧಾಕಾಜ್ಞೆ ಹೈಕೋರ್ಟ್ನಿಂದ ರದ್ದು
ಬೆಂಗಳೂರು, ಏಪ್ರಿಲ್ 12; ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪ ಮೌದ್ಗಿಲ್ ನಡುವಿನ ಕದನಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಡಿ. ರೂಪಾ ಅವರು ರೋಹಿಣಿ ಕುರಿತಂತೆ ಯಾವುದೇ ಮಾನಹಾನಿಕರ ಹೇಳಿಕೆಗಳನ್ನು ನೀಡದಂತೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ನಿರ್ಬಂಧಕಾಜ್ಞೆ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದು ಮಾಡಿದೆ. ಹಾಗಾಗಿ ಇನ್ನು ಡಿ. ರೂಪಾ, ರೋಹಿಣಿ ವಿರುದ್ಧ ಆರೋಪಗಳನ್ನು ಮಾಡಬಹುದು, ಹೇಳಿಕೆಗಳನ್ನು ನೀಡಬಹುದು.
ತಮ್ಮ ವಾದವನ್ನು ಆಲಿಸದೇ ಏಕಪಕ್ಷೀಯವಾಗಿ ನೀಡಿರುವ ಆದೇಶವನ್ನು ಪ್ರಶ್ನಿಸಿ ಐಪಿಎಸ್ ಅಧಿಕಾರಿ ಡಿ. ರೂಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ನ್ಯಾಯಪೀಠ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಗೊಳಿಸಿ ಆದೇಶಿಸಿದೆ. ಈ ಆದೇಶದಿಂದ ವಿಚಾರಣಾ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆ ತೆರವಾದಂತಾಗಿದೆ.

ಅರ್ಜಿದಾರರ ವಾದವೇನು?; ಡಿ. ರೂಪಾ ಮೌದ್ಗಿಲ್ ಪರ ವಾದ ಮಂಡಿಸಿದ ವಕೀಲ ಮಧುಕರ್ ದೇಶಪಾಂಡೆ, ವಿಚಾರಣಾ ನ್ಯಾಯಾಲಯ ತಡೆಯಾಜ್ಞೆ ನೀಡಿದ ಬಳಿಕ ಪ್ರತಿವಾದಿಯಾಗಿರುವ ನಮ್ಮ ಕಕ್ಷಿಧಾರರಿಗೆ ಅರ್ಜಿದಾರರು ನ್ಯಾಯಾಲಯಕ್ಕೆ ಸಲ್ಲಿಸಿರುವ ಎಲ್ಲಾ ದಾಖಲೆಗಳ ಪ್ರತಿಯೊಂದಿಗೆ ತಲುಪಿಸಬೇಕಾಗಿತ್ತು. ಆದರೆ, ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಿರುವುದಾಗಿ ಹೇಳಿ ನಿರ್ಬಂಧಕಾಜ್ಞೆ ವಿಸ್ತರಣೆ ಮಾಡುವಂತೆ ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ನ್ಯಾಯಾಲಯ ನಿರ್ಬಂಧಕಾಜ್ಞೆ ವಿಸ್ತರಣೆಯನ್ನು ಮಾಡಿದೆ.
ಆದರೆ, ಪ್ರತಿವಾದಿಗಳಿಗೆ ನೋಟಿಸ್ ತಲುಪದಿದ್ದರೂ, ನಿರ್ಬಂಧಕಾಜ್ಞೆ ವಿಸ್ತರಣೆ ಮಾಡಿದಲ್ಲಿ ಅದು ತಾನಾಗಿಯೇ ರದ್ದಾಗಲಿದೆ. ಜತೆಗೆ ಮಧ್ಯಂತರ ತಡೆಯಾಜ್ಞೆ ವಿಸ್ತರಣೆ ಮಾಡುವುದಕ್ಕೆ ಅವಕಾಶವಿಲ್ಲ. ಹೀಗಾಗಿ ನಿರ್ಬಂಧಕಾಜ್ಞೆ ವಿಸ್ತರಣೆ ಮಾಡಿರುವ ಆದೇಶ ರದ್ದು ಮಾಡಬೇಕು ಎಂದು ಮನವಿ ಮಾಡಿದ್ದರು. ಇದನ್ನು ಆಲಿಸಿದ ನ್ಯಾಯಪೀಠ, ವಿಚಾರಣಾ ನ್ಯಾಯಾಲಯ ನೀಡಿದ್ದ ಮಧ್ಯಂತರ ನಿರ್ಬಂಧಕಾಜ್ಞೆ ಆದೇಶವನ್ನು ರದ್ದು ಪಡಿಸಿ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ; ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಫೋಟೋಗಳನ್ನು ಡಿ. ರೂಪಾ ಹಂಚಿಕೊಂಡಿದ್ದರು. ಅಲ್ಲದೇ, ರೋಹಿಣಿ ಸಿಂಧೂರಿ ವಿರುದ್ಧ ಕೆಲ ಆರೋಪಗಳನ್ನು ಮಾಡಿದ್ದರು. ಈ ನಡುವೆ ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆಗಳು, ಫೋಟೋಗಳನ್ನು ಪ್ರಕಟ ಮಾಡದಂತೆ ಡಿ. ರೂಪಾ ಮತ್ತು ಇತರೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ರೋಹಿಣಿ ಸಿಂಧೂರಿ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ 2023ರ ಫೆಬ್ರವರಿ 23 ರಂದು ಏಕಪಕ್ಷೀಯವಾಗಿ (ಎಕ್ಸ್ಪಾರ್ಟಿ) ನಿರ್ಬಂಧಕಾಜ್ಞೆ ವಿಧಿಸಿತ್ತು. ಅಲ್ಲದೆ, ಪ್ರತಿವಾದಿಗೆ ನೋಟಿಸ್ ಜಾರಿ ಮಾಡಿತ್ತು. ಇದರ ಮುಂದುವರೆದ ಭಾಗವಾಗಿ ನೋಟಿಸ್ ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ಅರ್ಜಿದಾರರಿಗೆ ತಲುಪಿಸಬೇಕಾಗಿತ್ತು.
ಆದರೆ, ದೂರುದಾರರಾದ ರೋಹಿಣಿ ಸಿಂಧೂರಿ ಅವರು, ಎಲ್ಲಾ ದಾಖಲೆಗಳನ್ನು ರಿಜಿಸ್ಟ್ರರ್ ಪೋಸ್ಟ್ ಮೂಲಕ ಕಳುಹಿಸಿದ್ದೇವೆ ಎಂಬುದಾಗಿ ತಿಳಿಸಿ ಮಧ್ಯಂತರ ಅರ್ಜಿ ಸಲ್ಲಿಸಿ ನಿರ್ಬಂಧಕಾಜ್ಞೆ ಆದೇಶ ವಿಸ್ತರಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ನಿರ್ಬಂಧಕಾಜ್ಞೆಯನ್ನು ವಿಸ್ತರಿಸಿತ್ತು. ಇದನ್ನು ಪ್ರಶ್ನಿಸಿ ಡಿ. ರೂಪಾ ಹೈಕೋರ್ಟ್ ಮೆಟ್ಟಿಲೇರಿದ್ದರು.
ರೋಹಿಣಿ ಸಿಂಧೂರಿ ಮತ್ತು ಡಿ. ರೂಪಾ ಜಟಾಪಟಿ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕರ್ನಾಟಕ ಸರ್ಕಾರ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಈ ಕುರಿತು ತನಿಖೆ ನಡೆಸುವಂತೆ ಸೂಚನೆ ನೀಡಿತ್ತು. ಜಟಾಪಟಿ ಬೆಳಕಿಗೆ ಬಂದ ಬಳಿಕ ಇಬ್ಬರೂ ಅಧಿಕಾರಿಗಳನ್ನು ಸರ್ಕಾರ ಯಾವುದೇ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಿತ್ತು.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ












Click it and Unblock the Notifications