ವೈರಲ್ ವಿಡಿಯೋ: ರೋಹಿತ್ ಚಕ್ರತೀರ್ಥ ಐಐಟಿ ಪ್ರೊಫೆಸರ್ ಎಂದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ಬೆಂಗಳೂರು, ಮೇ25: ಕರ್ನಾಟಕ ರಾಜ್ಯದಲ್ಲಿ ಪಠ್ಯಪುಸ್ತಕ ವಿವಾದ ತಾರಕಕ್ಕೇರಿದೆ. ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಬಗ್ಗೆ ಶಿಕ್ಷಣ ಸಚಿವರ ಮಾತು ನಗೆಪಾಟಲಿಗೆ ಈಡಾಗಿದೆ. ಸದ್ಯ ಈ ವೀಡಿಯೊ ಎಲ್ಲೆಡೆ ವೈರಲ್ ಆಗುತ್ತಿದೆ.
ಐಐಟಿ ಪ್ರಾಧ್ಯಾಪಕ, ಸಿಇಟಿ ಪ್ರಾಧ್ಯಾಪಕ
ಶಿಕ್ಷಣ ಸಚಿವರಿಗೆ ಪತ್ರಕರ್ತರಿಂದ ಪ್ರಶ್ನೆಗಳು ತೂರಿ ಬರುತ್ತಿದ್ದವು. ಶಿಕ್ಷಣ ಸಚಿವರು ಪಠ್ಯ ಪರಿಷ್ಕರಣೆಯನ್ನು ಮಾಡಿದ್ದನ್ನು ಸಮರ್ಥಿಸಿಕೊಳ್ಳುತ್ತಿದ್ದರು. ಕಾಂಗ್ರೆಸ್ ಅನ್ನು ಟೀಕಿಸುತ್ತಿದ್ದರು. ಇದೇ ವೇಳೆಯಲ್ಲಿ ರೋಹಿತ್ ಚಕ್ರತೀರ್ಥ ಅವರ ಹಿನ್ನೆಲೆ ಏನು ಎಂದು ಕೇಳಲಾಗಿತ್ತು. ಸಚಿವರು ಇಲ್ಲಿ ಕುಳಿತವರು ಯಾರಿಗೆ ರೋಹಿತ್ ಚಕ್ರತೀರ್ಥ ಹಿನ್ನೆಲೆ ಗೊತ್ತಿದೆ. ಅವರು ಪ್ರಾಧ್ಯಾಪಕರು, ಪ್ರೊಫೆಸರ್ ಆಗಿದ್ದರು ಎಂದು ಉದ್ವೇಗವಾಗಿಯೇ ಮಾತನಾಡುತ್ತಾ, "ಐಐಟಿ ಪ್ರೊಫೆಸರ್ ಮತ್ತು ಸಿಇಟಿ ಪ್ರಾಧ್ಯಪಕ," ಎಂದು ಹೇಳಿದರು. ಸಚಿವರ ಈ ಮಾತುಗಳು ಈಗ ನಗೆಪಾಟಲಿಗೀಡಾಗುವಂತೆ ಮಾಡಿದೆ.

ಅಸಲಿಗೆ ರೋಹಿತ್ ಚಕ್ರತೀರ್ಥ ಕಂಪ್ಲೀಟ್ ಪ್ರೋಫೈಲ್ ಸರಿಯಾಗಿ ಯಾರಿಗೂ ತಿಳಿದಿದ್ದ. ಅವರ ಬರಹಗಳಿಗೆ ಕರ್ನಾಟಕದಲ್ಲಿ ಜನಪ್ರಿಯತೆಯಾಗಲೀ ಮನ್ನಣೆಯಾಗಲಿ ಸಿಕ್ಕಿಲ್ಲ. ಇಷ್ಟಾಗಿಯೂ ಪಠ್ಯ ಪರಿಷ್ಕರಣೆಯ ಸಮಿತಿಗೆ ರೋಹಿತ್ ಚಕ್ರತೀರ್ಥರನ್ನು ಅಧ್ಯಕ್ಷರನ್ನಾಗಿಸಿದ್ದು ಟೀಕೆಗೆ ಕಾರಣವಾಗುದ್ದರೇ, ಮತ್ತೊಂದೆಡೆ ಶಿಕ್ಷಣ ಸಚಿವರು ಮಾತಿನ ಬರದಲ್ಲೋ ಉದ್ವೇಗದಲ್ಲೋ ಆಡಿದ ಮಾತು ಸಖತ್ ವೈರಲ್ ಆಗುತ್ತಿದೆ. ಐಐಟಿ ಒಕೆ ಸಿಇಟಿ ಪ್ರಾಧ್ಯಾಪಕ ಅಂದ್ರೆ ಏನು ಅಂತೆಲ್ಲಾ ಸಮಾಜಿಕ ಜಾಲ ತಾಣಗಳಲ್ಲಿ ಗೇಲಿ ಮಾಡುತ್ತಿದ್ದಾರೆ.
ಶಿಕ್ಷಣ ಸಚಿವ ಬಿಸಿನಾಗೇಶ್ ಸ್ಪಷ್ಟನೆ
ಶಿಕ್ಷಣ ಸಚಿವರನ್ನು ಈ ಕುರಿತು ಮರುಪ್ರಶ್ನಿಸಿದಾಗ ""ಮಾತಿನ ಬರದಲ್ಲಿ ಐಐಟಿ ಪ್ರೋಫೆಸರ್ ಎಂಬುದನ್ನು ಹೇಳಿದ್ದೇನೆ. ರೋಹಿತ್ ಚಕ್ರತೀರ್ಥರವರು ಅಥಿತಿ ಉಪನ್ಯಾಸಕರಾಗಿ, ಬರಹಗಾರರಾಗಿ, ಚಿಂತಕರಾಗಿ ಗುರುತಿಸಿಕೊಂಡಿದ್ದಾರೆ'' ಎಂದು ತಮ್ಮ ಸಮರ್ಥನೆಯನ್ನು ನೀಡಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications