ಖಾತೆ ಹಂಚಿಕೆಯಾಗದಿದ್ದರೂ ಕೊಠಡಿ ಹಂಚಿಕೆಯಂತೂ ಆಯಿತು!
ಬೆಂಗಳೂರು, ಜೂನ್ 8: ಸಮ್ಮಿಶ್ರ ಸರ್ಕಾರದ ಮೊದಲ ಹಂತದ ಸಂಪುಟ ವಿಸ್ತರಣೆ ವೇಳೆ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಸಚಿವರಿಗೆ ಇನ್ನೂ ಯಾವ ಖಾತೆ ಎಂಬುದು ಅಧಿಕೃತವಾಗಿ ಘೋಷಣೆಯಾಗಿಲ್ಲ.
ಖಾತೆ ಘೋಷಣೆಗೆ ವಿಳಂಬವಾಗಿರುವುದರಿಂದ ಈಗಾಗಲೇ ವಿಧಾನಸೌಧ ಮತ್ತು ವಿಕಾಸಸೌಧಗಳಲ್ಲಿ ಈ ಸಚಿವರಿಗೆ ಕೊಠಡಿಗಳ ಹಂಚಿಕೆ ಮಾಡಲಾಗಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ನ ಸಚಿವರಿಗೆ ಗುರುವಾರದಿಂದಲೇ ಜಾರಿಗೆ ಬರುವಂತೆ ಕೊಠಡಿಗಳನ್ನು ನೀಡಿ ಸರ್ಕಾರ ಆದೇಶ ಮಾಡಿದೆ.

ಆರು ಮಂದಿ ಸಚಿವರಿಗೆ ವಿಕಾಸಸೌಧದಲ್ಲಿ ಕೊಠಡಿ ನೀಡಲಾಗಿದ್ದರೆ, ಉಳಿದ 19 ಸಚಿವರಿಗೆ ವಿಧಾನಸೌಧದಲ್ಲಿ ಕೊಠಡಿ ನೀಡಲಾಗಿದೆ.
ಎಚ್.ಡಿ. ರೇವಣ್ಣ, ಆರ್.ವಿ. ದೇಶಪಾಂಡೆ, ಡಿ.ಕೆ. ಶಿವಕುಮಾರ್, ಬಂಡೆಪ್ಪ ಕಾಶೆಂಪೂರ, ಕೆ.ಜೆ. ಜಾರ್ಜ್, ಡಿ.ಸಿ. ತಮ್ಮಣ್ಣ, ಮನಗೂಳಿ, ರಮೇಶ್ ಜಾರಕಿಹೊಳಿ, ಜಯಮಾಲ, ಸಾ.ರಾ. ಮಹೇಶ್ ಮುಂತಾದವರಿಗೆ ವಿಧಾನಸೌಧದಲ್ಲಿ ಕೊಠಡಿ ನೀಡಲಾಗಿದೆ.
ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ, ಶಿವಾನಂದ ಪಾಟೀಲ್, ರಾಜಶೇಖರ್ ಪಾಟೀಲ್, ಜಮೀರ್ ಅಹ್ಮದ್, ಯು.ಟಿ. ಖಾದರ್ ಅವರಿಗೆ ವಿಕಾಸ ಸೌಧದಲ್ಲಿ ಕೊಠಡಿಗಳನ್ನು ಹಂಚಲಾಗಿದೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications