‘ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು’ ರಥ ನಿಮ್ಮ ಜಿಲ್ಲೆಗೆ
ರಾಜ್ಯದ ಕಲೆ,ಸಾಹಿತ್ಯ,ಸಂಸ್ಕೃತಿ ಬಿಂಬಿಸುವ‘ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು’ಕನ್ನಡ ರಥಗ'ಳಿಗೆ ಮಂಗಳವಾರ ಸಿಎಂ ಸಿದ್ದರಾಮಯ್ಯ ಹಸಿರು ನಿಶಾನೆ ತೋರಿದರು.ನ.2ರಿಂದ11 ರವರೆಗೆ ಮೂರು ಮಾರ್ಗಗಳಾಗಿ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸಲಿವೆ.
ಬೆಂಗಳೂರು,ನವೆಂಬರ್. 02 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ರಾಜ್ಯದ ಕಲೆ, ಸಾಹಿತ್ಯ, ಸಂಸ್ಕೃತಿ ಬಿಂಬಿಸುವ 'ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು' ಎಂಬ ಹೆಸರಿನ ಮೂರು ಪ್ರತ್ಯೇಕ 'ಕನ್ನಡ ರಥ'ಗಳು ನವೆಂಬರ್ 2 ರಿಂದ 11 ರವರೆಗೆ ಮೂರು ಮಾರ್ಗಗಳಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸಲಿವೆ.
ರಾಜ್ಯವ್ಯಾಪಿ ಸಂಚರಿಸುವ ಮೂರು ವಿಶೇಷ ಕನ್ನಡ ರಥಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ವಿಧಾನ ಸೌಧದ ಮುಂಭಾಗದಲ್ಲಿ ಹಸಿರು ನಿಶಾನೆ ತೋರಿದರು. ಕಾವೇರಿ, ಕೃಷ್ಣೆ, ತುಂಗಭದ್ರಾ ಹೆಸರಿನ ಈ ರಥಗಳು ನವೆಂಬರ್ 1 ರಂದು ಬೆಂಗಳೂರಿನಿಂದ ಹೊರಟು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಿ ಕನ್ನಡದ ಹಿರಿಮೆ ಗರಿಮೆ ಬಿಂಬಿಸಲಿವೆ. [ಕರ್ನಾಟಕ ಏಕೀಕರಣಕ್ಕೆ 60ರ ಸಂಭ್ರಮ, ರಾಜ್ಯದ ಎಲ್ಲೆಡೆ ಕನ್ನಡ ರಥ]
ವಾತಾ೯ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನವೆಂಬರ್ 1 ರಿಂದ 15 ದಿನಗಳ ಕಾಲ 'ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು' 'ಕನ್ನಡ ರಥ' ವಿಶೇಷ ಪ್ರಚಾರ ಕಾಯ೯ಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಮ್ಮಿಕೊಂಡಿದೆ. [ಕನ್ನಡ ನಾಡಗೀತೆ ಹೊಸ ಆವೃತ್ತಿಯ ಸಂಗೀತದಲ್ಲಿ ಕೇಳಿ ಆನಂದಿಸಿ]
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಂ. ಲಕ್ಷ್ಮೀ ನಾರಾಯಣ ಹಾಗೂ ಇಲಾಖೆಯ ನಿರ್ದೇಶಕರಾದ ಎನ್. ಆರ್. ವಿಶುಕುಮಾರ್ ಅವರು ಉಪಸ್ಥಿತರಿದ್ದರು. [ಕನ್ನಡ ರಾಜ್ಯೋತ್ಸವಕ್ಕೆ ನರೇಂದ್ರ ಮೋದಿ ಶುಭಾಶಯ]
ಇನ್ನು ಈ ಕನ್ನಡ ರಥ ಯಾತ್ರೆ ಯಾವ ಜಿಲ್ಲೆಗೆ ಯಾವಾಗ ತಲುಪಲಿದೆ ಎಂಬುವುದನ್ನು ತಿಳಿಯಲು ಮುಂದೆ ಓದಿ.

ಕನ್ನಡ ರಥ ಸಂಚರಿಸುವ ಮಾರ್ಗ-1
'ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು' ರಥವು ನ. 2 ರಂದು ತುಮಕೂರು, 3 ರಂದು ಚಿತ್ರದುರ್ಗ, 4 ರಂದು ಬಳ್ಳಾರಿ, 5 ರಂದು ಕೊಪ್ಪಳ, 6 ರಂದು ಗದಗ, 7 ರಂದು ಬಾಗಲಕೋಟೆ, 8 ರಂದು ರಾಯಚೂರು, 9 ರಂದು ಯಾದಗಿರಿ, 10 ರಂದು ಕಲಬುರಗಿ, 11 ರಂದು ಬೀದರ್ ಜಿಲ್ಲೆಗಳಲ್ಲಿ ಸಂಚರಿಸಲಿದೆ.

ಕನ್ನಡ ರಥ ಯಾತ್ರೆ ಮಾರ್ಗ-2
ರಥವು ನ. 2 ರಂದು ಹಾಸನ, 3 ರಂದು ಚಿಕ್ಕಮಗಳೂರು, 4 ರಂದು ಶಿವಮೊಗ್ಗ, 5 ರಂದು ದಾವಣಗೆರೆ, 6 ರಂದು ಹಾವೇರಿ, 7 ರಂದು ಉತ್ತರಕನ್ನಡ, 8 ರಂದು ಧಾರವಾಡ, 9 ರಂದು ಬೆಳಗಾವಿ, 10 ರಂದು ವಿಜಯಪುರ ಜಿಲ್ಲೆಯಲ್ಲಿ ಸಂಚರಿಸಲಿದೆ.

ಕನ್ನಡ ರಥ ಮಾರ್ಗ-3
ರಥವು ನ. 2 ರಂದು ಕೋಲಾರ, 3 ರಂದು ಚಿಕ್ಕಬಳ್ಳಾಪುರ, 4 ರಂದು ರಾಮನಗರ, 5 ರಂದು ಮಂಡ್ಯ, 6 ರಂದು ಚಾಮರಾಜನಗರ, 7 ರಂದು ಮೈಸೂರು, 8 ರಂದು ಮಡಿಕೇರಿ, 9 ರಂದು ಮಂಗಳೂರು, ನ. 10 ರಂದು ಉಡುಪಿ ಜಿಲ್ಲೆಗಳಲ್ಲಿ ಸಂಚರಿಸಲಿದೆ.

‘ಗಾನ-ಯಾನ’ ಕಾರ್ಯಕ್ರಮ
'ಗಾನ-ಯಾನ' ಕನ್ನಡ ರಥವು ತಂಗಲಿರುವ ಜಿಲ್ಲೆಗಳ ಜಿಲ್ಲಾ ಕೇಂದ್ರದಲ್ಲಿ, ಕನ್ನಡ ಏಕೀಕರಣವನ್ನು ನೆನಪಿಸುವ ರೀತಿಯಲ್ಲಿ ರಾಜ್ಯದ ಖ್ಯಾತ ಗಾಯಕರುಗಳಿಂದ ಕನ್ನಡ ಹಾಡುಗಳನ್ನು ಪ್ರಸ್ತುತಪಡಿಸುವ 'ಗಾನ-ಯಾನ' ಕಾರ್ಯಕ್ರಮ ಸಹ ಆಯಾ ಆಯಾ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಯೋಜಿಸಲಾಗಿದೆ.

ಅರ್ಥಪೂರ್ಣವಾಗಿ ಆಚರಿಸುವಂತೆ ಕೋರಿಕೆ
ಕನ್ನಡ ರಥ ಆಗಮಿಸುವ ಜಿಲ್ಲೆಗಳಲ್ಲಿ, ಆಯಾ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸ್ಥಳೀಯ ಸಂಘ ಸಂಸ್ಥೆಗಳು, ಕನ್ನಡ ಪರ ಸಂಘಟನೆಗಳು, ರಥವನ್ನು ಸ್ವಾಗತಿಸಿ, ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾದ ಎನ್.ಆರ್. ವಿಶುಕುಮಾರ್ ಅವರು ಕೋರಿದ್ದಾರೆ.
-
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications