Breaking; ಬಿಜೆಪಿ ಕಚೇರಿ ಮುಂದೆ ರೌಡಿಗಳ ಪರೇಡ್, ಕಾಂಗ್ರೆಸ್ ಟೀಕೆ
ಬೆಂಗಳೂರು, ನವೆಂಬರ್ 30; 'ಮೊದಲೆಲ್ಲ ರೌಡಿ ಶೀಟರ್ಗಳು ಪೊಲೀಸರೆದುರು ಪರೇಡ್ ನಡೆಸುತ್ತಿದ್ದರು. ಈಗ ಬಿಜೆಪಿ ಕಚೇರಿ ಮುಂದೆ ಪಕ್ಷ ಸೇರಲು ಪರೇಡ್ ನಡೆಸಲು ಸಜ್ಜಾಗಿದ್ದಾರೆ' ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮೂಲಕ ಟೀಕೆ ಮಾಡಿದೆ.
ಗುರುವಾರ ಕರ್ನಾಟಕ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ. ರೌಡಿ ಶೀಟರ್ಗಳು ಬಿಜೆಪಿ ಸೇರುತ್ತಿರುವ ವಿಚಾರ ಚರ್ಚೆಯಾಗುತ್ತಿರುವಾಗಲೇ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.
ರೌಡಿ ಸೈಲೆಂಟ್ ಸುನೀಲನಿಗೆ ಬೇನಾಮಿ ಹೆಸರಲ್ಲಿ ಕಸದ ಟೆಂಡರ್ ಕೊಡಿಸಿದ ಸಚಿವ: ಕಾಂಗ್ರೆಸ್ ಗಂಭೀರ ಆರೋಪ
'ರೌಡಿಗಳೊಂದಿಗೆ ಬಿಜೆಪಿಗರ ಬಾಂಧವ್ಯ ಹೊರಬರುತ್ತಿರುವಾಗ ಮತ್ತೊಬ್ಬ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಸಚಿವ ಸೊಮ್ಮಣ್ಣನವರ ಮನೆಗೆ ಭೇಟಿ ನೀಡಿದ್ದು ಬಿಜೆಪಿಯ ರೌಡಿ ಮೋರ್ಚಾಗೆ ಶಕ್ತಿ ನೀಡವುದಕ್ಕಾ?' ಎಂದು ಲೇವಡಿ ಮಾಡಿದೆ.
ಸೈಲೆಂಟ್ ಸುನೀಲನ ವಿವಾದ: ರೌಡಿ ಶೀಟರ್ಗಳಿಗೆ ಮನ್ನಣೆ ಕೊಡುವುದಿಲ್ಲ ಎಂದ ಸಿಎಂ ಬೊಮ್ಮಾಯಿ
'ಬಿಜೆಪಿ ನಾಯಕರು, ಸಚಿವರೆಲ್ಲ ಸಾಲು ಸಾಲಾಗಿ ರೌಡಿಗಳೊಂದಿಗೆ ಕುಚಿಕು ಕುಚಿಕು ಡಾನ್ಸ್ ಆಡುತ್ತಾ ಭೂಗತಲೋಕವನ್ನು ಮಟ್ಟ ಹಾಕುವ ಪೊಲೀಸರ ಸ್ಥೈರ್ಯವನ್ನು ಕುಸಿಯುವಂತೆ ಮಾಡಿದ್ದಾರೆ' ಎಂದು ಕಾಂಗ್ರೆಸ್ ಆರೋಪಿಸಿದೆ.
ರೌಡಿ ಸೈಲೆಂಟ್ ಸುನೀಲನ ಜೊತೆ ಬಿಜೆಪಿ ನಾಯಕರು: ವಿಡಿಯೊ ಹಂಚಿಕೊಂಡ ಕಾಂಗ್ರೆಸ್
'ರೌಡಿಗಳ ಕಾಲರ್ ಹಿಡಿದು ಎಳೆದು ತರುತ್ತಿದ್ದ ಪೊಲೀಸರು ಈಗ ಅದೇ ರೌಡಿಗಳಿಗೆ ಎಸ್ಕಾರ್ಟ್ ಒದಗಿಸುವಂತಹ ಸ್ಥಿತಿ ನಿರ್ಮಿಸಿದೆ' ಎಂದು ಬಿಜೆಪಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದೆ.
'ನಮ್ಮ ಅವಧಿಯಲ್ಲಿ ಸಮಾಜ ಕಂಟಕರಾಗಿದ್ದ ರೌಡಿಗಳ ಎನ್ಕೌಂಟರ್ಗಳಾಗಿದ್ದವು, ರೌಡಿಗಳನ್ನು ಮಟ್ಟಹಾಕಲು ಪೊಲೀಸರಿಗೆ ಸ್ವತಂತ್ರ ನೀಡಲಾಗಿತ್ತು. ಆದರೆ ಈಗ ಬಿಜೆಪಿಗರ ಸಖ್ಯದಿಂದ ರೌಡಿಗಳು ಪೊಲೀಸರೆದುರು ಎದೆ ಉಬ್ಬಿಸಿಕೊಂಡು ನಡೆಯುತ್ತಿದ್ದಾರೆ, ಪೊಲೀಸರೆದುರು ರೌಡಿಗಳೆದುರು ತಲೆ ತಗ್ಗಿಸಿ ನಿಲ್ಲುವಂತೆ ಅವರ ನೈತಿಕ ಸ್ಥೈರ್ಯ ಕುಸಿದಿದೆ'
'ರೌಡಿಗಳಿಗೂ ಬಿಜೆಪಿ ನಾಯಕರಿಗೂ ಏನು ಸಂಬಂಧ?. ಏನು ವ್ಯವಹಾರ?, ಯಾವ ನಂಟು?. ಸೈಲೆಂಟ್ ಸುನೀಲ, ಫೈಟರ್ ರವಿ, ಬೆತ್ತನಗೆರೆ ಶಂಕರ ಬಿಜೆಪಿ ಜೊತೆಗೆ ಗುರುತಿಸಿಕೊಂಡ ನಂತರ ವಿಲ್ಸನ್ ಗಾರ್ಡನ್ ನಾಗ ಎಂಬ ರೌಡಿ ಶೀಟರ್ ನಿನ್ನೆ ರಾತ್ರಿ ಸಚಿವ ವಿ. ಸೋಮಣ್ಣ ಮನೆಗೆ ಬಂದಿದ್ದೇಕೆ?. ಆತನೂ ಬಿಜೆಪಿ ರೌಡಿ ಮೋರ್ಚಾ ಸೇರುವ ಸಂಭವವಿದೆಯೇ? ಬಿಜೆಪಿ ಕರ್ನಾಟಕ' ಎಂದು ಕಾಂಗ್ರೆಸ್ ಕೇಳಿದೆ.