ಆರ್. ಆರ್. ನಗರ, ಶಿರಾ ಉಪ ಚುನಾವಣೆ ಫಲಿತಾಂಶ
ಬೆಂಗಳೂರು, ನವೆಂಬರ್ 10 : ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಇಂದು ನಡೆಯಿತು. ರಾಜ್ಯಾದ್ಯಂತ ಉಪ ಚುನಾವಣೆ ಫಲಿತಾಂಶ ಭಾರಿ ಕುತೂಹಲ ಹುಟ್ಟು ಹಾಕಿತ್ತು. ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಜಯಗಳಿಸಿದೆ.
ಮಂಗಳವಾರ ಬೆಂಗಳೂರು ಮತ್ತು ತುಮಕೂರಿನಲ್ಲಿ ಮತ ಎಣಿಕೆ ನಡೆಯಿತು. ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿಯ ಮುನಿರತ್ನ ಭಾರಿ ಅಂತರದಲ್ಲಿ ಗೆಲುವು ಕಂಡರು. ಶಿರಾದಲ್ಲಿ ಮೊದಲ ಬಾರಿಗೆ ಗೆಲ್ಲುವ ಮೂಲಕ ಬಿಜೆಪಿ ಇತಿಹಾಸ ನಿರ್ಮಾಣ ಮಾಡಿದೆ.
Bihar Election Results 2020 Live Updates: ಮತ ಎಣಿಕೆ ಕಾರ್ಯಕ್ಕೆ ಕ್ಷಣಗಣನೆ
ಶಿರಾ ಕ್ಷೇತ್ರದಲ್ಲಿ ಶೇ 84.54 ಮತ್ತು ಆರ್. ಆರ್. ನಗರದಲ್ಲಿ 45.24ರಷ್ಟು ಮತದಾನವಾಗಿತ್ತು. ಉಪ ಚುನಾವಣೆ ಫಲಿತಾಂಶದಿಂದಾಗಿ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರ ಬಲ ಹೆಚ್ಚಾಗಿದೆ. ಸಚಿವ ಸಂಪುಟ ವಿಸ್ತರಣೆ ಚರ್ಚೆಗಳು ಆರಂಭವಾಗಲಿದೆ.
2018ರಲ್ಲಿ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿರಲಿಲ್ಲ. ಈಗ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಅಸ್ತಿತ್ವದಲ್ಲಿ ಇರುವುದರಿಂದ ಸರ್ಕಾರದ ಪರವಾದ ಫಲಿತಾಂಶ ಬಂದಿದೆ. ಎರಡೂ ಕ್ಷೇತ್ರದ ಫಲಿತಾಂಶ ಕ್ಷಣ-ಕ್ಷಣದ ಮಾಹಿತಿ ಇಲ್ಲಿದೆ.
ಆರ್. ಆರ್. ನಗರ ನನ್ನ ಕರ್ಮ ಭೂಮಿ; ಹೆಚ್. ಕುಸುಮಾ
ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಸೋಲನ್ನು ನಾವು ವಿನೀತರಾಗಿ ಒಪ್ಪಿಕೊಂಡಿದ್ದೇವೆ. ಆದರೆ ಇದು ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎನ್ನುವುದು ವಿಷಾದದ ಸಂಗತಿ. 1/7#BypollResults
— Siddaramaiah (@siddaramaiah) November 10, 2020
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ಹಾಗೂ ಶಿರಾ ವಿಧಾಸಭಾ ಕ್ಷೇತ್ರದ ಉಪಚುನಾವಣೆ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಲಾಯಿತು.#KarnatakaBypollResults pic.twitter.com/4rNlS2f83c
— Aravind Limbavali (@ArvindLBJP) November 10, 2020
BREAKING NEWS: ಆರ್.ಆರ್ ನಗರದಲ್ಲಿ ಗೆಲುವಿನತ್ತ ಬಿಜೆಪಿ
— oneindiakannada (@OneindiaKannada) November 10, 2020
ಕ್ಷಣ-ಕ್ಷಣದ ಮಾಹಿತಿ : https://t.co/XsbihgaJzP#RRnagar #Byelectionresults2020 #karnatakaByelectionresults #Munirathna #Kusuma pic.twitter.com/aaYt8oUe77
ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಹೇಳಿಕೆ
— oneindiakannada (@OneindiaKannada) November 10, 2020
ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಜನ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಹೇಳಿದಂತೆ ಇದು ಮುಂದಿನ ವಿಧಾನಸಭಾ ಚುನಾವಣೆಯ ದಿಕ್ಸೂಚಿ #KSEshwarappa @KSEBJP #Byelectionresults2020 #karnatakaByelectionresults pic.twitter.com/NjKSbTsf6o