ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ವಿಧಾನಸೌಧದಲ್ಲಿ ಬ್ಯಾಗ್‌ನಲ್ಲಿ 10 ಲಕ್ಷ ರೂ. ಪತ್ತೆ

|
Google Oneindia Kannada News

ಬೆಂಗಳೂರು, ಜನವರಿ 05; ವಿಧಾನಸೌಧಕ್ಕೆ ಆಗಮಿಸಿದ್ದ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಬ್ಯಾಗ್‌ನಲ್ಲಿ 10 ಲಕ್ಷ ರೂ. ನಗದು ಹಣ ಪತ್ತೆಯಾಗಿದೆ. ಹಣವನ್ನು ಪೊಲೀಸರಿಗೆ ಒಪ್ಪಿಸಲಾಗಿದೆ.

ಲೋಕೋಪಯೋಗಿ ಇಲಾಖೆ ಕಿರಿಯ ಇಂಜಿನಿಯರ್ ಜಗದೀಶ್ ಎಂಬುವವರ ಬ್ಯಾಗ್‌ನಲ್ಲಿ 10 ಲಕ್ಷ ರೂ. ಹಣ ಪತ್ತೆಯಾಗಿದೆ. ವಿಧಾನಸೌಧದ ಭದ್ರತಾ ಸಿಬ್ಬಂದಿ ಹಣವನ್ನು ಜಪ್ತಿ ಮಾಡಿದ್ದಾರೆ.

ಎಟಿಎಂನಲ್ಲಿ ಬರಲಿಲ್ಲ ಹಣ, ಖಾತೆಯಿಂದ ಕಡಿತ; ಬ್ಯಾಂಕಿಗೆ 2 ಲಕ್ಷ ದಂಡ ಎಟಿಎಂನಲ್ಲಿ ಬರಲಿಲ್ಲ ಹಣ, ಖಾತೆಯಿಂದ ಕಡಿತ; ಬ್ಯಾಂಕಿಗೆ 2 ಲಕ್ಷ ದಂಡ

ವಿಧಾನಸೌಧಕ್ಕೆ ಆಗಮಿಸಿದಾಗ ಬ್ಯಾಗ್ ಪರಿಶೀಲನೆ ಮಾಡಲಾಗಿದೆ. ಆಗ ಹಣ ಇರುವುದು ಗೊತ್ತಾಗಿದೆ. ಆಗ ಭದ್ರತಾ ಸಿಬ್ಬಂದಿ ದಾಖಲೆ ಕೇಳಿದ್ದಾರೆ. ಆದರೆ ದಾಖಲೆಗಳು ಇಲ್ಲದ ಕಾರಣ ಹಣ ಜಪ್ತಿ ಮಾಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ.

ಚುನಾವಣೆಗೆ ಅಂದ್ಮೇಲೆ ಪಕ್ಷ ಹಣ ಕೊಡುವುದು ಸಹಜ: ಲೆಕ್ಕ ಕೇಳಲು ಶ್ರೀನಿವಾಸ ಪ್ರಸಾದ್ ಯಾರು? ಎಚ್‌.ವಿಶ್ವನಾಥ್ ಪ್ರಶ್ನೆ ಚುನಾವಣೆಗೆ ಅಂದ್ಮೇಲೆ ಪಕ್ಷ ಹಣ ಕೊಡುವುದು ಸಹಜ: ಲೆಕ್ಕ ಕೇಳಲು ಶ್ರೀನಿವಾಸ ಪ್ರಸಾದ್ ಯಾರು? ಎಚ್‌.ವಿಶ್ವನಾಥ್ ಪ್ರಶ್ನೆ

Rs 10 Lakh Recovered From Bag At Vidhana Soudha

ಹಣವನ್ನು ವಶಕ್ಕೆ ಪಡೆದಿರುವ ವಿಧಾನಸೌಧ ಠಾಣೆ ಪೊಲೀಸರು ಅಕ್ರಮ ಹಣ ಹೊಂದಿದ್ದ ಆರೋಪದಡಿ ಜಗದೀಶ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಪೊಲೀಸರು ವಿಚಾರಣೆಯನ್ನು ಮುಂದುವರೆಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮುಖ್ತಾರ್ ಅನ್ಸಾರಿಗೆ 10 ವರ್ಷ ಜೈಲು ಶಿಕ್ಷೆಅಕ್ರಮ ಹಣ ವರ್ಗಾವಣೆ ಪ್ರಕರಣ: ಮುಖ್ತಾರ್ ಅನ್ಸಾರಿಗೆ 10 ವರ್ಷ ಜೈಲು ಶಿಕ್ಷೆ

ಲೋಕೋಪಯೋಗಿ ಇಲಾಖೆ ಕಿರಿಯ ಇಂಜಿನಿಯರ್ ಜಗದೀಶ್ ಮಂಡ್ಯಕ್ಕೆ ಹೋಗುತ್ತಿದ್ದೆ. ಕೆಲಸ ಇದ್ದಿದ್ದರಿಂದ ವಿಧಾನಸೌಧಕ್ಕೆ ಆಗಮಿಸಿದ್ದೆ ಎಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.

ಆದರೆ ಹಣವನ್ನು ಎಲ್ಲಿಂದ ತಂದಿದ್ದರು, ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದರು? ಎಂಬುದಕ್ಕೆ ಯಾವುದೇ ದಾಖಲೆ ನೀಡಿಲ್ಲ. ಆದ್ದರಿಂದ ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂಗ್ರೆಸ್ ಟ್ವೀಟ್; ವಿಧಾನಸೌಧದಲ್ಲಿ 10 ಲಕ್ಷ ರೂ. ಹಣ ಸಿಕ್ಕ ಪ್ರಕರಣದ ಕುರಿತು ಕರ್ನಾಟಕ ಕಾಂಗೆಸ್ ಟ್ವೀಟ್ ಮಾಡಿದೆ, "ಕೆಲದಿನಗಳ ಹಿಂದೆ ವಿಧಾನಸೌಧದ ಆವರಣದಲ್ಲಿ ಹುದ್ದೆ ಮಾರಾಟದ ಡೀಲಿಂಗ್ ಮಾಡುತ್ತಿರುವುದು ಬೆಳಕಿಗೆ ಬಂದಿತ್ತು. ಬಿಜೆಪಿ ಶಾಸಕ ಬಸವರಾಜ್ ದಡೇಸಗೂರ ಶಾಸಕರ ಭವನದಲ್ಲಿ PSI ಅಭ್ಯರ್ಥಿ ಬಳಿ ಹಣ ಪಡೆದದ್ದು ಬೆಳಕಿಗೆ ಬಂದಿತ್ತು. ಈಗ 10 ಲಕ್ಷ ಲಂಚದ ಹಣ ವಿಧಾನಸೌಧದಲ್ಲಿ ಸಿಕ್ಕಿದೆ. ಬಿಜೆಪಿ ವಿಧಾನಸೌಧವನ್ನು ಭ್ರಷ್ಟಾಚಾರದ ಅಡ್ಡೆಯನ್ನಾಗಿಸಿದೆ" ಎಂದು ದೂರಿದೆ.

English summary
Rs 10 lakh recovered from bag belongs to The Public Works department (PWD) officer at Vidhana Soudha, Bengaluru. Police probing the case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X