KIADB: ನಿವೇಶನಗಳ ₹2,400 ಕೋಟಿ ಬಾಕಿ ಉಳಿಸಿಕೊಂಡವರ ವಿರುದ್ಧ ಸರ್ಕಾರ ಭ್ರಹ್ಮಾಸ್ತ್ರ
ಬೆಂಗಳೂರು, ನವೆಂಬರ್ 28; ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ (KIADB) ನಿವೇಶನ ಪಡೆದುಕೊಂಡು, ದಶಕಗಳಿಂದ ಹಾಗೆಯೇ ಉಳಿಸಿಕೊಂಡಿದ್ದ ಹಲವರಿಂದ ಕಳೆದ ಮೂರು ವಾರಗಳಲ್ಲಿ 115 ಕೋಟಿ ರೂ. ಬಾಕಿ ವಸೂಲಿ ಮಾಡಲಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ.
ಮಂಗಳವಾರ ಕೆಐಎಡಿಬಿಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಇಲಾಖೆಯು ಕೈಗೊಂಡಿರುವ ವಿವಿಧ ಉಪಕ್ರಮಗಳು ಮತ್ತು ಅನುಸರಣ ಕಾರ್ಯಗಳ ಪರಾಮರ್ಶೆ ನಡೆಸಿದರು. ನಂತರ ಮಾತನಾಡಿದ ಅವರು, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ (KIADB) ಕೈಗಾರಿಕಾ ನಿವೇಶನಗಳನ್ನು ಪಡೆದುಕೊಂಡಿದ್ದ ಸುಮಾರು ಎರಡು ಮೂರು ದಶಕಗಳಿಂದ ಹಣ ಪಾವತಿಸದೇ ಹಾಗೆಯೇ ಉಳಿಸಿಕೊಳ್ಳಲಾಗಿತ್ತು.

ಮಂಡಳಿಗೆ ನಿವೇಶನ ಪಡೆದವರಿಂದ ಒಟ್ಟು 2,400 ಕೋಟಿ ರೂಪಾಯಿ ಬಾಕಿ ಬರಬೇಕಾಗಿದೆ. ಇದರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಬಾಕಿ ವಸೂಲಿ ಮಾಡುವಂತೆ ಮೂರ್ನಾಲ್ಕು ವಾರಗಳ ಹಿಂದೆ ಮಂಡಲಿಯ ನಿರ್ದೇಶಕರುಗಳಿಗೆ ಸೂಚಿಸಲಾಗಿತ್ತು. ಇದರ ನಂತರ ಕ್ಷಿಪ್ರ ಗತಿಯಲ್ಲಿ 115 ಕೋಟಿ ರೂ. ವಸೂಲು ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಈ ವಸೂಲಿ ಕ್ರಮವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಸಚಿವರು ಹೇಳಿದರು.
ಸಚಿವಾಲಯದ ಅನುಮೋದನೆ ಪಡೆಯುತ್ತೇವೆ
ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿ ಕ್ಷಿಪ್ರ ಗತಿಯಲ್ಲಿ ಸಾಗುತ್ತಿದೆ. 2024ರ ಫೆಬ್ರವರಿಯಲ್ಲಿ ಉದ್ಘಾಟಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ, ಕೇಂದ್ರ ಸರ್ಕಾರದ ನಾಗರಿಕ ವಿಮಾನಯಾನ ಸಚಿವಾಲಯದಿಂದ ಅಗತ್ಯವಿರುವ ಅನುಮೋದನೆಗಳನ್ನೆಲ್ಲ ಪಡೆದುಕೊಳ್ಳಬೇಕು. ಜೊತೆಗೆ, ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇನ್ನು ಒಂದು ತಿಂಗಳಲ್ಲಿ ರಾತ್ರಿ ಹೊತ್ತಿನಲ್ಲೂ ವಿಮಾನ ಸೇವೆ ಆರಂಭವಾಗಲಿದೆ ಎಂದು ಅವರು ಹೇಳಿದರು.

ಹಾಸನ, ಬಳ್ಳಾರಿ ಮತ್ತು ರಾಯಚೂರಿನಲ್ಲಿ ವಿಮಾನ ನಿಲ್ದಾಣ ಕಾಮಗಾರಿಗಳ ಕಡೆಗೆ ಆದ್ಯತೆ ಕೊಡಲಾಗುವುದು. ಕಾರವಾರ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆ ಒಂದಿಷ್ಟು ಬಾಕಿ ಇದೆ. ಇದನ್ನು ತ್ವರಿತಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಬಜೆಟ್ನಲ್ಲಿ ಧರ್ಮಸ್ಥಳ, ಚಿಕ್ಕಮಗಳೂರು, ಕೊಡಗುಗಳಲ್ಲಿ ಏರ್-ಸ್ಟ್ರಿಪ್ಸ್ ನಿರ್ಮಾಣ ಘೋಷಿಸಲಾಗಿದೆ. ಅದನ್ನು ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಮೂಲಕ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ವಿವರಿಸಿದರು.
ಉತ್ತರ ಕನ್ನಡದ ತಡದಿಯನ್ನು ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಪರಿಸರ ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಜಾಗತಿಕ ಟೆಂಡರ್ ಕರೆಯಲಾಗುವುದು ಎಂದು ಪಾಟೀಲ್ ಹೇಳಿದರು.
ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ, ಕೈಗಾರಿಕಾ ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಸೇರಿದಂತೆ ಇತರ ಅಧಿಕಾರಿಗಳು ಸಭೆಯಲ್ಲಿ ಇದ್ದರು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications