ಹೋರಿಗಳ ವೀರ್ಯ ಸಂಸ್ಕರಣೆಗೆ 3 ಕೋಟಿ ರು ಅನುದಾನ
ದೇಶಿ ತಳಿ ದನಗಳ ಉತ್ಪಾದಕತೆಯನ್ನು ಉತ್ತಮಪಡಿಸುವ ಉದ್ದೇಶದಿಂದ ಅಮೃತ ಮಹಲ್, ಹಳ್ಳಿಕಾರ್, ದೇವಣಿ, ಖಿಲಾರ್, ಮಲ್ನಾಡ್ಗಿಡ್ಡ, ಕೃಷ್ಣಾ ವ್ಯಾಲಿಯಂತಹ ದೇಶಿ ತಳಿಯ ದನಗಳನ್ನು ಹೆಚ್ಚು, ಬಳಕೆಗೆ ತರುವಂತೆ ಮಾಡಲು ಪಶುಸಂಗೋಪನೆ ಇಲಾಖೆ ಉದ್ದೇಶಿಸಿದೆ.
ಕೊಪ್ಪಳ, ಫೆಬ್ರವರಿ 20 : ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕೊಪ್ಪಳ ಜಿಲ್ಲೆಯ ಮುನಿರಾಬಾದಿನಲ್ಲಿ ದೇಶಿ ತಳಿ ದನಗಳ ವೀರ್ಯ ಸಂಸ್ಕರಣಾ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ 3 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಎ. ಮಂಜು ಅವರು ಹೇಳಿದ್ದಾರೆ.
ತಾಲೂಕಿನ ಮುನಿರಾಬಾದಿನ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದ ಆವರಣದಲ್ಲಿ ಸೋಮವಾರದಂದು ಏರ್ಪಡಿಸಲಾಗಿದ್ದ ದೇಶಿ ತಳಿ ದನಗಳ ವೀರ್ಯ ಸಂಸ್ಕರಣಾ ಕೇಂದ್ರದ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ದೇಶಿ ತಳಿಗಳಿಂದ ಗುಣಮಟ್ಟದ ಹಾಲು ಉತ್ಪಾದನೆಯ ಜೊತೆಗೆ ಜನರ ಆರೋಗ್ಯ ಸುಧಾರಣೆ ಸಾಧ್ಯ ಎನ್ನುವ ಅಂಶವನ್ನು ತಜ್ಞರು ಸಂಶೋಧನೆಗಳಿಂದ ದೃಢಪಡಿಸಿದ್ದಾರೆ ಎಂದು ಅವರು ನುಡಿದರು. [ಬ್ರಾಹ್ಮಣ ಹುಡುಗನ ವೀರ್ಯಕ್ಕೆ ಭಾರೀ ಬೇಡಿಕೆ]

ದೇಶಿ ತಳಿ ದನಗಳ ಸಂರಕ್ಷಣೆ ಹಾಗೂ ದೇಶಿ ತಳಿ ದನಗಳ ಉತ್ಪಾದಕತೆಯನ್ನು ಉತ್ತಮಪಡಿಸುವ ಉದ್ದೇಶದಿಂದ ಅಮೃತ ಮಹಲ್, ಹಳ್ಳಿಕಾರ್, ದೇವಣಿ, ಖಿಲಾರ್, ಮಲ್ನಾಡ್ಗಿಡ್ಡ, ಕೃಷ್ಣಾ ವ್ಯಾಲಿಯಂತಹ ದೇಶಿ ತಳಿಯ ದನಗಳನ್ನು ಹೆಚ್ಚು, ಬಳಕೆಗೆ ತರುವಂತೆ ಮಾಡಲು ಪಶುಸಂಗೋಪನೆ ಇಲಾಖೆ ಉದ್ದೇಶಿಸಿದೆ.
ಇದಕ್ಕಾಗಿ ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಮುನಿರಾಬಾದಿನಲ್ಲಿ ದೇಶಿ ತಳಿ ದನಗಳ ವೀರ್ಯ ಸಂಸ್ಕರಣಾ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದ್ದು, ಕಟ್ಟಡ ಹಾಗೂ ಅಗತ್ಯ ಉಪಕರಣಗಳ ಖರೀದಿಗೆ 3 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಬರುವ 6 ತಿಂಗಳ ಒಳಗಾಗಿ ಈ ಕೇಂದ್ರ ಪ್ರಾರಂಭಗೊಂಡು ಲೋಕಾರ್ಪಣೆಯಾಗಲಿದೆ. [ಇಡೀ ಗ್ರಾಮ ಒಗ್ಗೂಡಿಸಿದ್ದ ಗೋವಿಗೆ ಅಂತಿಮ ನಮನ]
ದೇಶಿ ಹೋರಿಗಳಿಂದ ವೀರ್ಯವನ್ನು ಸಂಗ್ರಹಿಸಿ, ಸಂಸ್ಕರಿಸಿ, ರಾಜ್ಯದ ಎಲ್ಲ ಜಿಲ್ಲೆಗಳಿಗೆ, ಆಯಾ ಪ್ರದೇಶದ ಭೌಗೋಳಿಕ ಹವಾಗುಣಕ್ಕೆ ಹೊಂದಿಕೊಳ್ಳುವಂತಹ ದೇಶೀಯ ತಳಿಗಳ ದನಗಳನ್ನು ಆಯಾ ಭಾಗಕ್ಕೆ ಪೂರೈಕೆಯಾಗುವ ರೀತಿಯಲ್ಲಿ ವೀರ್ಯ ಸಂಸ್ಕರಣಾ ಕೇಂದ್ರ ಕಾರ್ಯ ನಿರ್ವಹಿಸಲಿದೆ.
ಇದಕ್ಕಾಗಿ 6.55 ಕೋಟಿ ರೂ. ಅನುದಾನವನ್ನು 2017-18ನೇ ಸಾಲಿಗೆ ಒದಗಿಸಲಾಗುವುದು. ರಾಜ್ಯದಲ್ಲಿ ಈ ಹಿಂದೆ ದಿನವೊಂದಕ್ಕೆ 59 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿತ್ತು. ಇಲಾಖೆ ಕೈಗೊಂಡ ಸುಧಾರಣಾ ಕ್ರಮಗಳಿಂದಾಗಿ ಇದೀಗ 72 ಲಕ್ಷ ಲೀ. ಹಾಲು ಸುಮಾರು 9 ಲಕ್ಷ ರೈತರಿಂದ ನಿತ್ಯ ಸಂಗ್ರಹವಾಗುತ್ತಿದೆ.
ಹಾಲು ಉತ್ಪಾದಕರಿಗೆ ನೀಡುತ್ತಿದ್ದ ಪ್ರೋತ್ಸಾಹಧನ 4 ರು.ಗಳಿಂದ 5 ರು.ಗೆ ಹೆಚ್ಚಿಸಲಾಗಿದ್ದು, ನಿತ್ಯ 3.5 ಕೋಟಿ ರು. ಪ್ರೋತ್ಸಾಹಧನ ಸಂಬಂಧಿಸಿದ ರೈತರ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿದೆ. ರೈತರು ಕೃಷಿಯ ಜೊತೆಗೆ ಹೈನುಗಾರಿಕೆ, ರೇಷ್ಮೆಯಂತಹ ಉಪ ಕಸುಬನ್ನು ಹೆಚ್ಚು, ಹೆಚ್ಚು, ಅಳವಡಿಸಿಕೊಂಡರೆ, ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಎ. ಮಂಜು ಅವರು ಹೇಳಿದರು.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications