ಹೋರಿಗಳ ವೀರ್ಯ ಸಂಸ್ಕರಣೆಗೆ 3 ಕೋಟಿ ರು ಅನುದಾನ
ದೇಶಿ ತಳಿ ದನಗಳ ಉತ್ಪಾದಕತೆಯನ್ನು ಉತ್ತಮಪಡಿಸುವ ಉದ್ದೇಶದಿಂದ ಅಮೃತ ಮಹಲ್, ಹಳ್ಳಿಕಾರ್, ದೇವಣಿ, ಖಿಲಾರ್, ಮಲ್ನಾಡ್ಗಿಡ್ಡ, ಕೃಷ್ಣಾ ವ್ಯಾಲಿಯಂತಹ ದೇಶಿ ತಳಿಯ ದನಗಳನ್ನು ಹೆಚ್ಚು, ಬಳಕೆಗೆ ತರುವಂತೆ ಮಾಡಲು ಪಶುಸಂಗೋಪನೆ ಇಲಾಖೆ ಉದ್ದೇಶಿಸಿದೆ.
ಕೊಪ್ಪಳ, ಫೆಬ್ರವರಿ 20 : ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕೊಪ್ಪಳ ಜಿಲ್ಲೆಯ ಮುನಿರಾಬಾದಿನಲ್ಲಿ ದೇಶಿ ತಳಿ ದನಗಳ ವೀರ್ಯ ಸಂಸ್ಕರಣಾ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದ್ದು, ಇದಕ್ಕಾಗಿ ರಾಜ್ಯ ಸರ್ಕಾರ 3 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ಎ. ಮಂಜು ಅವರು ಹೇಳಿದ್ದಾರೆ.
ತಾಲೂಕಿನ ಮುನಿರಾಬಾದಿನ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದ ಆವರಣದಲ್ಲಿ ಸೋಮವಾರದಂದು ಏರ್ಪಡಿಸಲಾಗಿದ್ದ ದೇಶಿ ತಳಿ ದನಗಳ ವೀರ್ಯ ಸಂಸ್ಕರಣಾ ಕೇಂದ್ರದ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ದೇಶಿ ತಳಿಗಳಿಂದ ಗುಣಮಟ್ಟದ ಹಾಲು ಉತ್ಪಾದನೆಯ ಜೊತೆಗೆ ಜನರ ಆರೋಗ್ಯ ಸುಧಾರಣೆ ಸಾಧ್ಯ ಎನ್ನುವ ಅಂಶವನ್ನು ತಜ್ಞರು ಸಂಶೋಧನೆಗಳಿಂದ ದೃಢಪಡಿಸಿದ್ದಾರೆ ಎಂದು ಅವರು ನುಡಿದರು. [ಬ್ರಾಹ್ಮಣ ಹುಡುಗನ ವೀರ್ಯಕ್ಕೆ ಭಾರೀ ಬೇಡಿಕೆ]

ದೇಶಿ ತಳಿ ದನಗಳ ಸಂರಕ್ಷಣೆ ಹಾಗೂ ದೇಶಿ ತಳಿ ದನಗಳ ಉತ್ಪಾದಕತೆಯನ್ನು ಉತ್ತಮಪಡಿಸುವ ಉದ್ದೇಶದಿಂದ ಅಮೃತ ಮಹಲ್, ಹಳ್ಳಿಕಾರ್, ದೇವಣಿ, ಖಿಲಾರ್, ಮಲ್ನಾಡ್ಗಿಡ್ಡ, ಕೃಷ್ಣಾ ವ್ಯಾಲಿಯಂತಹ ದೇಶಿ ತಳಿಯ ದನಗಳನ್ನು ಹೆಚ್ಚು, ಬಳಕೆಗೆ ತರುವಂತೆ ಮಾಡಲು ಪಶುಸಂಗೋಪನೆ ಇಲಾಖೆ ಉದ್ದೇಶಿಸಿದೆ.
ಇದಕ್ಕಾಗಿ ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಮುನಿರಾಬಾದಿನಲ್ಲಿ ದೇಶಿ ತಳಿ ದನಗಳ ವೀರ್ಯ ಸಂಸ್ಕರಣಾ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದ್ದು, ಕಟ್ಟಡ ಹಾಗೂ ಅಗತ್ಯ ಉಪಕರಣಗಳ ಖರೀದಿಗೆ 3 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. ಬರುವ 6 ತಿಂಗಳ ಒಳಗಾಗಿ ಈ ಕೇಂದ್ರ ಪ್ರಾರಂಭಗೊಂಡು ಲೋಕಾರ್ಪಣೆಯಾಗಲಿದೆ. [ಇಡೀ ಗ್ರಾಮ ಒಗ್ಗೂಡಿಸಿದ್ದ ಗೋವಿಗೆ ಅಂತಿಮ ನಮನ]
ದೇಶಿ ಹೋರಿಗಳಿಂದ ವೀರ್ಯವನ್ನು ಸಂಗ್ರಹಿಸಿ, ಸಂಸ್ಕರಿಸಿ, ರಾಜ್ಯದ ಎಲ್ಲ ಜಿಲ್ಲೆಗಳಿಗೆ, ಆಯಾ ಪ್ರದೇಶದ ಭೌಗೋಳಿಕ ಹವಾಗುಣಕ್ಕೆ ಹೊಂದಿಕೊಳ್ಳುವಂತಹ ದೇಶೀಯ ತಳಿಗಳ ದನಗಳನ್ನು ಆಯಾ ಭಾಗಕ್ಕೆ ಪೂರೈಕೆಯಾಗುವ ರೀತಿಯಲ್ಲಿ ವೀರ್ಯ ಸಂಸ್ಕರಣಾ ಕೇಂದ್ರ ಕಾರ್ಯ ನಿರ್ವಹಿಸಲಿದೆ.
ಇದಕ್ಕಾಗಿ 6.55 ಕೋಟಿ ರೂ. ಅನುದಾನವನ್ನು 2017-18ನೇ ಸಾಲಿಗೆ ಒದಗಿಸಲಾಗುವುದು. ರಾಜ್ಯದಲ್ಲಿ ಈ ಹಿಂದೆ ದಿನವೊಂದಕ್ಕೆ 59 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿತ್ತು. ಇಲಾಖೆ ಕೈಗೊಂಡ ಸುಧಾರಣಾ ಕ್ರಮಗಳಿಂದಾಗಿ ಇದೀಗ 72 ಲಕ್ಷ ಲೀ. ಹಾಲು ಸುಮಾರು 9 ಲಕ್ಷ ರೈತರಿಂದ ನಿತ್ಯ ಸಂಗ್ರಹವಾಗುತ್ತಿದೆ.
ಹಾಲು ಉತ್ಪಾದಕರಿಗೆ ನೀಡುತ್ತಿದ್ದ ಪ್ರೋತ್ಸಾಹಧನ 4 ರು.ಗಳಿಂದ 5 ರು.ಗೆ ಹೆಚ್ಚಿಸಲಾಗಿದ್ದು, ನಿತ್ಯ 3.5 ಕೋಟಿ ರು. ಪ್ರೋತ್ಸಾಹಧನ ಸಂಬಂಧಿಸಿದ ರೈತರ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿದೆ. ರೈತರು ಕೃಷಿಯ ಜೊತೆಗೆ ಹೈನುಗಾರಿಕೆ, ರೇಷ್ಮೆಯಂತಹ ಉಪ ಕಸುಬನ್ನು ಹೆಚ್ಚು, ಹೆಚ್ಚು, ಅಳವಡಿಸಿಕೊಂಡರೆ, ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಎ. ಮಂಜು ಅವರು ಹೇಳಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications