Ranjitha Murder: ರಂಜಿತಾ ಹತ್ಯೆ ಪ್ರಕರಣ; 50 ಲಕ್ಷ ಪರಿಹಾರ, 2 ಎಕರೆ ಜಮೀನು: ವಿಜಯೇಂದ್ರ ಆಗ್ರಹ
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದ ರಂಜಿತಾ ಬನಸೋಡೆ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಲ್ಲಾಪುರದಲ್ಲಿ ಪರಿಸ್ಥಿತಿ ಗಂಭೀರವಾಗಿದ್ದು, ಹಿಂದೂಪರ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸಿವೆ. ಇದರ ನಡುವೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು, ಮುಸ್ಲಿಂ ಯುವಕನ ಚಾಕು ಇರಿತದಿಂದ ಬರ್ಬರ ಹತ್ಯೆಗೊಳಗಾದ ದಲಿತ ಹಿಂದೂ ಯುವತಿ ರಂಜಿತಾ ಬನಸವಾಡೆ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು.
ರಂಜಿತಾ ತಾಯಿಯನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿ ವೈ ವಿಜಯೇಂದ್ರ ಅವರು, ರಂಜಿತಾ ಹತ್ಯಾ ಪ್ರಕರಣದ ಗಂಭೀರ ತನಿಖೆ ನಡೆಸುವಂತೆ ಆಗ್ರಹಿಸಿದರು. ಏಕೈಕ ಪಾಲಕಿಯಾದ ಯುವತಿಯ ಹತ್ಯೆಯಿಂದ ಹತ್ತು ವರ್ಷದ ಮಗ ಅನಾಥನಾಗಿದ್ದಾನೆ. ವಯೋವೃದ್ಧ ತಾಯಿ ದಿಕ್ಕುಗಾಣದಂತಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹತ್ಯೆಯಾದ ದಲಿತ ಹಿಂದು ಯುವತಿಯ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಣೆ ಮಾಡಬೇಕು. ದಲಿತ ಕುಟುಂಬಕ್ಕೆ 2 ಎಕರೆ ಜಮೀನು ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರ, ಗೃಹ ಇಲಾಖೆ ನಿಷ್ಕ್ರಿಯವಾಗಿರುವ ಪರಿಣಾಮವೇ ಇಂಥ ಪ್ರಕರಣಗಳು ಮರುಕಳಿಸುತ್ತಿವೆ. ಇಂಥ ಅಹಿತಕರ ಘಟನೆಗಳು ನಡೆದಾಗ ಪೊಲೀಸ್ ಇಲಾಖೆ ತನಿಖೆ ಪ್ರಾರಂಭಿಸುವ ಮುನ್ನವೇ ಗೃಹ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ಲವ್ ಜಿಹಾದ್ ಅಲ್ಲವೆಂದು ಕ್ಲೀನ್ ಚಿಟ್ ಕೊಡುತ್ತಿದ್ದಾರೆ. ಇದೆಲ್ಲದರ ಪರಿಣಾಮವೇ ಇಂಥ ದುಷ್ಕೃತ್ಯಗಳು ಮರುಕಳಿಸುತ್ತಿವೆ. ಇಂಥ ಪ್ರಕರಣ ನಡೆದಾಗ ತಪ್ಪು ಮಾಹಿತಿ ಕೊಡುವುದು, ಪ್ರಕರಣಗಳನ್ನು ಮುಚ್ಚಿ ಹಾಕುವುದು ನಡೆಯುತ್ತಿದೆ. ಇದೆಲ್ಲದರ ಪರಿಣಾಮವಾಗಿ ಯಲ್ಲಾಪುರದಲ್ಲಿ ಇಂಥ ದುರ್ಘಟನೆ ನಡೆದಿದೆ ಎಂದ ತಿಳಿಸಿದರು.
ಈ ಪ್ರಕರಣದ ಸಮರ್ಪಕ ತನಿಖೆ ನಡೆದು ಆ ಕುಟುಂಬಕ್ಕೂ ನ್ಯಾಯ ಲಭಿಸಬೇಕು. ಹಿಂದೂ ಸಮಾಜಕ್ಕೂ ನ್ಯಾಯ ಸಿಗಬೇಕು ಎಂದ ಅವರು, ಸರಿಯಾದ ರೀತಿ ತನಿಖೆ ನಡೆಸಿ ಎಂದು ಮುಖ್ಯಮಂತ್ರಿ ಮತ್ತು ಗೃಹ ಸಚಿವರನ್ನು ಆಗ್ರಹಿಸಿದರು. ಸಾವಿನ ಮನೆಯಲ್ಲಿ ರಾಜಕಾರಣ ನಮ್ಮದಲ್ಲ. ಮನುಷ್ಯತ್ವದ ರಾಜಕಾರಣ ಬಿಜೆಪಿಯದು ಎಂದ ಅವರು, ಪದೇಪದೇ ಇಂಥ ಘಟನೆಗಳು ಕರ್ನಾಟಕದಲ್ಲಿ ಮರುಕಳಿಸುತ್ತಿವೆ. ಇದು ಖಂಡನೀಯ ಎಂದು ತಿಳಿಸಿದರು. ಹುಬ್ಬಳ್ಳಿಯಲ್ಲಿ ಎರಡು ವರ್ಷಗಳ ಹಿಂದೆ ನೇಹಾ ಹಿರೇಮಠ್ ಘಟನೆಯನ್ನು ನಾವ್ಯಾರೂ ಮರೆತಿಲ್ಲ ಎಂದು ತಿಳಿಸಿದರು. ಬಿಜೆಪಿ ಏನಾದರೂ ಹೇಳಿಕೆ ಕೊಟ್ಟರೆ ನಮ್ಮನ್ನು ಕೋಮುವಾದಿಗಳೆಂದು ಬಣ್ಣ ಕೊಡುವ ಕೆಲಸ ಮಾಡುತ್ತಾರೆ ಎಂದರು.
ಬಿಜೆಪಿ ವತಿಯಿಂದ 5 ಲಕ್ಷ ರೂ. ಪರಿಹಾರ
ಬಿಜೆಪಿ ವತಿಯಿಂದ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದರು. ಐದನೇ ತರಗತಿಯಲ್ಲಿ ಓದುತ್ತಿರುವ ಹತ್ತು ವರ್ಷದ ಬಾಲಕನ ಮುಂದಿನ ಶಿಕ್ಷಣದ ಸಂಪೂರ್ಣ ಜವಾಬ್ದಾರಿಯನ್ನು ಪಕ್ಷದ ವತಿಯಿಂದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಹರಿಪ್ರಕಾಶ್ ಕೋಣೆಮನೆಯವರು ತೆಗೆದುಕೊಂಡಿದ್ದನ್ನು ಪ್ರಕಟಿಸಿ, ಸಂಸ್ಥೆಯ ಅಧ್ಯಕ್ಷರನ್ನು ಅಭಿನಂದಿಸಿದರು.
ವಿಧಾನ ಪರಿಷತ್ ಸದಸ್ಯ ಶಾಂತರಾಮ್ ಸಿದ್ದಿ, ರಾಜ್ಯ ವಕ್ತಾರರಾದ ಹರಿಪ್ರಕಾಶ್ ಕೋಣೆಮನೆ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ, ಯಲ್ಲಾಪುರ ಮಂಡಲ ಅಧ್ಯಕ್ಷ ಪ್ರಸಾದ್ ಹೆಗಡೆ, ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕೌತಾಲ್, ಮುಖಂಡರಾದ ಕೆ.ಜಿ.ನಾಯಕ್, ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಶೋಕ್ ಚಲವಾದಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವಾಜಿ ನರಸಾಣಿ ಮತ್ತು ಗುರುಪ್ರಸಾದ್ ಹೆಗಡೆ, ವಿ.ಎಚ್.ಪಿ ಜಿಲ್ಲಾಧ್ಯಕ್ಷ ಎಸ್.ಎನ್.ಭಟ್, ಜಿಲ್ಲಾ ಉಪಾಧ್ಯಕ್ಷ ಎಲ್.ಟಿ.ಪಾಟೀಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications