ರಾಜ್ಯಸಭೆ ಚುನಾವಣೆ : ಕಾಂಗ್ರೆಸ್ 3ನೇ ಅಭ್ಯರ್ಥಿ ಗೆಲುವು?
ಬೆಂಗಳೂರು, ಜೂನ್ 11 : ಕರ್ನಾಟಕ ವಿಧಾನಸಭೆಯಿಂದ ನಾಲ್ವರು ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಮತದಾನ ಆರಂಭವಾಗಿದೆ. ಚುನಾವಣೆಯಲ್ಲಿ ಮೂರೂ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಇದೆ. ಬಿ.ಎಂ.ಫಾರೂಕ್ ಅವರನ್ನು ಗೆಲ್ಲಿಸಲೇಬೇಕು ಎಂಬುದು ಜೆಡಿಎಸ್ ಗುರಿ.
ರಾಜ್ಯಸಭೆ ಚುನಾವಣೆ ಕಾಂಗ್ರೆಸ್ನಿಂದ ಆಸ್ಕರ್ ಫರ್ನಾಂಡೀಸ್, ಜೈರಾಮ್ ರಮೇಶ್ ಕಣದಲ್ಲಿದ್ದಾರೆ. ಶಾಸಕರ ಬಲಾಬಲದ ಆಧಾರದ ಮೇಲೆ ಇಬ್ಬರು ಅಭ್ಯರ್ಥಿಗಳು ಗೆಲ್ಲುತ್ತಾರೆ. ಒಬ್ಬರು ಅಭ್ಯರ್ಥಿ ಗೆಲುವು ಸಾಧಿಸಲು 45 ಮತಗಳ ಅಗತ್ಯವಿದೆ. [ರಾಜ್ಯಸಭೆ ಚುನಾವಣೆ 2016 : ಅಭ್ಯರ್ಥಿಗಳ ಆಸ್ತಿ ವಿವರಗಳು]

ಪಕ್ಷ ಮೂರನೇ ಅಭ್ಯರ್ಥಿಯಾಗಿ ಕೆ.ಸಿ.ರಾಮಮೂರ್ತಿ ಅವರನ್ನು ಕಣಕ್ಕಿಳಿಸಿದೆ. ಇವರ ಗೆಲುವಿಗೆ 12 ಮತಗಳು ಮಾತ್ರ ಕಡಿಮೆ ಇದೆ. ಪಕ್ಷೇತರರ ಸಹಾಯ ಪಡೆದು ಇವರನ್ನು ಗೆಲ್ಲಿಸಿಕೊಂಡು ಬರುವುದು ಕಾಂಗ್ರೆಸ್ನ ತಂತ್ರ. ಜೆಡಿಎಸ್ನ ಐವರು ಶಾಸಕರು ಕಾಂಗ್ರೆಸ್ಗೆ ಮತ ಹಾಕುವ ಸಾಧ್ಯತೆ ಇದ್ದು, ಮೂರನೇ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಲಿದೆ. [ರಾಜ್ಯಸಭೆ ಚುನಾವಣೆ ಹೇಗೆ ನಡೆಯುತ್ತದೆ?]
ಪಕ್ಷಗಳ ಲೆಕ್ಕಾಚಾರ : ವಿಧಾನಸಭೆಯಲ್ಲಿ ಕಾಂಗ್ರೆಸ್ 123 ಶಾಸಕರ ಬಲ ಹೊಂದಿದೆ. ಆಸ್ಕರ್ ಫರ್ನಾಂಡೀಸ್ ಮತ್ತು ಜೈರಾಮ್ ರಮೇಶ್ ಅವರಿಗೆ 45 ಮತಗಳು ಹಂಚಿಕೆಯಾದರೆ 90 ಮತಗಳಾಗುತ್ತವೆ. ಉಳಿದ 33 ಮತಗಳು ಮೂರನೇ ಅಭ್ಯರ್ಥಿ ಕೆ.ಸಿ.ರಾಮಮೂರ್ತಿ ಅವರಿಗೆ ಹಂಚಿಕೆಯಾಗುತ್ತದೆ. ಆಗ 12 ಮತಗಳ ಕೊರತೆ ಎದುರಾಗುತ್ತದೆ. [ಕರ್ನಾಟಕದಲ್ಲಿ ರೆಸಾರ್ಟ್ ರಾಜಕೀಯ ರಿಟರ್ನ್ಸ್, ಕಾಂಗ್ರೆಸ್ ಡೈರೆಕ್ಷನ್]
ಬಿಜೆಪಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವೆ (ಸ್ವತಂತ್ರ) ನಿರ್ಮಲಾ ಸೀತಾರಾಮನ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಬಲ 44. ಕುಂದಾಪುರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆ ಇದ್ದು, ಗೆಲುವು ಸಾಧಿಸುವುದು ಕಷ್ಟವಾಗುವುದಿಲ್ಲ.
ಜೆಡಿಎಸ್ ಉದ್ಯಮಿ ಬಿ.ಎಂ.ಫಾರೂಕ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ವಿಧಾನಸಭೆಯಲ್ಲಿ ಜೆಡಿಎಸ್ 40 ಶಾಸಕರನ್ನು ಹೊಂದಿದೆ. ಫಾರೂಕ್ ಅವರ ಗೆಲುವಿಗೆ 5 ಮತಗಳ ಕೊರತೆ ಇದೆ. ಶಾಸಕ ಜಮೀರ್ ಅಹಮದ್ ಖಾನ್ ಮುಂತಾದವರು ಕಾಂಗ್ರೆಸ್ ಬೆಂಬಲಿಸುವ ಸಾಧ್ಯತೆ ಇರುವುದು ಪಕ್ಷಕ್ಕೆ ತಲೆನೋವಾಗಿದೆ. ಶನಿವಾರ ಸಂಜೆಯೇ ಫಲಿತಾಂಶ ಪ್ರಕಟಗೊಳ್ಳಲಿದೆ. ಯಾರಿಗೆ ಗೆಲುವು? ಎಂದು ಕಾದು ನೋಡಬೇಕು
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ನಾಗರಿಕರೇ ಗಮನಿಸಿ; ಪರಿಷ್ಕೃತ ಕರಡು ಮತದಾರರ ಪಟ್ಟಿ- ಅಹವಾಲು, ಆಕ್ಷೇಪಣೆ ಆಹ್ವಾನ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications