ದೇಶದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗುವರೇ : ಆರೆಸ್ಸೆಸ್
ಹುಬ್ಬಳ್ಳಿ, ನವೆಂಬರ್, 06: ದೇಶದಲ್ಲಿ ಜನಸಂಖ್ಯೆ ಅಸಮಾನತೆಯಿಂದ ಹಿಂದೂಗಳು ಅಲ್ಪಸಂಖ್ಯಾತರಾಗುವ ಭೀತಿ ಎದುರಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (rss) ಕರ್ನಾಟಕ ಉತ್ತರ ಪ್ರಾಂತ ಕಾರ್ಯನಿರ್ವಾಹಕ ಅರವಿಂದ ರಾವ್ ದೇಶಪಾಂಡೆ ಆತಂಕ ವ್ಯಕ್ತಪಡಿಸಿದ್ದಾರೆ.
ನಗರದ ಸಂಘದ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರವಿಂದ ರಾವ್ ದೇಶಪಾಂಡೆ ಅವರು, 'ಈಶಾನ್ಯ ರಾಜ್ಯಗಳಾದ ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಬಿಹಾರಗಳ ಗಡಿ ಜಿಲ್ಲೆಗಳಲ್ಲಿ ಮುಸಲ್ಮಾನರು ಹೆಚ್ಚಿದ್ದಾರೆ. ಬಾಂಗ್ಲಾ ದೇಶದಿಂದ ನಿರಂತರ ಒಳನುಸುಳುವಿಕೆಯಿಂದಲೂ ಮುಸಲ್ಮಾನರ ಸಂಖ್ಯೆ ಏರಿಕೆ ಕಂಡಿದೆ. ಅರುಣಾಚಲದಲ್ಲಿ ಕ್ರಿಶ್ಚಿಯನ್ ಸಮುದಾಯ ಜನಸಂಖ್ಯೆ ಹತ್ತು ವರ್ಷಗಳಲ್ಲಿ ಶೇ. 13 ರಷ್ಟು ಏರಿಕೆಯಾಗಿದೆ' ಎಂದು ವಿವರಿಸಿದರು.[ಗೋಮಾಂಸ ಸೇವನೆ ವಿರುದ್ಧ ಹುಬ್ಬಳ್ಳಿಯಲ್ಲಿ ಆರೆಸ್ಸೆಸ್ ಜಾಥಾ]

50 ವರ್ಷಗಳಲ್ಲಿ ಜನಸಂಖ್ಯೆ ಸಾಕಷ್ಟು ಏರಿಕೆಯಾಗಿದೆ. ಜನಸಂಖ್ಯೆ ಏರಿಕೆಗನುಗುಣವಾಗಿ ಮತ-ಪಂಥಗಳ ಸಂಖ್ಯೆಯಲ್ಲಿಯೂ ಅಪಾರ ಪ್ರಮಾಣದ ಬದಲಾವಣೆಯಾಗಿದೆ. ಭಾರತೀಯ ಮೂಲದವರ ಮತ-ಪಂಥ ಅನುಯಾಯಿಗಳ ಪ್ರಮಾಣ ಮೊದಲು ಶೇ. 88 ರಷ್ಟಿತ್ತು. ಇದು ಶೇ. 83.8 ಕ್ಕೆ ಇಳಿಕೆಯಾಗಿದೆ. ಆದರೆ ಶೇ.9.8 ರಷ್ಟಿದ್ದ ಮುಸಲ್ಮಾನರ ಜನಸಂಖ್ಯೆ ಶೇ.14.23 ಕ್ಕೆ ಏರಿದೆ ಎಂದು ಅಂಕಿ ಅಂಶಗಳ ದಾಖಲೆಗಳನ್ನು ವಿವರಿಸಿದರು.[ಗೋವಿನ ವಧೆ ಹಿಂದೂ ಮಹಿಳೆ ಅತ್ಯಾಚಾರಕ್ಕೆ ಸಮಾನ!]
ಮತ-ಪಂಥಗಳ ನಡುವಿನ ಅಸಮತೋಲನ ಇದೇ ರೀತಿ ಮುಂದುವರಿದರೆ 2050 ರಲ್ಲಿ ಹಿಂದೂಗಳು ಭಾರತದಲ್ಲಿ ಅಲ್ಪಸಂಖ್ಯಾತರಾಗುವ ಸಾಧ್ಯತೆಗಳಿವೆ ಎಂದು ವಿಷಾದ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ವಿಶಾಲ ಸಂಗಣ್ಣವರ, ಶಂಕರಾನಂದ, ರಘುನಂದನ ಮತ್ತಿತರರು ಉಪಸ್ಥಿತರಿದ್ದರು.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications