ಎಸ್ಪಿಬಿ ಹಾಡು-ಮಾತು-ವ್ಯವಹಾರ ಎಲ್ಲವೂ ಶ್ರೇಷ್ಠ: ದತ್ತಾತ್ರೇಯ ಹೊಸಬಾಳೆ
ಬೆಂಗಳೂರು, ಸೆ. 25: ಗಾನ ಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂ ನಿಧನಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನ ಭರಿಸಲಾಗದ ದುಃಖ ತಂದಿದೆ ಎಂದು ತಮ್ಮ ಶೋಕ ಸಂದೇಶದಲ್ಲಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಮಾನವೀಯ ಗುಣ ಮತ್ತು ಮೌಲ್ಯಗಳ ನಿಧಿಯಾಗಿದ್ದರು. ಕರ್ನಾಟಕ ಸಂಗೀತ ಸಾಮ್ರಾಟರಾಗಿದ್ದ ಅವರು, ಹಾಡಿನ ಲೋಕದ ಕಣ್ಮಣಿಯೂ ಆಗಿದ್ದರು ಎಂದು ಅವರ ಕಲಾ ಸೇವೆಯನ್ನು ನೆನಪಿಸಿಕೊಂಡಿದ್ದಾರೆ.
ಅವರ ಹಾಡು-ಮಾತು-ವ್ಯವಹಾರ ಎಲ್ಲವೂ ಶ್ರೇಷ್ಠ ಹಾಗೂ ಉದಾತ್ತವಾಗಿತ್ತು. ಬದುಕಿರುವಾಗಲೇ ದಂತಕತೆಯಾದ ಈ ಅಮರ ಗಾಯಕರನ್ನು ನಾಡು ಸದಾ ನೆನಪಿಡುತ್ತದೆ. ದಿವಂಗತ ಆತ್ಮಕ್ಕೆ ನನ್ನ ಭಾವಪೂರ್ಣ ಶ್ರದ್ಧಾಂಜಲಿ ಎಂದು ದತ್ತಾತ್ರೆಯ ಹೊಸಬಾಳೆ ಅವರು ತಮ್ಮ ಶೋಖ ಸಂದೇಶದಲ್ಲಿ ತಿಳಿಸಿದ್ದಾರೆ.

ಗಾನ ಗಂಧರ್ವ ಬಾಲಸುಬ್ರಹ್ಮಣ್ಯಂ ನಿಧನ: ಎಸ್ಪಿಬಿ ಕಳೆದ ಒಂದು ತಿಂಗಳಿನಿಂದ ಚೆನೈನ ಆಸ್ಪತ್ರೆಯಲ್ಲಿ ತೀವ್ರನಿಗಾ ಘಟಕದಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದರು. ಕೊರೊನಾ ವೈರಸ್ ಸೋಂಕು ನೆಗಟಿವ್ ಆಗ ಬಳಿಕವೂ ಬಾಲಸುಬ್ರಹ್ಮಣ್ಯಂ ಅವರು ಚೇತರಿಸಿ ಕೊಂಡಿದ್ದರು. ಆದರೂ ಅವರ ಆರೋಗ್ಯ ಸಂಪೂರ್ಣವಾಗಿ ಸುಧಾರಿಸಲೇ ಇಲ್ಲ. ಇಂದು ಮಧ್ಯಾಹ್ನ ಅವರು ನಿಧನರಾದರು ಎಂದು ಘೋಷಣೆ ಮಾಡಲಾಯಿತು.
Recommended Video
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications