ಗೌರಿ ಲಂಕೇಶ್ ಹತ್ಯೆ ಹಿಂದೆ ಸೇನೆಯ ನಿವೃತ್ತ ಕರ್ನಲ್?
ಬೆಂಗಳೂರು, ಜುಲೈ 6: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಲಪಂಥೀಯ ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಭಾರತೀಯ ಸೇನೆಯ ನಿವೃತ್ತ ಕರ್ನಲ್ ಸೇರಿದಂತೆ ನಾಲ್ವರು ಪ್ರಭಾವಿ ಮುಖಂಡರ ಕೈವಾಡ ಇರುವ ಬಗ್ಗೆಯೂ ವಿಶೇಷ ತನಿಖಾ ದಳದ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಪ್ರಮುಖರು ಈ ಪ್ರಕರಣದಲ್ಲಿ ಭಾಗಿಯಾಗಿರುವ ಸಂದೇಹದಲ್ಲಿ ಅವರ ವಿರುದ್ಧ ಸಾಕ್ಷ್ಯಗಳನ್ನು ಸಂಗ್ರಹಿಸಲು ಎಸ್ಐಟಿ ಪ್ರಯತ್ನಿಸುತ್ತಿದೆ.
ಹಿಂದೂ ಧರ್ಮದ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾದ ಗೌರಿ ಅವರನ್ನು ಮುಗಿಸುವಂತೆ ಅಮೋಲ್ ಕಾಳೆಗೆ ನಾಲ್ವರು ಆದೇಶ ನೀಡಿದ್ದರು ಎಂದು ಶಂಕಿಸಲಾಗಿದೆ.

ಬಲಪಂಥೀಯ ಸಂಘಟನೆಯಲ್ಲಿ ಪ್ರಮುಖ ಹುದ್ದೆಯಲ್ಲಿ ಇರುವ ನಾಲ್ವರು ಈ ಸಂಚಿನಲ್ಲಿ ಭಾಗಿಯಾದ ಅನುಮಾನವಿದೆ. ಅವರಲ್ಲಿ ಒಬ್ಬರು ನಿವೃತ್ತ ಕರ್ನಲ್ ಆಗಿದ್ದಾರೆ. ಕೊಲೆಗಾರನಿಗೆ ಬಂದ ಫೋನ್ ಕರೆ ಅವರಿಂದ ಬಂದಿದೆ ಎಂದು ನಾವು ನಂಬಿದ್ದರೂ ಅದಕ್ಕೆ ಬಲವಾದ ಸಾಕ್ಷ್ಯ ಲಭ್ಯವಿಲ್ಲ. ಅವರ ವಿರುದ್ಧ ಸಾಕ್ಷ್ಯಗಳನ್ನು ಸಂಗ್ರಹಿಸುವ ಕಾರ್ಯದಲ್ಲಿ ನಿರತರಾಗಿದ್ದೇವೆ ಎಂದು ಎಸ್ಐಟಿಯ ಮೂಲಗಳು ತಿಳಿಸಿವೆ.
ಈ ಪ್ರಕರಣದಲ್ಲಿ ಕನಿಷ್ಠ ಮೂರು ಮಂದಿ ಭಾಗಿಯಾಗಿದ್ದಾರೆ. ಅವರ ಬಂಧನವಾಗದಂತೆ ತಡೆದು ತಲೆಮರೆಸಿಕೊಳ್ಳಲು ಸಂಘಟನೆಯು ಸಹಾಯ ಮತ್ತು ಹಣಕಾಸಿನ ನೆರವು ನೀಡುತ್ತಿದೆ ಎನ್ನಲಾಗಿದೆ.
ಅಮೋಲ್ ಕಾಳೆ, ಗೌರಿ ಅವರ ಹತ್ಯೆಯ ಯೋಜನೆಯನ್ನು ರೂಪಿಸಿ ಕಾರ್ಯರೂಪಕ್ಕೆ ತಂದಿದ್ದ. ಈ ಕೊಲೆಯ ಸಂಚನ್ನು ರೂಪಿಸಿದ್ದು ಆತನೇ ಆಗಿದ್ದರೂ, ಬೇರೆ ಸಂಚುಕೋರರ ಪರವಾಗಿ ಈ ಕೊಲೆ ಮಾಡಿದ್ದಾನೆ ಎಂದು ಎಸ್ಐಟಿ ಅನುಮಾನ ವ್ಯಕ್ತಪಡಿಸಿದೆ.
ಇಡೀ ಕಾರ್ಯಾಚರಣೆಗೆ ಬಲಪಂಥೀಯ ಸಂಘಟನೆಯೊಂದು ಹಣಕಾಸಿನ ನೆರವು ನೀಡಿದೆ.
ಗೌರಿ ಅವರ ಹತ್ಯೆ ಸಂಚು ಆರಂಭವಾದ 2017ರ ಜನವರಿಯಿಂದಲೂ ಅಮೋಲ್ ಕಾಳೆಗೆ ಪ್ರತಿ ತಿಂಗಳೂ ಕನಿಷ್ಠ 1.25 ಲಕ್ಷ ರೂಪಾಯಿ ನೀಡಲಾಗುತ್ತಿತ್ತು. ತನ್ನ ಕೆಲಸಕ್ಕೆ ಬೇಕಾದವರನ್ನು ನೇಮಿಸಿಕೊಳ್ಳಲು ಮತ್ತು ಇತರೆ ಕೆಲಸಗಳಿಗಾಗಿ ಹಣ ನೀಡಲಾಗುತ್ತಿತ್ತು ಎಂದು ಮೂಲಗಳು ಹೇಳಿವೆ.
-
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ












Click it and Unblock the Notifications