5,8ನೇ ತರಗತಿ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ ಅನಗತ್ಯ:ಆರ್ಟಿಇ ಕಾರ್ಯಕರ್ತರು
ಬೆಂಗಳೂರು, ಡಿಸೆಂಬರ್ 27: ಕರ್ನಾಟಕದಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಶಿಕ್ಷಣ ಇಲಾಖೆ ನಿರ್ಧಾರವನ್ನು ಆರ್ಟಿಇ ಕಾರ್ಯಕರ್ತರು ಖಂಡಿಸಿದ್ದಾರೆ.
5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಸಂಬಂಧ ಕೆಲವು ದಿನಗಳ ಹಿಂದೆ ದುಂಡು ಮೇಜಿನ ಸಭೆ ನಡೆದಿದೆ. ಅಲ್ಲಿ ಶಿಕ್ಷಣತಜ್ಞ ನಿರಂಜನಾರಾಧ್ಯ ಪಿ.ವಿ. ಮತ್ತು ಕುಮಾರಸ್ವಾಮಿ, ಕರ್ನಾಟಕ ಶಾಲಾ ಕಾಲೇಜು ಪಾಲಕರ ಸಂಘದ ಅಧ್ಯಕ್ಷ ಬಿ.ಎಸ್.ಯೋಗಾನಂದ, ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ನಿರ್ವಹಣಾ ಸಂಘದ ಅಧ್ಯಕ್ಷ ಲೋಕೇಶ್ ಚರ್ಚಿಸಿದ ಬಳಿಕ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಅದರಲ್ಲಿ ಐದು ಮತ್ತು ಎಂಟನೇ ತರಗತಿಗಳಿಗೆ ನಿರಂತರ ಮತ್ತು ಸಮಗ್ರ ಮೌಲ್ಯಮಾಪನ ನಡೆಸಬೇಕೇ?. ಅವೈಜ್ಞಾನಿಕ ಪಬ್ಲಿಕ್ ಪರೀಕ್ಷೆ ಬೇಡ. ಅವರು ಕೇಂದ್ರೀಕೃತ ಪರೀಕ್ಷೆಯಲ್ಲಿ ವೈಫಲ್ಯವು ವಿದ್ಯಾರ್ಥಿಗಳನ್ನು ದುರ್ಬಲಗೊಳಿಸಬಹುದು. ಮಕ್ಕಳು ಶಾಲೆ ಬಿಡಲು ಈ ನಿರ್ಧಾರ ಕಾರಣವಾಗಬಹುದು ಎಂದು ನಿರಂಜನಾರಾಧ್ಯ ಪಿ.ವಿ.ಅವರು ತಿಳಿಸಿದರು.

ಪಬ್ಲಿಕ್ ಪರೀಕ್ಷೆ ಅಲ್ಲ ಮಕ್ಕಳ ಕಲಿಕೆಯ ಮೌಲ್ಯಮಾಪನ ಮಾಡುವುದಷ್ಟೇ ಎಂದು ಹೇಳಿದ್ದಾರೆ. ಸ್ವತಃ ಸಚಿವರೇ ಮೌಲ್ಯಮಾಪನ ಬಗ್ಗೆ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಅವೈಜ್ಞಾನಿಕ ನಿರ್ಧಾರ ಹಾಗೂ ಮಕ್ಕಳ ವಿರೋಧಿ ತೀರ್ಮಾನ ಸಮರ್ಥಿಸಿಕೊಳ್ಳುವ ಭರದಲ್ಲಿ ಶಿಕ್ಷಣ ಸಚಿವರೇ ಈ ರೀತಿ ತಪ್ಪು ಸಂದೇಶ ರವಾನಿಸಿದ್ದಾರೆ ಎನ್ನುವ ಮೂಲಕ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ನಿರ್ಧಾರವನ್ನು ಅವರು ಆಕ್ಷೇಪಿಸಿದರು.
ಮೊಟ್ಟೆ ವಿತರಣೆ 10ನೇ ತರಗತಿ ಮಕ್ಕಳಿಗೆ ವಿಸ್ತರಿಸಿ
ಮಕ್ಕಳ ಪೌಷ್ಠಿಕಾಂಶ ಕುರಿತು ಗಮನ ಕೇಂದ್ರೀಕರಿಸಿರುವ ಸರ್ಕಾರ 8ನೇ ತರಗತಿಗೆ ಸೀಮಿತಗೊಳಿಸುವ ಬದಲು 10ನೇ ತರಗತಿಯವರೆಗಿನ ಮಕ್ಕಳಿಗೂ ಊಟದಲ್ಲಿ ಮೊಟ್ಟೆಗಳನ್ನು ನೀಡಬಹದು. ಆದರೆ ಸರ್ಕಾರ ಎಂಟನೇ ತರಗತಿವರೆಗೆ ಮಾತ್ರ ಮೊಟ್ಟೆ ವಿತರಣೆ ನಿರ್ಧರಿಸಿದೆ ಎಂದರು.

ಕೇಂದ್ರದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮತ್ತು ಅಲ್ಪಸಂಖ್ಯಾತರಿಗೆ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಫೆಲೋಶಿಪ್ ಅನ್ನು ಮುಂದುವರಿಸುವಂತೆ ಇದೇ ವೇಳೆ ಶಿಕ್ಷಣ ತಜ್ಞರು, ಪಾಲಕರ ಸಂಘದ ಸದಸ್ಯರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಡಿಸೆಂಬರ್ 12 ರಂದು, ಸಾರ್ವಜನಿಕ ಶಿಕ್ಷಣ ಇಲಾಖೆಯು 8 ಮತ್ತು 5 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಮಾರ್ಗಸೂಚಿಗಳನ್ನು ಹೊರಡಿಸಿತು.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications