PDO Transfer: ಕೌನ್ಸಿಲಿಂಗ್ ಮಾಡಿ ಪಿಡಿಒ ವರ್ಗಾವಣೆ ಪ್ರಕ್ರಿಯೆ ಪುನಾರಂಭ: ಮಹತ್ವದ ಸುತ್ತೋಲೆ
ಬೆಂಗಳೂರು, ಮಾರ್ಚ್ 07: ಒಂದೇ ಗ್ರಾಮ ಪಂಚಾಯಿತಿ, ತಾಲೂಕು ವ್ಯಾಪ್ತಿಯಲ್ಲಿ ವರ್ಷಗಳಿಂದ ಸೇವೆಯಲ್ಲಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಮತ್ತು ಕಾರ್ಯದರ್ಶಿಗಳ ಬೇರೆಡೆ ವರ್ಗಾವಣೆ ಪ್ರಕ್ರಿಯೆ ಪುನಾರಂಭಗೊಂಡಿದೆ. ಈ ಅಧಿಕಾರಿಗಳ ಎತ್ತಂಗಡಿಗೆ ಗ್ರಾಮೀಣಭಿವೃದ್ಧಿ ಇಲಾಖೆ ನಿರ್ಧರಿಸಿ ವರ್ಷಗಳೇ ಕಳೆದಿವೆ. ಕೆಲವು ಅಡೆತಡೆಗಳ ನಿವಾರಣೆ ಬಳಿಕ ಇದೀಗ ಪಿಡಿಒ ವರ್ಗಾವಣೆ (PDO Transfer) ಪ್ರಕ್ರಿಯೆ ಪುನಃ ಆರಂಭಿಸಲಾಗಿದೆ ಎಂದು ಇಲಾಖೆ ಮೂಲಗಳು ಮಾಹಿತಿ ನೀಡಿವೆ.
2024ರ ಜೂನ್ನಲ್ಲಿ ರಾಜ್ಯ ಸರ್ಕಾರ ಕರಡು ಪ್ರಕಟಿಸಿತ್ತು. ಪಿಡಿಒ ಗಳನ್ನು (ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ) ಕೌನ್ಸಿಲಿಂಗ್ ಮಾಡಿ ವರ್ಗಾವಣೆ ಮಾಡಲು ಇಲಾಖೆಯು ಸುತ್ತೋಲೆ ಹೊರಡಿಸಿತ್ತು. ಈ ಸಂಬಂಧ ವರ್ಗಾವಣೆ ತಿದ್ದುಪಡಿ ಕರಡು 2024 ಗೆ ಸಾಕಷ್ಟು ಆಕ್ಷೇಪಣೆಗಳು ಬಂದವು. ಕೋರ್ಟ್ ಪ್ರಕರಣಗಳು ಎದುರಾದ ಹಿನ್ನೆಲೆಯಲ್ಲಿ ಒಂದು ವರ್ಷ ವಿಳಂಬವಾಗಿತ್ತು.

ಶಾಸಕರು ಸೇರಿದಂತೆ ಪ್ರಭಾವಿಗಳ ಪ್ರಭಾವದಿಂದ ಒಂದೇ ಕಡೆ ಠಿಕಾಣಿ ಹೂಡಿರುವ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಕಾರ್ಯದರ್ಶಿಗಳನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆಗೊಳಿಸಲು ಸರ್ಕಾರ ಮುಂದಾಗಿದೆ. ಇದೇ ಮಾರ್ಚ್ 10ರೊಳಗಾಗಿ ಆಯಾ ಜಿಲ್ಲೆಗಳ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳು ವರ್ಷಗಳಿಂದ ಠಿಕಾಣಿ ಹೂಡಿರುವವರ ದತ್ತಾಂಶ ಪರಿಶೀಲಿಸಬೇಕು. 15ರೊಳಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆಯ ಆಕ್ಷೇಪಣೆ ಪರಿಶೀಲಿಸಬೇಕು. ಇದಾಗುತ್ತಿದ್ದಂತೆ ಮಾರ್ಚ್ 19ರೊಳಗೆ ಎಲ್ಲ ಸಿಇಒ ಗಳು ವರ್ಗಾವಣೆಗೆ ಅನುಮೋದನೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಸೂಚನೆ ನೀಡಿದೆ. ಈ ಮೂಲಕ ವಿಳಂಬವಾಗಿದ್ದ ಪ್ರಕ್ರಿಯೆಗೆ ವೇಗ ದೊರೆತಿದೆ.
ವರ್ಗಾವಣೆ ಮೂಲ ಉದ್ದೇಶ
ಇಲಾಖೆ ಈ ವರ್ಗಾವಣೆ ನಡೆಯಿಂದ ಗ್ರಾಮ ಪಂಚಾಯಿತಿಗಳಲ್ಲಿ ಅಕ್ರಮ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸಾಧ್ಯವಾಗುತ್ತದೆ. ಸಿಬ್ಬಂದಿಯಲ್ಲಿ ದಕ್ಷತೆ ಹೆಚ್ಚಿಸಲು, ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ಉದ್ದೇಶದಿಂದ ಸರ್ಕಾರ ಕಡ್ಡಾಯ ವರ್ಗಾವಣೆಗೆ ಮುಂದಾಗಿದೆ.

ಸರ್ಕಾರಿ ಅಧಿಕಾರಿಗಳು ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಹೆಜ್ಜೆ ಇಟ್ಟ ಸರ್ಕಾರ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ವರ್ಗಾವಣೆ ನಿಯಂತ್ರಣ ನಿಯಮಗಳಿಗೆ ತಿದ್ದುಪಡಿ ತರಲು ಕರಡು ಪ್ರಕಟಿಸಲಾಗಿತ್ತು. ಇದರಡಿ ಮೊದಲಿಗೆ ಪಿಡಿಒ, ಗ್ರಾ.ಪಂ. ಕಾರ್ಯದರ್ಶಿ ಗ್ರೇಡ್ 01, ಗ್ರೇಡ್ 2, ಎಸ್ಡಿಎ (ದ್ವಿತಿಯ ದರ್ಜೆಯ ಲೆಕ್ಕ ಸಹಾಯಕ) ಅಧಿಕಾರಿಯನ್ನು ವರ್ಗಾವಣೆ ಪ್ರಕ್ರಿಯೆಗೆ ಒಳಪಡಿಸಲು ಮುಂದಾಗಿತ್ತು. ಆದರೆ ಆಕ್ಷೇಪಣೆ, ಕಾನೂನು ಅಡೆತಡೆ ಎದುರಾಗಿ ವರ್ಷದಿಂದ ವಿಳಂಬವಾಗಿತ್ತು.
ಠಿಕಾಣಿ ಅಧಿಕಾರಿಗಳಿಗೆ ಮತ್ತೆ ಅವಕಾಶ ಬೇಡ
ಈ ಕರಡು ತಿದ್ದುಪಡಿಯಲ್ಲಿ ಒಂದೇ ತಾಲೂಕಿನಲ್ಲಿ ಗರಿಷ್ಠ 07 ವರ್ಷ ಕೆಲಸ ಮಾಡಿರುವ ಎಲ್ಲ ಪಿಡಿಒ, ಕಾರ್ಯದರ್ಶಿಗಳನ್ನು ಅದೇ ತಾಲೂಕು ವ್ಯಾಪ್ತಿಯ ಯಾವುದೇ ಪಂಚಾಯಿತಿಗಳ ಖಾಲಿ ಹುದ್ದೆಗಳಿಗೆ ಪರಿಗಣಿಸದಂತೆ ನಿರ್ಬಂಧ ಹೇರಬೇಕು ಎಂಬುದು ಕರಡದಿನ ಪ್ರಮುಖ ಅಂಶವಾಗಿದೆ. ಸದ್ಯ ವರ್ಗಾವಣೆ ಪ್ರಕ್ರಿಯೆ ಪುನಾರಂಭಗೊಂಡಿದ್ದರಿಂದ ಪ್ರಭಾವಿಗಳ ಸಹಾಯದಿಂದ ಒಂದೇ ಕಡೆ ಠಿಕಾಣಿ ಹೂಡಿದ್ದವರಿಗೆ ನಡುಕ ಶುರುವಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications