ಗದಗದಲ್ಲಿ ಟಿಪ್ಪುಸುಲ್ತಾನ ಸಮುದಾಯ ಭವನ ನಿರ್ಮಾಣ
ಗದಗ, ನವೆಂಬರ್, 04 : ಜಿಲ್ಲೆಯ ಹಲವಾರು ಸಂಘಟನೆಗೆ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ ಹಜರತ್ ಟಿಪ್ಪುಸುಲ್ತಾನ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಹೇಳಿದರು.
ನಗರದ ಗದಗ-ಹುಬ್ಬಳ್ಳಿ ರಸ್ತೆಯ ಟಿಪ್ಪುಸುಲ್ತಾನ ಸರ್ಕಲ್ ಬಳಿ ನೂತನವಾಗಿ ಆರಂಭಿಸಲಾದ ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ ಅಭಿಮಾನಿಗಳ ಮಹಾವೇದಿಕೆಯ ಜಿಲ್ಲಾ ಘಟಕದ ಕಾರ್ಯಾಲಯವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.[ಆಲೂರು ವೆಂಕಟರಾವ್ ರಸ್ತೆಗೆ ಟಿಪ್ಪು ಹೆಸರೇಕೆ?]

ಸಂಘಟನೆಯ ಯುವಕರು ಶೈಕ್ಷಣಿಕ, ಸಾಮಾಜಿಕ ಅಭಿವೃದ್ಧಿಗೆ ಅಧ್ಯತೆ ನೀಡಬೇಕು. ಸರ್ಕಾರದ ವಿವಿಧ ಇಲಾಖೆಗಳು ನೀಡುವ ಸೌಲಭ್ಯಗಳನ್ನು ಪಡೆದು ಆರ್ಥಿಕವಾಗಿ ಬಲಗೊಳ್ಳುವ ಮೂಲಕ ಸಂಘಟನೆ ಬಲಪಡಿಸಬೇಕು. ಯುವ ಜನಾಂಗ ಸಮಾಜಮುಖಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.[ವಿದೇಶ ವ್ಯಾಸಂಗಕ್ಕೆ ತೆರಳುವ ಅಲ್ಪಸಂಖ್ಯಾತರಿಗೆ ಶಿಷ್ಯವೇತನ]
ಟಿಪ್ಪು ಸುಲ್ತಾನ ಅಭಿಮಾನಿಗಳ ಮಹಾವೇದಿಕೆಯ ಜಿಲ್ಲಾಧ್ಯಕ್ಷ ಮುನ್ನಾ ರೇಷ್ಮಾ ಮಾತನಾಡಿ, ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಟಿಪ್ಪುಸುಲ್ತಾನ ಅಧ್ಯಯನ ಪೀಠ ಸ್ಥಾಪಿಸಬೇಕು. ನಗರದಲ್ಲಿ ಹಜರತ್ ಟಿಪ್ಪುಸುಲ್ತಾನ ಭವನ ನಿರ್ಮಾಣ ಸೇರಿದಂತೆ ಸರ್ಕಲ್ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಿದರು.












Click it and Unblock the Notifications