ಲಾಕ್ ಡೌನ್ ವಿರುದ್ಧ ಗ್ರಾಮೀಣ ಭಾಗದಲ್ಲಿ ದಂಗೆಯಾಗಲಿದೆ: ಸಿದ್ದರಾಮಯ್ಯ
ಬೆಂಗಳೂರು, ಮೇ 10: ಕೊರೊನಾಗಿಂತಲೂ ರಾಜ್ಯ ಸರ್ಕಾರದ ಅವೈಜ್ಞಾನಿಕ, ಜನ ವಿರೋಧಿ ಕ್ರಮಗಳಿಂದ ಸಾರ್ವಜನಿಕರು ಬೇಸತ್ತಿದ್ದಾರೆ. ಗೊಂದಲದ ಗೂಡಾಗಿರುವ ಲಾಕ್ ಡೌನ್ ವಿರುದ್ಧ ಗ್ರಾಮೀಣ ಭಾಗದಲ್ಲಿ ದಂಗೆಯಾಗಲಿದೆ ಎಂಬ ಆತಂಕ ಮೂಡಿದೆ ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಲಾಕ್ ಡೌನ್ ಮಾರ್ಗಸೂಚಿಯನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ಬೆಳಗ್ಗೆ 6 ರಿಂದ 10 ರವರೆಗೆ ದಿನಸಿ, ತರಕಾರಿ, ಮೀನು ಮಾಂಸ ಖರೀದಿಗೆ ಅವಕಾಶ ನೀಡಲಾಗಿದೆ. ಆದರೆ, ವಾಹನ ಸಂಚಾರ ನಿರ್ಬಂಧಿಸಿ, ನಡೆದುಕೊಂಡೇ ಹೋಗಬೇಕು ಎಂಬ ನಿಯಮ ಮೂರ್ಖತನದ ಪರಮಾವಧಿ, ಹಳ್ಳಿಗಳಿಂದ ಐದರಿಂದ ಹತ್ತಾರು ಕಿ.ಮೀ ದೂರದ ಪಟ್ಟಣದ ಮಾರುಕಟ್ಟೆಗೆ ನಿಗದಿತ ಅವಧಿಯಲ್ಲಿ ನಡೆದುಕೊಂಡು ಹೋಗಿ ಬರುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ. ಹಿರಿಯರು, ಅಶಕ್ತರು ದಿನನಿತ್ಯ ಹೊರಗೆ ತೆರಳುವುದು ಕಷ್ಟವಾಗಲಿದೆ.
ಗ್ರಾಮೀಣ ಭಾಗದಲ್ಲಿ ಬ್ಯಾಂಕ್, ಎಟಿಎಂ, ಹೋಟೆಲ್ ಎಲ್ಲವೂ ಬಾಗಿಲು ತೆರೆಯುವುದೇ ನಿಧಾನವಾಗಿ, ಎಲ್ಲಾ ನಿಯಮಗಳನ್ನು ಬೆಂಗಳೂರನ್ನು ಗಮನದಲ್ಲಿಟ್ಟುಕೊಂಡು ಮಾತ್ರ ಮಾಡಿದಂತೆ ಇದೆ, ಅಧಿಕಾರಿಗಳು ಮೊದಲು ಹಳ್ಳಿಗಳಿಗೆ ತೆರಳಿ ಅಲ್ಲಿನ ವಾಸ್ತವ ಸ್ಥಿತಿ ಅರಿಯಲಿ ಎಂದರು.

ಜನ ಉದ್ಯೋಗಗಳನ್ನು ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಸರ್ಕಾರ ಪ್ರತಿಯೊಬ್ಬರಿಗೂ ತಿಂಗಳಿಗೆ ತಲಾ 10 ಕೆ.ಜಿ. ಅಕ್ಕಿ ನೀಡಬೇಕು. ಜೊತೆಗೆ ಬೇಳೆ, ಅಡುಗೆ ಎಣ್ಣೆ, ಮುಂತಾದ ದಿನಸಿ ಪದಾರ್ಥಗಳುಳ್ಳ ಕಿಟ್ಗಳನ್ನು ನೀಡಬೇಕು. ಪ್ರತಿ ಬಿ.ಪಿ.ಎಲ್ ಕುಟುಂಬಕ್ಕೆ ಮೊದಲಿಗೆ ರೂ.10,000 ಗಳನ್ನು ನೀಡಬೇಕು. ನಂತರ ತಿಂಗಳಿಗೆ ರೂ.6,000 ಗಳನ್ನು ನೀಡಬೇಕು. ರಾಜ್ಯದ ರೈತರಿಗೆ, ಕುಶಲಕರ್ಮಿ ಸಮುದಾಯಗಳಿಗೆ, ಕಾರ್ಮಿಕರಿಗೆ, ಡ್ರೈವರುಗಳಾದಿಯಾಗಿ ಎಲ್ಲ ದುಡಿಯುವ ವರ್ಗಗಳಿಗೆ ರೂ.10,000 ಗಳನ್ನು ನೀಡಬೇಕು. ಸಣ್ಣ, ಅತಿ ಸಣ್ಣ, ಸೂಕ್ಷ್ಮ, ಗೃಹ ಕೈಗಾರಿಕೆಗಳಿಗೆ, ವಾಹನಗಳ ಮಾಲೀಕರ ಸಭೆಗಳನ್ನು ನಡೆಸಿ ಸೂಕ್ತ ಪ್ಯಾಕೇಜ ಅನ್ನು ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದರು.
Recommended Video
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications