ಎಂಬಿಬಿಎಸ್ ಪೂರ್ಣಗೊಂಡ ಬಳಿಕ ಗ್ರಾಮೀಣ ಸೇವೆ ಕಡ್ಡಾಯ
ಬೆಂಗಳೂರು, ಜೂ. 03 : ವೈದ್ಯಕೀಯ ಶಿಕ್ಷಣ ಪೂರ್ಣಗೊಳಿಸಿದವರು ಇನ್ನು ಮುಂದೆ ಕಡ್ಡಾಯವಾಗಿ ಗ್ರಾಮೀಣ ಪ್ರದೇಶದಲ್ಲಿ ಒಂದು ವರ್ಷಗಳ ಕಾಲ ಸೇವೆ ಸಲ್ಲಿಸಬೇಕಾಗಿದೆ. ಕಡ್ಡಾಯ ಸೇವಾ ತರಬೇತಿ ವಿಧೇಯಕ 2012ಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ ಅವರು ಈ ಕುರಿತು ಮಾಹಿತಿ ನೀಡಿದರು. ಎಂಬಿಬಿಎಸ್ ಕೋರ್ಸ್ ಮುಗಿಸಿದವರು ಗ್ರಾಮೀಣ ಭಾಗದಲ್ಲಿ ಕಡ್ಡಾಯವಾಗಿ ಸೇವೆ ಸಲ್ಲಿಸುವ ವಿಧೇಯಕಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸಹಿ ಹಾಕಿದ್ದು, ತಕ್ಷಣದಿಂದಲೇ ವಿಧೇಯಕ ಜಾರಿಗೆ ಬರಲಿದೆ ಎಂದು ಹೇಳಿದರು. [ಗ್ರಾಮೀಣ ಸೇವೆ ತಪ್ಪಿಸಿದರೆ ವೈದ್ಯರಿಗೆ ದಂಡ!]

ಎಂಬಿಬಿಎಸ್ ಕೋರ್ಸ್ ಮುಗಿಸಿದ ತಕ್ಷಣ ಒಂದು ವರ್ಷ ಕಡ್ಡಾಯವಾಗಿ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಬೇಕು. ದಂಡ ಕಟ್ಟಿ ಈ ನಿಯಮದಿಂದ ವಿನಾಯಿತಿ ಪಡೆಯಲು ಸಾಧ್ಯವಿಲ್ಲ. ಈ ವಿಧೇಯಕ ಜಾರಿಗೆ ಬಂದರೆ ಗ್ರಾಮೀಣ ಪ್ರದೇಶದಲ್ಲಿ ವೈದ್ಯರ ಕೊರತೆ ಕಡಿಮೆಯಾಗಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು. [ವೃತ್ತಿ ಶಿಕ್ಷಣ ಶುಲ್ಕ ದುಬಾರಿ]
ಕಡ್ಡಾಯ ಸೇವಾ ತರಬೇತಿ ವಿಧೇಯಕ-2012ರ ಅನ್ವಯ ಅನಿವಾಸಿ ಭಾರತೀಯರು ಕಾಮೆಡ್-ಕೆ, ಸರ್ಕಾರಿ ಕೋಟಾ ಸೇರಿದಂತೆ ಕರ್ನಾಟಕದ ಕಾಲೇಜುಗಳಲ್ಲಿ ಎಂಬಿಬಿಎಸ್, ವೈದ್ಯಕೀಯ ಸ್ನಾತಕೋತ್ತರ ಪದವಿ ಪಡೆಯುವವರು ಗ್ರಾಮೀಣ ಭಾಗದಲ್ಲಿ 1 ವರ್ಷ ಕಡ್ಡಾಯವಾಗಿ ಸೇವೆ ಸಲ್ಲಿಸಬೇಕು ಎಂದರು. [ರಾಜ್ಯದಲ್ಲಿ ಮೂರು ವೈದ್ಯಕೀಯ ಕಾಲೇಜು ಆರಂಭ]
ಗ್ರಾಮೀಣ ಸೇವೆ ಮಾಡಲೇಬೇಕು : ಎಂಬಿಬಿಎಸ್ ಪೂರ್ಣಗೊಳಿಸಿದವರು ತಕ್ಷಣ ಸ್ನಾತಕೋತ್ತರ ಪದವಿ ವ್ಯಾಸಂಗಕ್ಕೆ ಹೋದರೆ ಅಂತಹವರು ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಬೇಕಾಗಿಲ್ಲ. ಆದರೆ, ಸ್ನಾತಕೋತ್ತರ ಪದವಿ ಮುಗಿದ ಬಳಿಕ ಸೇವೆ ಸಲ್ಲಿಸುವುದು ಅನಿವಾರ್ಯವಾಗಲಿದೆ.
ಎಂಬಿಬಿಎಸ್ ಪೂರ್ಣಗೊಳಿಸಿರುವವರಿಂದ ಯಾವ ರೀತಿ ಸೇವೆ ಪಡೆಯಬೇಕು? ಎಲ್ಲಿಗೆ ಅವರನ್ನು ನಿಯೋಜನೆ ಮಾಡಬೇಕು ಎಂಬ ಬಗ್ಗೆ ಒಂದುವಾರದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಶರಣಪ್ರಕಾಶ್ ಪಾಟೀಲ ಅವರು ಹೇಳಿದರು.
-
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು









Click it and Unblock the Notifications