ಎಂಬಿಬಿಎಸ್ ಪೂರ್ಣಗೊಂಡ ಬಳಿಕ ಗ್ರಾಮೀಣ ಸೇವೆ ಕಡ್ಡಾಯ
ಬೆಂಗಳೂರು, ಜೂ. 03 : ವೈದ್ಯಕೀಯ ಶಿಕ್ಷಣ ಪೂರ್ಣಗೊಳಿಸಿದವರು ಇನ್ನು ಮುಂದೆ ಕಡ್ಡಾಯವಾಗಿ ಗ್ರಾಮೀಣ ಪ್ರದೇಶದಲ್ಲಿ ಒಂದು ವರ್ಷಗಳ ಕಾಲ ಸೇವೆ ಸಲ್ಲಿಸಬೇಕಾಗಿದೆ. ಕಡ್ಡಾಯ ಸೇವಾ ತರಬೇತಿ ವಿಧೇಯಕ 2012ಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ ಅವರು ಈ ಕುರಿತು ಮಾಹಿತಿ ನೀಡಿದರು. ಎಂಬಿಬಿಎಸ್ ಕೋರ್ಸ್ ಮುಗಿಸಿದವರು ಗ್ರಾಮೀಣ ಭಾಗದಲ್ಲಿ ಕಡ್ಡಾಯವಾಗಿ ಸೇವೆ ಸಲ್ಲಿಸುವ ವಿಧೇಯಕಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಸಹಿ ಹಾಕಿದ್ದು, ತಕ್ಷಣದಿಂದಲೇ ವಿಧೇಯಕ ಜಾರಿಗೆ ಬರಲಿದೆ ಎಂದು ಹೇಳಿದರು. [ಗ್ರಾಮೀಣ ಸೇವೆ ತಪ್ಪಿಸಿದರೆ ವೈದ್ಯರಿಗೆ ದಂಡ!]

ಎಂಬಿಬಿಎಸ್ ಕೋರ್ಸ್ ಮುಗಿಸಿದ ತಕ್ಷಣ ಒಂದು ವರ್ಷ ಕಡ್ಡಾಯವಾಗಿ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಬೇಕು. ದಂಡ ಕಟ್ಟಿ ಈ ನಿಯಮದಿಂದ ವಿನಾಯಿತಿ ಪಡೆಯಲು ಸಾಧ್ಯವಿಲ್ಲ. ಈ ವಿಧೇಯಕ ಜಾರಿಗೆ ಬಂದರೆ ಗ್ರಾಮೀಣ ಪ್ರದೇಶದಲ್ಲಿ ವೈದ್ಯರ ಕೊರತೆ ಕಡಿಮೆಯಾಗಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು. [ವೃತ್ತಿ ಶಿಕ್ಷಣ ಶುಲ್ಕ ದುಬಾರಿ]
ಕಡ್ಡಾಯ ಸೇವಾ ತರಬೇತಿ ವಿಧೇಯಕ-2012ರ ಅನ್ವಯ ಅನಿವಾಸಿ ಭಾರತೀಯರು ಕಾಮೆಡ್-ಕೆ, ಸರ್ಕಾರಿ ಕೋಟಾ ಸೇರಿದಂತೆ ಕರ್ನಾಟಕದ ಕಾಲೇಜುಗಳಲ್ಲಿ ಎಂಬಿಬಿಎಸ್, ವೈದ್ಯಕೀಯ ಸ್ನಾತಕೋತ್ತರ ಪದವಿ ಪಡೆಯುವವರು ಗ್ರಾಮೀಣ ಭಾಗದಲ್ಲಿ 1 ವರ್ಷ ಕಡ್ಡಾಯವಾಗಿ ಸೇವೆ ಸಲ್ಲಿಸಬೇಕು ಎಂದರು. [ರಾಜ್ಯದಲ್ಲಿ ಮೂರು ವೈದ್ಯಕೀಯ ಕಾಲೇಜು ಆರಂಭ]
ಗ್ರಾಮೀಣ ಸೇವೆ ಮಾಡಲೇಬೇಕು : ಎಂಬಿಬಿಎಸ್ ಪೂರ್ಣಗೊಳಿಸಿದವರು ತಕ್ಷಣ ಸ್ನಾತಕೋತ್ತರ ಪದವಿ ವ್ಯಾಸಂಗಕ್ಕೆ ಹೋದರೆ ಅಂತಹವರು ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಬೇಕಾಗಿಲ್ಲ. ಆದರೆ, ಸ್ನಾತಕೋತ್ತರ ಪದವಿ ಮುಗಿದ ಬಳಿಕ ಸೇವೆ ಸಲ್ಲಿಸುವುದು ಅನಿವಾರ್ಯವಾಗಲಿದೆ.
ಎಂಬಿಬಿಎಸ್ ಪೂರ್ಣಗೊಳಿಸಿರುವವರಿಂದ ಯಾವ ರೀತಿ ಸೇವೆ ಪಡೆಯಬೇಕು? ಎಲ್ಲಿಗೆ ಅವರನ್ನು ನಿಯೋಜನೆ ಮಾಡಬೇಕು ಎಂಬ ಬಗ್ಗೆ ಒಂದುವಾರದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಶರಣಪ್ರಕಾಶ್ ಪಾಟೀಲ ಅವರು ಹೇಳಿದರು.
-
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ












Click it and Unblock the Notifications