ರಷ್ಯಾ- ಉಕ್ರೇನ್ ಯುದ್ಧದಿಂದ ರಾಜ್ಯದ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕರು ವಿಲವಿಲ!
ಬೆಂಗಳೂರು, ಮಾ. 09: ರಷ್ಯಾ- ಉಕ್ರೇನ್ ಯುದ್ಧದ ಪರಿಣಾಮ ರಾಜ್ಯದ ಸರ್ಕಾರಿ ಶಾಲೆಗಳ ಮೇಲೂ ಬೀರಿದೆ. ಯುದ್ಧ ಆರಂಭವಾದ ಬಳಿಕ ಉಕ್ರೇನ್ನಿಂದ ಬರುತ್ತಿದ್ದ ಸೂರ್ಯಕಾಂತಿ ಎಣ್ಣೆ ರಫ್ತು ಸ್ಥಗಿತಗೊಂಡಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಕೊಡುವ ಬಿಸಿಯೂಟಕ್ಕೆ ಬಳಸುವ ಸೂರ್ಯಕಾಂತಿ ಎಣ್ಣೆ ಬೆಲೆ ದುಬಾರಿಯಾಗಿದ್ದು, ಮುಖ್ಯ ಶಿಕ್ಷಕರ ಜೇಬಿಗೆ ಕತ್ತರಿ ಬೀಳುತ್ತಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಲೆಕ್ಕಾಚಾರದ ಪ್ರಕಾರ ಕಿರಿಯ ಪ್ರಾಥಮಿಕ ಶಾಲೆಯ ಮಗುವಿಗೆ ಸರಾಸರಿ ಘಟಕ ವೆಚ್ಚ ರೂ. 42 ಪೈಸೆ. ಹಿರಿಯ ಪ್ರಾಥಮಿಕ ಶಾಲೆ ಮಕ್ಕಳ ಘಟಕ ವೆಚ್ಚ 67 ಪೈಸೆ. ಇದರ ಪ್ರಕಾರ ಒಂದು ಲೀಟರ್ ಸೂರ್ಯಕಾಂತಿ ಎಣ್ಣೆಗೆ ಕೇವಲ 86 ರೂ. ವೆಚ್ಚ ಮಾಡಬೇಕು. ವಾಸ್ತವದಲ್ಲಿ ಉಕ್ರೇನ್ - ರಷ್ಯಾ ಯುದ್ಧದಿಂದ ಸೂರ್ಯಕಾಂತಿ ಎಣ್ಣೆ ಲೀಟರ್ ಬೆಲೆ 200 ರೂ. ಗಡಿ ದಾಟಿದೆ. ಒಂದು ಲೀಟರ್ ಗೆ ಹೆಚ್ಚುವರಿಯಾಗಿ 114 ರೂ. ನಂತೆ ಕನಿಷ್ಠ 300 ಮಕ್ಕಳು ಇರುವ ಶಾಲೆಯಲ್ಲಿ ತಿಂಗಳಿಗೆ 3,900 ರೂ. ಹೆಚ್ಚುವರಿಯಾಗಿ ಭರಿಸಬೇಕಾಗಿದೆ. ಈ ಹೊರೆಯನ್ನು ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರೇ ಭರಿಸುವಂತಾಗಿದೆ.
ಸೂರ್ಯಕಾಂತಿ ಎಣ್ಣೆ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿರುವ ಬಗ್ಗೆ ಎಚ್ಚೆತ್ತ ಸಾರ್ವಜನಿಕ ಶಿಕ್ಷಣ ಇಲಾಖೆ ಫೆ. 22 ರಿಂದ ಏಪ್ರಿಲ್ ತಿಂಗಳವರೆಗೂ ಬಿಸಿಯೂಟ ಕಾರ್ಯಕ್ರಮ ನಿಲ್ಲದಂತೆ ಅಗತ್ಯ ಕ್ರಮ ಜರುಗಿಸುವಂತೆ ಜ್ಞಾಪನಾ ಪತ್ರ ಹೊರಡಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಆರ್. ವಿಶಾಲ್ ಹೊರಡಿಸಿರುವ ಜ್ಞಾಪನಾ ಪತ್ರದ ಪ್ರಕಾರ, ಕಾರಣಾಂತರಗಳಿಂದ ಸೂರ್ಯಕಾಂತಿ ಎಣ್ಣೆ ಜಿಲ್ಲಾವಾರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಶಾಲೆಗಳಲ್ಲಿ ಬಿಸಿಯೂಟ ಕಾರ್ಯಕ್ರಮ ನಿಲ್ಲದಂತೆ ಅಡುಗೆ ಎಣ್ಣೆ ವ್ಯತ್ಯಯವಾದರೂ, ಲಭ್ಯವಿರುವ ಪರಿವರ್ತನಾ ವೆಚ್ಚ ಬಳಿಸಿಕೊಂಡು ನಿಯಾಮನುಸಾರ ಮುಕ್ತ ಮಾರುಕಟ್ಟೆಯಲ್ಲಿ ದೊರೆಯುವ ಖಾದ್ಯ ತೈಲ ಅಡುಗೆ ಎಣ್ಣೆ ಖರೀದಿಸಲು ಸೂಚಿಸಲಾಗಿದೆ. ಈ ಮೂಲಕ ಬಿಸಿಯೂಟ ಕಾರ್ಯಕ್ರಮ ನಿಲ್ಲದಂತೆ ಕ್ರಮ ಜರುಗಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ.

ವಾಸ್ತವದಲ್ಲಿ ಬಿಸಿಯೂಟ ಯೋಜನೆ ಜಾರಿಗೊಳಿಸಲು ಸೂರ್ಯಕಾಂತಿ ಎಣ್ಣೆ ಖರೀದಸಲಾಗದೇ ಶಾಲಾ ಮುಖ್ಯ ಶಿಕ್ಷಕರು ಪರಿತಪಿಸುವಂತಾಗಿದೆ. ಶಿಕ್ಷಣ ಇಲಾಖೆ ನಿಗದಿ ಪಡಿಸಿರುವ 86 ರೂ.ನಿಂದ ಯಾವ ಅಡುಗೆ ಎಣ್ಣೆ ಖರೀದಿಸಲಾಗದ ಸ್ಥಿತಿ ನಿರ್ಮಾಣವಾಗಿದೆ. ಪಾಮ್ ಆಯಿಲ್ ಲೀಟರ್ ದರ 175 ರೂ. ಇದೆ, ಇನ್ನು ಕಡಲೆಕಾಯಿ ಎಣ್ಣೆ (ಶುದ್ಧ ) ಲೀಟರ್ 300 ರ ಆಜುಬಾಜಿನಲ್ಲಿದೆ. ಕಡಿಮೆ ದರಕ್ಕೆ ಸಿಗುತ್ತಿದ್ದ ಸೂರ್ಯಕಾಂತಿ ಎಣ್ಣೆ ದರ ಲೀಟರ್ 200 ರೂ. ಗಡಿ ದಾಟಿದ್ದು, ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರು ಹೊರೆ ಭರಿಸುವಂತಾಗಿದೆ. ಈ ಬಗ್ಗೆ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರು ಕೆಲ ಮಾಧ್ಯಮಗಳ ಜತೆ ಅಳಲು ತೋಡಿಕೊಂಡಿದ್ದಾರೆ.

ಕೊರೊನಾ ದಿಂದ ಶಾಲೆಗಳು ಪೂರ್ಣ ಪ್ರಮಾಣದಲ್ಲಿ ತೆರೆದಿರಲಿಲ್ಲ. ಹೀಗಾಗಿ ಮಾ. 31 ಕ್ಕೆ ಮುಗಿಯುತ್ತಿದ್ದ ಶೈಕ್ಷಣಿಕ ವರ್ಷವನ್ನು ಈ ಭಾರಿ ಏ. 15 ರ ವರೆಗೆ ವಿಸ್ತರಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ ಹೀಗಾಗಿ ಏ. 10 ರ ವರೆಗೂ ಶಾಲೆಗಳು ಕಾರ್ಯ ನಿರ್ವಹಿಸಲಿದ್ದು, ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಮುಂದುವರೆಸಬೇಕಿದೆ. ಶಾಲೆಗಳಿಗೆ ಸೂರ್ಯಕಾಂತಿ ಎಣ್ಣೆ ಸರಬರಾಜು ಮಾಡುವ ಗುತ್ತಿಗೆಯನ್ನು ಅದಾನಿ ವಿಲ್ಮಾರ್, ಕರ್ನಾಟಕ ಪ್ರಾದೇಶಿಕ ಎಣ್ಣೆ ಬೀಜ ಬೆಳೆಗಾರರ ಒಕ್ಕೂಟಕ್ಕೆ ನೀಡಲಾಗಿದೆ. ರಷ್ಯಾ - ಉಕ್ರೇನ್ ಯುದ್ಧದ ನೆಪ ಇಟ್ಟುಕೊಂಡು ಸೂರ್ಯಕಾಂತಿ ಎಣ್ಣೆ ಸರಬರಾಜು ಮಾಡುವಲ್ಲಿ ವ್ಯತ್ಯಯ ಉಂಟಾಗುತ್ತಿದೆ. ಹೀಗಾಗಿ ಸರ್ಕಾರಿ ಮುಖ್ಯ ಶಾಲಾ ಶಿಕ್ಷಕರು ಗೊಂದಲಕ್ಕೆ ಒಳಗಾಗಿದ್ದಾರೆ. ಪರಿವರ್ತನಾ ವೆಚ್ಚ ಸರಿದೂಗಿಸಲು ಜ್ಞಾಪನಾ ಪತ್ರದಲ್ಲಿ ಉಲ್ಲೇಖಿಸಿದ್ದರೂ, ಅದರ ಬಗ್ಗೆ ಸ್ಪಷ್ಟತೆ ಇಲ್ಲದಿರವುದು ಈ ಸಮಸ್ಯೆಯ ಮೂಲವಾಗಿದೆ.
Recommended Video
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications