ನಾವು ಅದರ ಬಗ್ಗೆ ಮಾತನಾಡಿದರೆ ತೇಜೋವಧೆ ಮಾಡಿದಂತೆ: ಸೊಸೆ ಆರೋಪಕ್ಕೆ S.ನಾರಾಯಣ್ ಪ್ರತಿಕ್ರಿಯೆ
ಬೆಂಗಳೂರು, ಸೆಪ್ಟಂಬರ್ 11: ಖ್ಯಾತ ನಿರ್ದೇಶಕ, ಕಲಾಸಾಮ್ರಾಟ್ ಎಸ್.ನಾರಾಯಣ್ ಮತ್ತವರ ಕುಟುಂಸ್ಥರ ಮೇಲೆ ಗುರುತರ ಆರೋಪ ಕೇಳಿ ಬಂದಿದೆ. ಸ್ವತಃ ಪುತ್ರ ಪವನ್ ಪತ್ನಿಯೇ (ಸೊಸೆ) ಅತ್ತೆ, ಮಾವ ಹಾಗೂ ಪತಿ ಮೇಲೆ ಆರೋಪ ಮಾಡಿದ್ದರಿಂದ FIR ದಾಖಲಾಗಿದೆ. ಈ ಆರೋಪ ಕುರಿತು ಎಸ್. ನಾರಾಯಣ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅವರು ಹೇಳಿದ್ದೇನು, ಅಸಲಿಗೆ ಸೊಸೆ ಮನೆಬಿಟ್ಟು ಹೋಗಿದ್ದು ಯಾವಾಗ? ಇಲ್ಲಿದೆ ಮಾಹಿತಿ.
ತಮ್ಮ ಮೇಲಿನ ಆರೋಪ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್. ನಾರಾಯಣ್ ಅವರು, ಸೊಸೆಗೆ ನಾವು ಅವರಿಗೆ ಹಿಂಸೆ ಕೊಟ್ಟಿದ್ದೇವೆ ಎಂದು ಒಂದು ವರ್ಷದ ಬಳಿಕ ಅವರು ದೂರು ನೀಡಿದ್ದಾರೆ. ಈ ದೂರು ಕೋರ್ಟ್ಗೆ ಹೋಗಿದೆ. ಅದರ ಬಗ್ಗೆ ನಾನು ಮಾತನಾಡಿದರೆ ಅವರಿಗೇ ಅವಮಾನ ಮಾಡಿದಂತಾಗುತ್ತದೆ. ನಾನು ಹೆಣ್ಣುಮಕ್ಕಳಿಗೆ ಗೌರವ ಕೊಡುತ್ತೇನೆ ಎಂದಿದ್ದಾರೆ.

ಪಾಪಾ ಹೆಣ್ಮಗು ಅಲ್ವಾ. ಅದರ ಬಗ್ಗೆ ಮಾತನಾಡಿದರೆ ಅವರಿಗೆ ತೇಜೋವಧೆ ಮಾಡಿದಂತಾಗುತ್ತದೆ. ವರದಕ್ಷಿಣಿ ಕಿರುಕುಳ ಆರೋಪ ಪ್ರಶ್ನೆಗೆ ಉತ್ತರಿಸಿದ ಅವರು, ಈ ದೇಶದಲ್ಲಿ ಎಲ್ಲ ಹೆಣ್ಣುಮಕ್ಕಳು ಮಾಡುವುದು ಅದೊಂದೆ ತಾನೆ. ನನ್ನ ವ್ಯಕ್ತಿತ್ವ, ನಾನು ಏನೆಂಬುದು ಎಲ್ಲರಿಗೂ ಗೊತ್ತಿದೆ. ಮಹಿಳೆಯರನ್ನು ಗೌರವದಿಂದ ಕಾಣುವಂತವರು ನಾವು ಎಂದು ಅವರು ಹೇಳಿದ್ದಾರೆ.
ಸೊಸೆ ಮನೆ ಬಿಟ್ಟು ಹೋಗಿಯೇ ಒಂದು ವರ್ಷವಾಯಿತು. ಈಗ ಹಲ್ಲೆ ಮಾಡಿದ್ದೇವೆ ಎಂದು ದೂರು ಕೊಟ್ಟಿದ್ದಾರೆ. ದೇಶದಲ್ಲಿ ರೆಗ್ಯೂಲರ್ ಆಗಿ ಮಾಡೋದು ಇದೇ ತಾನೆ. ಅವರಿಗೆ ಎಲ್ಲಿ ಸುಃಖ, ಸಂತೋಷ ಸಿಗುತ್ತೋ ಅಲ್ಲಿಗೆ ಹೋಗಿದ್ದಾರೆ ಎನ್ನುವ ಮೂಲಕ ತಮ್ಮ ಮೇಲಿನ ಆರೋಪವನ್ನು ಅವರು ನಿರಾಕರಿಸಿದ್ದಾರೆ.
ಎಸ್.ನಾರಾಯಣ ಕುಟುಂಬದ ಮೇಲಿನ ಆರೋಪವೇನು?
ತನ್ನ ಪತಿ ಪವನ್ ನಾರಾಯಣ್ ಅಷ್ಟಾಗಿ ಓದಿಕೊಂಡಿಲ್ಲ. ಅವರಿಗೆ ಹಾಗಾಗಿ ಕೆಲಸ ಸಿಕ್ಕಿರಲಿಲ್ಲ. ಕಲಾಸಾಮ್ರಾಟ್ ಸಿನಿಮಾ ಸಂಸ್ಥೆ ತೆಗೆದಿದ್ದರು. ಅದಕ್ಕಾಗಿ ಹತ್ತು ಲಕ್ಷ ಹಣವನ್ನು ನಾನು ನನ್ನ ತಾಯಿಯ ಚಿನ್ನಾಭರಣ ಮಾಡಿ ನೀಡಿದ್ದೆ. ಆದರೆ ಸಂಸ್ಥೆ ಲಾಸ್ ಆಯಿತು. ಖರ್ಚು ವೆಚ್ಚ ಸರಿದೂಗಿಸಲು ನಾನು ಮತ್ತೆ ಸಾಲ ಮಾಡಿ ನೀಡಿದ್ದೆ. ಮನೆ ಸಂಸಾರ ಜವಾಬ್ದಾರಿ ನಾನೇ ನೋಡಿಕೊಳ್ಳುತ್ತೇನೆ ಎಂದು ಸೊಸೆ ದೂರು ನೀಡಿದ್ದಾರೆ.
ಅಲ್ಲದೇ ಇಷ್ಟೆಲ್ಲ ಆದ ಮೇಲೂ ಹಣಕ್ಕೆ ಮತ್ತೆ ಬೇಡಿಕೆ ಇಟ್ಟಿದ್ದಾರೆ. ವರದಕ್ಷಿಣಿ ತರುವಂತೆ ಕಿರುಕುಳ ನೀಡಿ, ಹಲ್ಲೆ ಮಾಡಿ ಮನೆಯಿಂದ ಆಚೆ ಹಾಕಿದ್ದಾರೆ ಎಂದು ಪತಿ ಮತ್ತು ಅತ್ತೆ, ಕುಟುಂಬಸ್ಥರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಸ್.ನಾರಾಯಣ್ ಹಾಗೂ ಅವರ ಪುತ್ರ ಪವನ್ ಮೇಲೆ ಎಫ್ಐಆರ್ ದಾಖಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications