ರಾಜ್ಯ ಕಂಡ ಶ್ರೇಷ್ಠ ರಾಜಕಾರಣಿ ಎಸ್.ಆರ್.ಬೊಮ್ಮಾಯಿ
ಬೆಂಗಳೂರು, ಜು.4: ರಾಷ್ಟ್ರಪತಿ ಆಡಳಿತ ಹೇರುವ ಮೂಲಕ ರಾಜ್ಯ ಸರ್ಕಾರಗಳನ್ನು ಮಣಿಸುವ ಹುನ್ನಾರವನ್ನು ತಡೆಗಟ್ಟುವ ಸಂವಿಧಾನದ ಪರಿಚ್ಛೇದ 356 ರ ದುರ್ಬಳಕೆ ವಿರುದ್ಧ ಸುಪ್ರೀಂ ಕೋರ್ಟ್ ಪ್ರಕಟಿಸಿದ ಐತಿಹಾಸಿಕ ತೀರ್ಪು ಬೊಮ್ಮಾಯಿ ಅವರ ಹೆಸರನ್ನು ಶಾಶ್ವತವಾಗಿರಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಪ್ರತಿಭಾವಂತ ಸಂಸದೀಯ ಪಟುಗಳು ಪುಸ್ತಕ ಮಾಲೆಯ "ಎಸ್.ಆರ್. ಬೊಮ್ಮಾಯಿ" ಕುರಿತ ಪುಸ್ತಕ ಬಿಡುಗಡೆ ಮಾಡಿ ಮಾತನಾಡುತ್ತಿದ್ದರು.
1989 ರಲ್ಲಿ ಕೆಲವು ಶಾಸಕರು ಅಂದಿನ ರಾಜ್ಯಪಾಲರಿಗೆ ಬೊಮ್ಮಾಯಿ ಸರ್ಕಾರಕ್ಕೆ ಬೆಂಬಲ ಹಿಂಪಡೆದ ಪತ್ರ ನೀಡಿದ ಕೆಲವೇ ಗಂಟೆಗಳಲ್ಲಿ ಅವರ ಸರ್ಕಾರ ವಜಾ ಪ್ರಕರಣ ವಿರುದ್ಧ ಸಂವಿಧಾನ ಪೀಠ 1994 ರಲ್ಲಿ ಪ್ರಕಟಿಸಿದ ಈ ಮಹತ್ವದ ತೀರ್ಪು ಹಲವು ಸರ್ಕಾರಗಳಿಗೆ ಮರು ಜೀವ ದೊರಕಿಸಿ ಕೊಟ್ಟಿದೆ ಎಂದು ಮುಖ್ಯಮಂತ್ರಿಯವರು ನುಡಿದರು.
ಸಮಾರಂಭದಲ್ಲಿ ಎಸ್.ಆರ್. ಬೊಮ್ಮಾಯಿ ಅವರೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿಕೊಂಡ ಅವರು, ಬೊಮ್ಮಾಯಿ ಅವರು ಪಕ್ಷದೊಳಗಿನ ಜಗಳಗಳಲ್ಲಿ ರಾಜಿ ಮಾಡಿಸುವುದರಲ್ಲಿ ನಿಸ್ಸೀಮರಾಗಿದ್ದರು. ಆದರೆ ತಾವು ನಂಬಿದ ತತ್ವ ಸಿದ್ಧಾಂತಗಳೊಂದಿಗೆ ಅವರು ಎಂದಿಗೂ ರಾಜಿ ಮಾಡಿಕೊಳ್ಳಲಿಲ್ಲ ಎಂದು ನುಡಿದರು.
ಮಾನವತಾವಾದಿ ಎಂ.ಎನ್.ರಾಯ್ ಅವರ ಅನುಯಾಯಿಯಾಗಿದ್ದ ಬೊಮ್ಮಾಯಿ ಅವರು ಗ್ರಾಮೀಣ ಬದುಕು, ರೈತರ ಬಗ್ಗೆ ಕಾಳಜಿ ಹೊಂದಿದ್ದರಲ್ಲದೆ, ಈ ಬಗ್ಗೆ ಅಪಾರ ಜ್ಞಾನವನ್ನೂ ಹೊಂದಿದ್ದರು. ಸದನದಲ್ಲಿ ಚರ್ಚಿಸುವ ವಿಷಯಗಳ ಕುರಿತು ಆಳವಾದ ಅಧ್ಯಯನ ನಡೆಸಿ, ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಇಂದಿನ ಶಾಸಕರು ಈ ಅಧ್ಯಯನ ಶೀಲತೆಯನ್ನು ಬೆಳೆಸಿಕೊಂಡರೆ ಉತ್ತಮ ಸಂಸದೀಯ ಪಟುವಾಗಲು ಸಾಧ್ಯ ಎಂದು ಅವರು ಸಲಹೆ ನೀಡಿದರು.

ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಅವರು ಉತ್ತರ ಕರ್ನಾಟಕದ ಬಗೆಗಿನ ಬೊಮ್ಮಾಯಿ ಅವರ ಕಾಳಜಿಯನ್ನು ಶ್ಲಾಘಿಸಿದರು.
ವಿಧಾನ ಪರಿಷತ್ ಸಭಾಪತಿ ಶ್ರೀ ಡಿ.ಎಚ್. ಶಂಕರಮೂರ್ತಿ ಅವರು ತಾವು ಮೊದಲ ಬಾರಿ ಶಾಸಕನಾದಾಗ ಬೊಮ್ಮಾಯಿ ಅವರು ಸದನದಲ್ಲಿ ಮಾತನಾಡುವ ಬಗ್ಗೆ ಮಾರ್ಗದರ್ಶನ ನೀಡಿದ್ದನ್ನು ಸ್ಮರಿಸಿಕೊಂಡರು. ನನ್ನ ಅವಧಿಯಲ್ಲಿ ಬೊಮ್ಮಾಯಿ ಅವರ ಕುರಿತ ಪುಸ್ತಕ ಬಿಡುಗಡೆಯಾಗುತ್ತಿರುವುದು ನನ್ನ ಸೌಭಾಗ್ಯ ಎಂದು ನುಡಿದರು.
ಸಮಾರಂಭದಲ್ಲಿ ಸಚಿವರು, ಶಾಸಕರು, ಬೊಮ್ಮಾಯಿ ಅವರ ಪುತ್ರ ಶಾಸಕ ಬಸವರಾಜ ಬೊಮ್ಮಾಯಿ ಹಾಗೂ ಅವರ ಕುಟುಂಬದ ಇತರ ಸದಸ್ಯರು, ಹಿರಿಯ ಅಧಿಕಾರಿಗಳು ಹಾಗೂ ಪುಸ್ತಕದ ಲೇಖಕ ಚಂದ್ರಶೇಖರ ಬೆಳಗೆರೆ ಪಾಲ್ಗೊಂಡಿದ್ದರು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications