ದಲಿತ ನಾಯಕ ಅರಕೇರಿ ಅವರಿಗೆ ಅಂಬೇಡ್ಕರ್ ಪ್ರಶಸ್ತಿ
ಬೆಂಗಳೂರು, ಏಪ್ರಿಲ್ 15: ದಲಿತ ಸಮುದಾಯದ ಸಮಗ್ರ ಅಭಿವೃದ್ಧಿಗೆ ಹಾಗೂ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವ ಸಿದ್ದಾಂತಗಳನ್ನು ನಾಡಿಗೆ ಪರಿಚಯಿಸುವಲ್ಲಿ ತಮ್ಮನ್ನು ತಾವೇ ತೊಡಗಿಸಿಕೊಂಡಿರುವ ಮಾಜಿ ಡಾ: ಎಸ್.ಎಸ್. ಅರಕೇರಿ ಅವರಿಗೆ ಡಾ. ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಬುದ್ಧ, ಬಸವ ಹಾಗೂ ಡಾ: ಅಂಬೇಡ್ಕರ್ ತತ್ವರಾದಕರಾದ ಡಾ: ಎಸ್.ಎಸ್. ಅರಕೇರಿ ಅವರನ್ನು ಡಾ. ಅಂಬೇಡ್ಕರ್ ಅವರ 124 ನೇ ಜಯಂತೋತ್ಸವದ ಪ್ರಶಸ್ತಿಗಾಗಿ ಡಾ: ಸಿದ್ದಲಿಂಗಯ್ಯ ನೇತೃತ್ವದ ಸಮಿತಿ ಸರ್ವಾನುಮತದಿಂದ ಆಯ್ಕೆ ಮಾಡಿತ್ತು. ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಡಾ. ಎಸ್ .ಎಸ್ ಅರಕೇರಿ ಅವರಿಗೆ ಪ್ರಶಸ್ತಿ ಫಲಕ, ನೀಡಿ ಶಾಲು ಹೊದೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನಿಸಿದರು. [ಬಾಬಾಸಾಹೇಬ್ ಗೆ ಗೂಗಲ್ ನಮನ]

ಡಾ. ಸಿದ್ದಲಿಂಗಯ್ಯ ಅವರು ಆಯ್ಕೆ ಸಮಿತಿಯ ಮುಂದೆ ಸುಮಾರು 51 ಅರ್ಜಿಗಳು ಬಂದಿತ್ತು. ಆಯ್ಕೆಗಾಗಿ ಎರಡು ಸಭೆಗಳಲ್ಲಿ ಸದಸ್ಯರ ಸರ್ವಾನುಮತದ ಅಭಿಪ್ರಾಯದಂತೆ ಅರಕೇರಿ ಅವರನ್ನು ಆಯ್ಕೆ ಮಾಡಲಾಯಿತು ಎಂದು ಸಿದ್ದಲಿಂಗಯ್ಯ ಹೇಳಿದ್ದಾರೆ.
ಆಯ್ಕೆ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿದ್ದು ಸರ್ಕಾರದಿಂದ ಯಾವುದೇ ರೀತಿಯ ಒತ್ತಡಗಳು ಅಥವಾ ಹಸ್ತಕ್ಷೇಪ ಇರಲಿಲ್ಲ. ಈ ಸಂದರ್ಭದಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಎಚ್ ಆಂಜನೇಯ ಅವರು ಅರಕೇರಿ ಅವರು ಅಂಬೇಡ್ಕರ್ ಅನುಯಾಯಿಗಳು ಅವರ ಜೊತೆಯಲ್ಲೇ ಇದ್ದು ಅವರ ಹೋರಾಟದಲ್ಲಿ ಪಾಲ್ಗೊಂಡು ಶೋಷಿತರ ದನಿಯಾಗಿ ಕೆಲಸ ಮಾಡಿದ್ದಾರೆ ಎಂದರು.

ಈ ಸಾಲಿನಿಂದ ಒಬ್ಬರಿಗೆ ಮಾತ್ರ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಪ್ರಶಸ್ತಿ ಮೊತ್ತವು 5.00 ಲಕ್ಷ ರೂ. ಗಳಾಗಿದ್ದು ಬಂಗಾರದ ಪದಕವನ್ನು ಕೂಡ ನೀಡಿ ಗೌರವಿಸಲಾಗುತ್ತಿದೆ.
ಆಯ್ಕೆ ಸಮಿತಿಯ ಸದಸ್ಯರಾದ ಲಕ್ಷ್ಮೀನಾರಾಯಣ ನಾಗವಾರ, ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳಾದ ಮಂಜುನಾಥ ಪ್ರಸಾದ್, ಆಯುಕ್ತರಾದ ಶ್ರೀಮತಿ ಸಾವಿತ್ರಿ ಹಾಗೂ ಇತರೆ ಅಧಿಕಾರಿಗಳು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications