ದಲಿತ ನಾಯಕ ಅರಕೇರಿ ಅವರಿಗೆ ಅಂಬೇಡ್ಕರ್ ಪ್ರಶಸ್ತಿ
ಬೆಂಗಳೂರು, ಏಪ್ರಿಲ್ 15: ದಲಿತ ಸಮುದಾಯದ ಸಮಗ್ರ ಅಭಿವೃದ್ಧಿಗೆ ಹಾಗೂ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವ ಸಿದ್ದಾಂತಗಳನ್ನು ನಾಡಿಗೆ ಪರಿಚಯಿಸುವಲ್ಲಿ ತಮ್ಮನ್ನು ತಾವೇ ತೊಡಗಿಸಿಕೊಂಡಿರುವ ಮಾಜಿ ಡಾ: ಎಸ್.ಎಸ್. ಅರಕೇರಿ ಅವರಿಗೆ ಡಾ. ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಬುದ್ಧ, ಬಸವ ಹಾಗೂ ಡಾ: ಅಂಬೇಡ್ಕರ್ ತತ್ವರಾದಕರಾದ ಡಾ: ಎಸ್.ಎಸ್. ಅರಕೇರಿ ಅವರನ್ನು ಡಾ. ಅಂಬೇಡ್ಕರ್ ಅವರ 124 ನೇ ಜಯಂತೋತ್ಸವದ ಪ್ರಶಸ್ತಿಗಾಗಿ ಡಾ: ಸಿದ್ದಲಿಂಗಯ್ಯ ನೇತೃತ್ವದ ಸಮಿತಿ ಸರ್ವಾನುಮತದಿಂದ ಆಯ್ಕೆ ಮಾಡಿತ್ತು. ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಡಾ. ಎಸ್ .ಎಸ್ ಅರಕೇರಿ ಅವರಿಗೆ ಪ್ರಶಸ್ತಿ ಫಲಕ, ನೀಡಿ ಶಾಲು ಹೊದೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನಿಸಿದರು. [ಬಾಬಾಸಾಹೇಬ್ ಗೆ ಗೂಗಲ್ ನಮನ]

ಡಾ. ಸಿದ್ದಲಿಂಗಯ್ಯ ಅವರು ಆಯ್ಕೆ ಸಮಿತಿಯ ಮುಂದೆ ಸುಮಾರು 51 ಅರ್ಜಿಗಳು ಬಂದಿತ್ತು. ಆಯ್ಕೆಗಾಗಿ ಎರಡು ಸಭೆಗಳಲ್ಲಿ ಸದಸ್ಯರ ಸರ್ವಾನುಮತದ ಅಭಿಪ್ರಾಯದಂತೆ ಅರಕೇರಿ ಅವರನ್ನು ಆಯ್ಕೆ ಮಾಡಲಾಯಿತು ಎಂದು ಸಿದ್ದಲಿಂಗಯ್ಯ ಹೇಳಿದ್ದಾರೆ.
ಆಯ್ಕೆ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿದ್ದು ಸರ್ಕಾರದಿಂದ ಯಾವುದೇ ರೀತಿಯ ಒತ್ತಡಗಳು ಅಥವಾ ಹಸ್ತಕ್ಷೇಪ ಇರಲಿಲ್ಲ. ಈ ಸಂದರ್ಭದಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಎಚ್ ಆಂಜನೇಯ ಅವರು ಅರಕೇರಿ ಅವರು ಅಂಬೇಡ್ಕರ್ ಅನುಯಾಯಿಗಳು ಅವರ ಜೊತೆಯಲ್ಲೇ ಇದ್ದು ಅವರ ಹೋರಾಟದಲ್ಲಿ ಪಾಲ್ಗೊಂಡು ಶೋಷಿತರ ದನಿಯಾಗಿ ಕೆಲಸ ಮಾಡಿದ್ದಾರೆ ಎಂದರು.

ಈ ಸಾಲಿನಿಂದ ಒಬ್ಬರಿಗೆ ಮಾತ್ರ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಪ್ರಶಸ್ತಿ ಮೊತ್ತವು 5.00 ಲಕ್ಷ ರೂ. ಗಳಾಗಿದ್ದು ಬಂಗಾರದ ಪದಕವನ್ನು ಕೂಡ ನೀಡಿ ಗೌರವಿಸಲಾಗುತ್ತಿದೆ.
ಆಯ್ಕೆ ಸಮಿತಿಯ ಸದಸ್ಯರಾದ ಲಕ್ಷ್ಮೀನಾರಾಯಣ ನಾಗವಾರ, ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳಾದ ಮಂಜುನಾಥ ಪ್ರಸಾದ್, ಆಯುಕ್ತರಾದ ಶ್ರೀಮತಿ ಸಾವಿತ್ರಿ ಹಾಗೂ ಇತರೆ ಅಧಿಕಾರಿಗಳು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications