6 ತಿಂಗಳೊಳಗೆ ಕನ್ನಡ ಕಲಿಯದಿದ್ದರೆ ಕರ್ತವ್ಯದಿಂದ ಬಿಡುಗಡೆ
ಬೆಂಗಳೂರು, ಆಗಸ್ಟ್ 08: 'ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅನ್ಯಭಾಷಿಕ ಅಧಿಕಾರಿಗಳು 6 ತಿಂಗಳ ಒಳಗೆ ಕನ್ನಡ ಕಲಿಯಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ತಾಕೀತು ಮಾಡಿದೆ.
6 ತಿಂಗಳೊಳಗೆ ಕನ್ನಡ ಕಲಿಯದಿದ್ದರೆ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು' ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸೂಚಿಸಿದ್ದು, ಈ ಕುರಿತು ರಾಷ್ಟ್ರೀಕೃತ ಬ್ಯಾಂಕ್, ಷೆಡ್ಯೂಲ್ಡ್ ಬ್ಯಾಂಕ್ ಹಾಗೂ ಗ್ರಾಮೀಣ ಬ್ಯಾಂಕ್ ಗಳ ಪ್ರಾಂತೀಯ ಮುಖ್ಯಸ್ಥರಿಗೆ ಕನ್ನಡ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ಧರಾಮಯ್ಯ ಸೋಮವಾರ ಪತ್ರ ಬರೆದಿದ್ದಾರೆ,

'ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಬ್ಯಾಂಕ್ಗಳ ಆಡಳಿತ ವ್ಯವಸ್ಥೆಯಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ಸಿಗಬೇಕು' ಎಂದು ಸ್ಪಷ್ಟಪಡಿಸಿದ್ದಾರೆ.
ಕನ್ನಡ ಭಾಷೆ ಕಲಿಯದ ಅನ್ಯಭಾಷಿಕ ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆ ಮಾಡಲು ನೇಮಕಾತಿ ನಿಯಮದಲ್ಲೂ ಅವಕಾಶ ಇದೆ' ಎಂಬುವುದನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
https://t.co/uBteZ9YkQW ಅನ್ಯಭಾಷಿಕ ಅಧಿಕಾರಿ/ಸಿಬ್ಬಂದಿ ವರ್ಗದವರು ನೇಮಕಾತಿ ಹೊಂದಿದ ಆರುತಿಂಗಳೊಳಗೆ ಕನ್ನಡಕಲಿಯದಿದ್ದಲ್ಲಿ ಸೇವೆಯಿಂದ ಬಿಡುಗಡೆಗೊಳಿಸಿ-ಎಸ್.ಜಿಸಿ pic.twitter.com/TxDwvYappN
— ಕ.ಅ.ಪ್ರಾ. (@kdabengaluru) August 7, 2017
'ಹಲವಾರು ಬ್ಯಾಂಕ್ಗಳು ಸ್ಥಳೀಯ ಭಾಷೆಯನ್ನು ಅನುಷ್ಠಾನಗೊಳಿಸುವ ಬದ್ಧತೆ ತೋರುತ್ತಿಲ್ಲ. ಬ್ಯಾಂಕಿನ ಆಡಳಿತ ವ್ಯವಹಾರದಲ್ಲಿ ತ್ರಿಭಾಷಾ ಸೂತ್ರದ ಅನ್ವಯ ಸ್ಥಳೀಯ ಭಾಷೆಯಲ್ಲಿ ಮಾಹಿತಿ ನೀಡುತ್ತಿಲ್ಲ.

ಇದರಿಂದ ಬಹಳಷ್ಟು ಬಡವರು ಹಾಗೂ ಗ್ರಾಮೀಣ ಜನರು ಬ್ಯಾಂಕಿಂಗ್ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ' ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
'ಈ ಸೂಚನೆಗಳನ್ನು ಪಾಲಿಸಿರುವ ಬಗ್ಗೆ ಪ್ರಾಧಿಕಾರಕ್ಕೆ ವರದಿ ನೀಡಬೇಕು. ಶೀಘ್ರದಲ್ಲೇ ಬ್ಯಾಂಕ್ಗಳಿಗೆ ಭೇಟಿ ನೀಡಿ ಕನ್ನಡ ಅನುಷ್ಠಾನದ ಕುರಿತು ಪರಿಶೀಲಿಸುತ್ತೇವೆ' ಎಂದೂ ಅವರು ತಿಳಿಸಿದ್ದಾರೆ.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications