ಅಡಿಕೆ, ಕಾಫಿ, ತೆಂಗು ಬೆಳೆಗಾರರಿಗೆ ಸದಾನಂದ ಗೌಡ ಅಭಯ
ಬೆಂಗಳೂರು, ಸೆಪ್ಟೆಂಬರ್, 19: ಕಾಫಿ ಮತ್ತು ಅಡಿಕೆ ಬೆಳೆಗಳಿಗೆ ತಗುಲಿರುವ ರೋಗ ಹಾಗೂ ಬೆಲೆ ಕುಸಿತದ ಪರಿಣಾಮ ಚಿಕ್ಕಮಗಳೂರು ಸೇರಿದಂತೆ ಈ ಬೆಳೆ ಆಧರಿತ ಪ್ರದೇಶದ ಜನ ಸಂಕಷ್ಟಕ್ಕೆ ಸಿಲುಕಿದ್ದು ಪರಿಹಾರ ಕ್ರಮಗಳ ಕುರಿತು ಕೇಂದ್ರ ವಾಣಿಜ್ಯ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೌಡ, ಕಾಫಿ ಬೆಳೆಗೆ ಒಂದೆಡೆ ರೋಗ, ಮತ್ತೂಂದೆಡೆ ಬೆಲೆ ಏರಿಳಿತ. ಅಡಿಕೆಗೆ ಕೊಳೆರೋಗ, ಇನ್ನೊಂದೆಡೆ ಬೆಲೆ ಕುಸಿತ ಸಮಸ್ಯೆ ಕಾಡುತ್ತಿದೆ. ತೆಂಗು ಮತ್ತು ಭತ್ತದ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಎಲ್ಲ ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡುತ್ತೇನೆ ಎಂದು ತಿಳಿಸಿದ್ದಾರೆ.[ಅಡಿಕೆ ಧಾರಣೆ ಕುಸಿತಕ್ಕೆ ಸಾರ್ಕ್ ಒಕ್ಕೂಟ ಕಾರಣ ಅಂದ್ರೆ ನಂಬ್ತೀರಾ?]

ಗುಟ್ಕಾ ನಿಷೇಧ ಗುಮ್ಮ
ಮತ್ತೊಮ್ಮೆ ಗುಟ್ಕಾ ನಿಷೇಧದ ಆತಂಕ ಅಡಿಕೆ ಬೆಳೆಗಾರರಿಗೆ ಎದುರಾಗಿದೆ. ಇದನ್ನು ನಿರ್ವಹಿಸಲು ಮತ್ತು ಪರ್ಯಾಯ ಕ್ರಮಗಳ ಕುರಿತು ಚರ್ಚೆ ಮಾಡಲು ಎಲ್ಲಮ ರಾಜ್ಯದ ಎಲ್ಲ ಸಂಸದರೊಂದಿಗೆ ಚರ್ಚೆ ಮಾಡುತ್ತೇನೆ. ಯಾವ ಸಮಸ್ಯೆ ಎದುರಾದರೂ ಬೆಳೆಗಾರರ ಮೇಲೆ ಕೆಟ್ಟ ಪರಿಣಾಮ ಬೀರದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.[ಅರೇಕಾ ಟೀ ಮಾರುಕಟ್ಟೆಗೆ, ನೀವು ಸ್ವಾದ ನೀಡಿದ್ರಾ!]
ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಚಿತ್ರದುರ್ಗ, ತುಮಕೂರು ಸೇರಿದಂತೆ ಅಡಿಕೆ ಮತ್ತು ತೆಂಗು ಬೆಳೆಯುವ ಪ್ರದೇಶದ ಜನರು ಬೆಲೆ ಕುಸಿತದ ಆತಂಕಕ್ಕೆ ಸಿಲುಕಿದ್ದಾರೆ. ರಾಜ್ಯದ ಸಂಸದರು ಬೆಂಬಲ ಬೆಲೆಗೆ ಮನವಿ ಮಾಡಿದ್ದರೂ ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ ಯಾವ ಪ್ರಕಾರದ ಸ್ಪಂದನೆಯೂ ದೊರೆತಿಲ್ಲ. ಇದೀಗ ಖುದ್ದು ಕಾನೂನು ಸಚಿವರೇ ಅಭಯ ನೀಡಿರುವುದು ಬೆಳೆಗಾರರಲ್ಲಿ ಆತ್ಮ ಸ್ಥೈರ್ಯ ಹೆಚ್ಚಳ ಮಾಡಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications