Get Updates
Get notified of breaking news, exclusive insights, and must-see stories!

ಸದಾನಂದ ಗೌಡ VS ಯತ್ನಾಳ್: ಕರ್ನಾಟಕ ಬಿಜೆಪಿಯಲ್ಲಿ ಶಿಸ್ತಿಲ್ಲ ಅಂತಿದ್ದಾರೆ ಮಾಜಿ ಮುಖ್ಯಮಂತ್ರಿ!

ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕದ ಬಿಜೆಪಿ ನಾಯಕರಿಗೆ ಬಿಸಿ ತುಪ್ಪವಾಗಿದ್ದಾರೆ. ತಮ್ಮದೇ ಪಕ್ಷದ ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸುತ್ತಾ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಖತ್ ಸುದ್ದಿಯಲ್ಲಿದ್ದಾರೆ. ಆದ್ರೆ ಈ ಸಮಯದಲ್ಲೇ ಮಾಜಿ ಸಿಎಂ ಸದಾನಂದ ಗೌಡ, ಸ್ಫೋಟಕ ಹೇಳಿಕೆ ನೀಡಿದ್ದಾರೆ. ಹಾಗಾದರೆ ಸದಾನಂದ ಗೌಡರು ಹೇಳಿದ್ದೇನು? ಕರ್ನಾಟಕ ಬಿಜೆಪಿಯಲ್ಲಿ ಶಿಸ್ತಿಲ್ಲ ಎಂದಿದ್ದೇಕೆ ಮಾಜಿ ಸಿಎಂ?

ಇನ್ನೇನು 2024ರ ಲೋಕಸಭೆ ಚುನಾವಣೆ ಹತ್ತಿರ ಬಂದೇ ಬಿಟ್ಟಿದೆ. ಹೀಗಾಗಿ ನಿರೀಕ್ಷೆ ಕೂಡ ಡಬಲ್ ಆಗಿದೆ. ಅದರಲ್ಲೂ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ, 2024ರ ಲೋಕಸಭೆ ಚುನಾವಣೆ ಅಗ್ನಿಪರೀಕ್ಷೆ ಎನ್ನಬಹುದು. ಹೀಗಾಗಿ ಈ ಚುನಾವಣೆಯಲ್ಲಿ ಭರ್ಜರಿ ಗೆಲುವನ್ನ ಸಾಧಿಸಲು ಸಿಕ್ಕಾಪಟ್ಟೆ ಎಫರ್ಟ್ ಹಾಕುತ್ತಿದ್ದಾರೆ ಬಿಜೆಪಿ ನಾಯಕರು.

Sadananda Gowda Reacted Against Basanagouda Patil Yatnal Statement

ಹೀಗಿದ್ದಾಗಲೇ ಕರ್ನಾಟಕ ಕೂಡ 28 ಲೋಕಸಭಾ ಕ್ಷೇತ್ರಗಳನ್ನು ಹೊಂದಿದೆ. ಈ ಕಾರಣಕ್ಕೆ ಇಲ್ಲಿಂದ ಸಾಧ್ಯವಾದಷ್ಟು ಹೆಚ್ಚು ಸ್ಥಾನ ಗೆದ್ದು ಹೋಗಬೇಕಾಗಿದೆ ಬಿಜೆಪಿ. ಹೀಗೆ ಇಷ್ಟೆಲ್ಲಾ ಪ್ರಯತ್ನದ ನಡುವೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ನೀಡುತ್ತಿರುವ ಹೇಳಿಕೆ ಬಿರುಗಾಳಿ ಎಬ್ಬಿಸಿದೆ. ಆ ಬಗ್ಗೆ ಮಾಜಿ ಸಿಎಂ ಸದಾನಂದ ಗೌಡ ಮಾತನಾಡಿದ್ದಾರೆ. ಹಾಗಾದ್ರೆ ಇದೀಗ ಯತ್ನಾಳ್ ಬಗ್ಗೆ ಸದಾನಂದ ಗೌಡ ಹೇಳಿದ್ದೇನು?

ಬಿಜೆಪಿ ಒಳಗೆ ಶಿಸ್ತು ಇಲ್ಲವಾ?

ಸದಾನಂದ ಗೌಡ ಅವರು ಈಗಾಗಲೇ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು, ಹೀಗಾಗಿ ಸಿಕ್ಕಾಪಟ್ಟೆ ಕುತೂಹಲ ಮೂಡಿದೆ. ಹೀಗಿದ್ದಾಗಲೇ ನಿನ್ನೆಯಷ್ಟೇ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಬಿಜೆಪಿ ರಾಜ್ಯ ನಾಯಕರ ವಿರುದ್ಧವೇ ಭ್ರಷ್ಟಾಚಾರ ಆರೋಪ ಹೊರಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸದಾನಂದ ಗೌಡ ಅವರು ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಬೇಸರ ಹೊರಹಾಕಿದ್ದಾರೆ. ಅಲ್ಲದೆ ಪಕ್ಷದ ಕಾರ್ಯಕರ್ತರು ಈ ಕುರಿತಾಗಿ ತಮ್ಮನ್ನು ಪ್ರಶ್ನೆ ಮಾಡುತ್ತಿರುವ ಬಗ್ಗೆ ಸದಾನಂದ ಗೌಡ ಮಾಹಿತಿ ನೀಡಿದ್ದಾರೆ.

Sadananda Gowda Reacted Against Basanagouda Patil Yatnal Statement

ಕಾರ್ಯಕರ್ತರ ಪ್ರಶ್ನೆಗೆ ಏನ್ ಹೇಳೋದು?

ಅಂದಹಾಗೆ ಈಗ ಕಾರ್ಯಕರ್ತರು ಕೇಳುತ್ತಿರುವ ಪ್ರಶ್ನೆ ಬಗ್ಗೆ, ಪ್ರಸ್ತಾಪ ಮಾಡಿರುವ ಮಾಜಿ ಸಿಎಂ ಸದಾನಂದ ಗೌಡ ಅವರು. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಿ ಇಷ್ಟುದಿಗಳೇ ಕಳೆದರೂ ಶಿಸ್ತು ಮೂಡಿಲ್ಲ. ಈ ಬಗ್ಗೆ ಕಾರ್ಯಕರ್ತರು ಪ್ರಶ್ನೆ ಮಾಡ್ತಿದ್ದಾರೆ. ಕೇಂದ್ರದಿಂದ ನಾಯಕರು ಎಲ್ಲಾ ಬೆಳವಣಿಗೆ ಬಗ್ಗೆ ಚರ್ಚೆ ಮಾಡುತ್ತಿಲ್ವಾ? ಎಂದು ಖುದ್ದು, ಕರ್ನಾಟಕ ಬಿಜೆಪಿ ಕಾರ್ಯಕರ್ತರು ಕೇಳ್ತಿದ್ದಾರೆ ಎಂದಿದ್ದಾರೆ ಮಾಜಿ ಸಿಎಂ. ಈ ಮೂಲಕ ಕರ್ನಾಟಕ ಬಿಜೆಪಿ ಒಳಗೆ ಎದ್ದ ಅಸಮಾಧಾನದ ಬೆಂಕಿ ಮತ್ತಷ್ಟು ಸ್ಫೋಟಗೊಳ್ಳವ ಸೂಚನೆ ಸಿಕ್ಕಿದೆ.

ಶಾಸಕ ಯತ್ನಾಳ್ ವಿರುದ್ಧ ಕ್ರಮ?

ಇನ್ನು ಮತ್ತೊಂದು ಕಡೆ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವರ್ತನೆ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ರೊಚ್ಚಿಗೆದ್ದಿದ್ದಾರೆ. ಸಾಕಷ್ಟು ನಾಯಕರು ಈ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದು, ಶಿಸ್ತು ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಮೂಲಕ ಯತ್ನಾಳ್ ವಿರುದ್ಧವು ಕ್ರಮ ಪಕ್ಕಾನಾ? ಎಂಬ ಕುತೂಹಲ ಹೆಚ್ಚಾಗಿದೆ. ಒಟ್ನಲ್ಲಿ ಲೋಕಸಭೆ ಚುನಾವಣೆಗೆ ಈಗ ದಿನಗಣನೆ ಆರಂಭವಾಗಿರುವ ಸಮಯದಲ್ಲೇ, ಕರ್ನಾಟಕ ಬಿಜೆಪಿಯಲ್ಲಿ ಸಂಚಲನ ಸೃಷ್ಟಿ ಆಗಿದೆ. ಹೀಗಾಗಿ ಬಿಜೆಪಿ ಕೇಂದ್ರ ನಾಯಕರು ಏನ್ ಮಾಡ್ತಾರೆ? ಅಂತ ಕಾದು ನೋಡಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+